AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಖರ್ಗೆ ಪತ್ರ ಬರೆದ ನಂತರವೂ ರಾಹುಲ್ ಗಾಂಧಿಯನ್ನು ಪಪ್ಪು ಎಂದು ಗೇಲಿ ಮಾಡಿದ ಕೇಂದ್ರ ಸಚಿವ

“ಅವರು (ಕಾಂಗ್ರೆಸ್) ಅವರನ್ನು (ಗಾಂಧಿ) (ಲೋಕಸಭೆಯಲ್ಲಿ) ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು. ಆದರೆ ‘ಪಪ್ಪು’, ‘ಪಪ್ಪು’ ಹೀ ರಹಾ (ಪಪ್ಪು ಪಪ್ಪುವಾಗಿಯೇ ಉಳಿದುಬಿಟ್ಟರು). ಇತರರಿಗೆ ಉಪನ್ಯಾಸ ನೀಡುವ ಬದಲು ಮಲ್ಲಿಕಾರ್ಜುನ ಖರ್ಗೆ ‘ಪಪ್ಪು’ಗೆ ಕಲಿಸಬೇಕು’’ ಎಂದು ಎಎನ್ಐ ಜತೆ ಮಾತನಾಡಿದ ಕೇಂದ್ರ ಸಚಿವ ಬಿಟ್ಟು ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಖರ್ಗೆ ಪತ್ರ ಬರೆದ ನಂತರವೂ ರಾಹುಲ್ ಗಾಂಧಿಯನ್ನು ಪಪ್ಪು ಎಂದು ಗೇಲಿ ಮಾಡಿದ ಕೇಂದ್ರ ಸಚಿವ
ರವನೀತ್ ಸಿಂಗ್ ಬಿಟ್ಟು
ರಶ್ಮಿ ಕಲ್ಲಕಟ್ಟ
|

Updated on: Sep 17, 2024 | 8:49 PM

Share

ದೆಹಲಿ ಸೆಪ್ಟೆಂಬರ್ 17: ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಬಿಜೆಪಿಯ ಕೆಲವು ಸದಸ್ಯರು ಇತ್ತೀಚೆಗೆ ನೀಡಿರುವ ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಖರ್ಗೆ ಪತ್ರ ಬರೆದ ಬೆನ್ನಲ್ಲೇ,  ರಾಹುಲ್ ಗಾಂಧಿಯನ್ನು ನಂಬರ್ ಒನ್ ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣರಾದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಮತ್ತೊಮ್ಮೆ ಪಪ್ಪು ಎಂದು ಗೇಲಿ ಮಾಡಿದ್ದಾರೆ.

“ಅವರು (ಕಾಂಗ್ರೆಸ್) ಅವರನ್ನು (ಗಾಂಧಿ) (ಲೋಕಸಭೆಯಲ್ಲಿ) ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು. ಆದರೆ ‘ಪಪ್ಪು’, ‘ಪಪ್ಪು’ ಹೀ ರಹಾ (ಪಪ್ಪು ಪಪ್ಪುವಾಗಿಯೇ ಉಳಿದುಬಿಟ್ಟರು). ಇತರರಿಗೆ ಉಪನ್ಯಾಸ ನೀಡುವ ಬದಲು ಮಲ್ಲಿಕಾರ್ಜುನ ಖರ್ಗೆ ‘ಪಪ್ಪು’ಗೆ ಕಲಿಸಬೇಕು’’ ಎಂದು ಎಎನ್ಐ ಜತೆ ಮಾತನಾಡಿದ ಬಿಟ್ಟು ಹೇಳಿದ್ದಾರೆ. ನನ್ನ ಕಾಳಜಿಯು ರಾಜಕಾರಣಿಯಾಗಿ ಅಲ್ಲ, ಆದರೆ ಸಿಖ್ ಆಗಿ ಎಂದು ಬಿಟ್ಟು ಹೇಳಿದ್ದಾರೆ.

ಬಿಟ್ಟು ಹೇಳಿದ್ದೇನು?

ರಾಹುಲ್ ಗಾಂಧಿಯವರು ಇತ್ತೀಚೆಗೆ ಯುನೈಟೆಡ್ ಸ್ಟೇಟ್ಸ್‌ಗೆ ಮೂರು ದಿನಗಳ ಭೇಟಿ ನೀಡಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಅವರ ಚೊಚ್ಚಲ ವಿದೇಶಿ ಪ್ರವಾಸದಲ್ಲಿ ರಾಹುಲ್, ಸಿಖ್ ಸಮುದಾಯದ ಬಗ್ಗೆಯೂ ಮಾತನಾಡಿದ್ದಾರೆ .

“ಈ ಹೋರಾಟವು ಭಾರತದಲ್ಲಿ ಸಿಖ್‌ಗೆ ಪೇಟವನ್ನು ಧರಿಸಲು ಅನುಮತಿಸುವುದೇ ಅಥವಾ ಸಿಖ್‌ಗೆ ಭಾರತದಲ್ಲಿ ಕಡಾವನ್ನು ಧರಿಸಲು ಅನುಮತಿಸುವುದೇ ಅಥವಾ ಸಿಖ್‌ಗೆ ಗುರುದ್ವಾರಕ್ಕೆ ಹೋಗಲು ಅನುಮತಿಸುವುದೇ ಎಂಬುದಾಗಿದೆ. ಇದು ಎಲ್ಲ ಧರ್ಮಗಳ ಹೋರಾಟವಾಗಿದೆ” ಎಂದು ರಾಹುಲ್ ಗಾಂಧಿ ವರ್ಜೀನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸಿಜೆಐ ಮನೆಯಲ್ಲಿ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಕ್ಕೆ ಕಾಂಗ್ರೆಸ್ ಟೀಕೆ; ವಿವಾದ ಬಗ್ಗೆ ಮೌನ ಮುರಿದ ಮೋದಿ

ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ಬಿಟ್ಟು ರಾಹುಲ್ ಹೇಳಿಕೆಗೆ ಕಿಡಿ ಕಾರಿದ್ದು “ಆ ಬಾಂಬ್‌ಗಳನ್ನು ತಯಾರಿಸುವವರು ಅವನನ್ನು (ಗಾಂಧಿ) ಬೆಂಬಲಿಸುತ್ತಿದ್ದರೆ, ಅವನು ನಂಬರ್ ಒನ್ ಭಯೋತ್ಪಾದಕ. ಅವನು ತನ್ನ ದೇಶವನ್ನು ಹೆಚ್ಚು ಪ್ರೀತಿಸುವುದಿಲ್ಲ ಏಕೆಂದರೆ ಅವನು ವಿದೇಶಕ್ಕೆ ಹೋಗಿ ಎಲ್ಲವನ್ನೂ ತಪ್ಪಾಗಿ ಹೇಳುತ್ತಾನೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​