Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಸ್ಮೃತಿ ಇರಾನಿ ರ‍್ಯಾಂಪ್ ವಾಕ್ ; 25 ವರ್ಷಗಳ ಹಿಂದಿನ ವಿಡಿಯೊ ವೈರಲ್

ಸ್ಮೃತಿ ಇರಾನಿ ಅವರು 25 ವರ್ಷಗಳ ಹಿಂದೆ 1998 ರಲ್ಲಿ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಅವರು ಕಿತ್ತಳೆ ಬಣ್ಣದ ಸ್ಲೀವ್‌ಲೆಸ್ ಟಾಪ್ ಮತ್ತು ಮಿನಿ ಸ್ಕರ್ಟ್‌ ಧರಿಸಿ ರ‍್ಯಾಂಪ್ ವಾಕ್ ಮಾಡಿದ್ದರು

ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಸ್ಮೃತಿ ಇರಾನಿ ರ‍್ಯಾಂಪ್ ವಾಕ್ ; 25 ವರ್ಷಗಳ ಹಿಂದಿನ ವಿಡಿಯೊ ವೈರಲ್
ಸ್ಮೃತಿ ಇರಾನಿ
Follow us
ರಶ್ಮಿ ಕಲ್ಲಕಟ್ಟ
|

Updated on: Mar 24, 2023 | 1:59 PM

ದೆಹಲಿ: ಮಾಡೆಲ್ (model) ಆಗಿ ವೃತ್ತಿ ಜೀವನ ಪ್ರಾರಂಭಿಸಿದ ಸ್ಮೃತಿ ಇರಾನಿ (Smriti Irani)ರಾಜಕೀಯಕ್ಕೆ ಬರುವ ಮೊದಲು ಕಿರುತೆರೆ ನಟಿಯಾಗಿ ಜನಪ್ರಿಯರಾಗಿದ್ದರು. ಏಕ್ತಾ ಕಪೂರ್‌ ಅವರ ಬಾಲಾಜಿ ಟೆಲಿಫಿಲ್ಮ್ಸ್‌ ನಿರ್ಮಾಣದ ಕ್ಯೂಂಕೀ ಸಾಸ್ ಭೀ ಕಭೀ ಬಹೂ ಥೀ ಎಂಬ ಧಾರಾವಾಹಿಯಲ್ಲಿ ಸ್ಮೃತಿ, ತುಳಸಿ ವಿರಾನಿ ಎಂಬ ಕಥಾಪಾತ್ರವನ್ನು ನಿರ್ವಹಿಸಿ ಜನಮನಸ್ಸು ಗೆದ್ದಿದ್ದರು. ಅಪಾರ ಅಭಿಮಾನಿಗಳನ್ನು ಹೊಂದಿರುವ ಕೇಂದ್ರ ಸಚಿವೆ ಸಾಮಾಜಿಕ ಮಾಧ್ಯಮದಲ್ಲಿಯೂ ಸಕ್ರಿಯರಾಗಿದ್ದು ಆಗಾಗ್ಗೆ ವಿಷಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ನಿನ್ನೆ ಮಾರ್ಚ್ 23ರಂದು ಸ್ಮೃತಿ ಇರಾನಿಯ ಜನ್ಮದಿನವಾಗಿತ್ತು. ಈ ವೇಳೆ ಅವರ ಹಳೇ ವಿಡಿಯೊವೊಂದು ಮತ್ತೆ ವೈರಲ್ ಆಗಿದೆ.

ಸ್ಮೃತಿ ಇರಾನಿ ಅವರು 25 ವರ್ಷಗಳ ಹಿಂದೆ 1998 ರಲ್ಲಿ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಅವರು ಕಿತ್ತಳೆ ಬಣ್ಣದ ಸ್ಲೀವ್‌ಲೆಸ್ ಟಾಪ್ ಮತ್ತು ಮಿನಿ ಸ್ಕರ್ಟ್‌ ಧರಿಸಿ ರ‍್ಯಾಂಪ್ ವಾಕ್ ಮಾಡಿದ್ದರು. ಟಿವಿ ನಟಿ ಗೌರಿ ಪ್ರಧಾನ್ ತೇಜ್ವಾನಿ ಅವರೊಂದಿಗೆ ಅಗ್ರ 9 ರೊಳಗೆ ತಲುಪಲು ಸಾಧ್ಯವಾಗದ ಸ್ಪರ್ಧಿಗಳಲ್ಲಿ ಸ್ಮೃತಿ ಕೂಡಾ ಒಬ್ಬರು. ಅದೇ ವರ್ಷ ಅವರು ಮಿಖಾ ಸಿಂಗ್ ಅವರೊಂದಿಗೆ ‘ಸಾವನ್ ಮೇ ಲಗ್ ಗಯಿ ಆಗ್’ ಆಲ್ಬಂನ ‘ಬೋಲಿಯಾ’ ಹಾಡಿನಲ್ಲಿ ಕಾಣಿಸಿಕೊಂಡರು.

ಸ್ಮೃತಿ ಇರಾನಿ 2003ರಲ್ಲಿ ಬಿಜೆಪಿ ಸೇರಿದರು. ಅವರು 2004 ರಲ್ಲಿ ಮಹಾರಾಷ್ಟ್ರ ಯುವ ಘಟಕದ ಉಪಾಧ್ಯಕ್ಷರಾದರು. ಸ್ಮೃತಿ ಅಮೇಠಿ ಕ್ಷೇತ್ರದಿಂದ ಸಂಸದರಾಗಿದ್ದಾರೆ. 2019 ರಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಸೋಲಿಸುವ ಮೂಲಕ ಅವರು ಲೋಕಸಭೆಗೆ ಪ್ರವೇಶಿಸಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಒಬಿಸಿ ಸಮುದಾಯವನ್ನು ಅವಮಾನಿಸಿದ್ದಾರೆ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

2000 ರಲ್ಲಿ ಸ್ಮೃತಿ ಇರಾನಿ ಆತಿಶ್ ಮತ್ತು ಹಮ್ ಹೇ ಕಲ್ ಆಜ್ ಔರ್ ಕಲ್ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದರು. ಅವರು ಡಿಡಿ ಮೆಟ್ರೋದಲ್ಲಿ ಪ್ರಸಾರವಾಗುತ್ತಿದ್ದ ಕವಿತಾ ಧಾರಾವಾಹಿಯಲ್ಲೂ ನಟಿಸಿದ್ದಾರೆ. ಆದರೆ ಏಕ್ತಾ ಕಪೂರ್ ಅವರ ಬಾಲಾಜಿ ಟೆಲಿಫಿಲ್ಮ್ಸ್‌ನ ಕ್ಯೂಂಕೀ ಸಾಸ್ ಭೀ ಕಭೀ ಬಹೂ ಥೀ ಸೀರಿಯಲ್ ನಲ್ಲಿ ಅವರು ಮಿಂಚಿ ಜನಮನ್ನಣೆ ಪಡೆದರು. ಶ್ರೇಷ್ಠ ನಟಿಗಾಗಿ ಸತತ ಐದು ಬಾರಿ ಭಾರತೀಯ ದೂರದರ್ಶನ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ ಸ್ಮೃತಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್