AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unitech Case: ಯುನಿಟೆಕ್ ಪ್ರಕರಣ; ತಿಹಾರ್ ಜೈಲಿನ 30 ಅಧಿಕಾರಿಗಳ ಅಮಾನತು

Unitech Issue: ಯುನಿಟೆಕ್​ ಸಂಸ್ಥೆಯ ಮಾಜಿ ಮುಖ್ಯಸ್ಥರಾದ ಸಂಜಯ್​​ ಚಂದ್ರ ಮತ್ತು ಅಜಯ್​ ಚಂದ್ರ ಅವರಿಗೆ ಸಹಾಯ ಮಾಡಿದ ಆರೋಪದ ಮೇಲೆ ತಿಹಾರ್​ ಜೈಲು ಆಡಳಿತ ಮಂಡಳಿ 30 ಅಧಿಕಾರಿಗಳು ಸೇರಿದಂತೆ ಇಬ್ಬರು ಗುತ್ತಿಗೆ ನೌಕರರನ್ನು ಅಮಾನತು ಮಾಡಲಾಗಿದೆ.

Unitech Case: ಯುನಿಟೆಕ್ ಪ್ರಕರಣ; ತಿಹಾರ್ ಜೈಲಿನ 30 ಅಧಿಕಾರಿಗಳ ಅಮಾನತು
ಯುನಿಟೆಕ್ ಪ್ರಕರಣ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 14, 2021 | 8:37 PM

Share

ನವದೆಹಲಿ: ವಂಚನೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಯುನಿಟೆಕ್​​ ಮಾಜಿ ಪ್ರವರ್ತಕರಿಗೆ ಸಹಾಯ ಮಾಡಿದ ಆರೋಪದಡಿ ತಿಹಾರ್​ ಜೈಲಿ​​ನ 30 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಯುನಿಟೆಕ್​ ಸಂಸ್ಥೆಯ ಮಾಜಿ ಮುಖ್ಯಸ್ಥರಾದ ಸಂಜಯ್​​ ಚಂದ್ರ ಮತ್ತು ಅಜಯ್​ ಚಂದ್ರ ಅವರಿಗೆ ಸಹಾಯ ಮಾಡಿದ ಆರೋಪದ ಮೇಲೆ ತಿಹಾರ್​ ಜೈಲು ಆಡಳಿತ ಮಂಡಳಿ 30 ಅಧಿಕಾರಿಗಳು ಸೇರಿದಂತೆ ಇಬ್ಬರು ಗುತ್ತಿಗೆ ನೌಕರರನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ದೆಹಲಿ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದು, ಯುನಿಟೆಕ್ ಹಗರಣದ ಆರೋಪಿಗಳ ಜೊತೆ ಕೈ ಜೋಡಿಸಿರುವ ಆರೋಪದಲ್ಲಿ 32 ಜೈಲು ಸಿಬ್ಬಂದಿಯ ಹೆಸರುಗಳನ್ನು ದೆಹಲಿ ಪೊಲೀಸರು ತಿಹಾರ್ ಜೈಲಿನ ಮಹಾನಿರ್ದೇಶಕ ಸಂದೀಪ್ ಗೋಯೆಲ್ಅವರಿಗೆ ಪತ್ರ ಕಳುಹಿಸಿದ್ದರು. ಅದರಂತೆ 30 ಜೈಲು ಸಿಬ್ಬಂದಿ ಮತ್ತು ಇಬ್ಬರು ಗುತ್ತಿಗೆ ನೌಕರರನ್ನು ಅಮಾನತು ಮಾಡಲಾಗಿದೆ.

ತಿಹಾರ್ ಜೈಲು ಅಧಿಕಾರಿಗಳನ್ನು ಅಮಾನತು ಮಾಡಲು ಸುಪ್ರೀಂಕೋರ್ಟ್ ಆದೇಶಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಿಚಾರಣಾ ವರದಿಯನ್ನು ಪರಿಶೀಲಿಸಿದ ನಂತರ ಸುಪ್ರೀಂ​​ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ಣ ಪ್ರಮಾಣದ ಕ್ರಿಮಿನಲ್​​ ತನಿಖೆ ನಡೆಸಲು ಅನುಮತಿ ನೀಡಿತ್ತು. ವಂಚನೆ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಯುನಿಟೆಕ್‌ ಕಂಪನಿಯ ಮಾಜಿ ನಿರ್ದೇಶಕರಾದ ಸಂಜಯ್‌ಚಂದ್ರ ಹಾಗೂ ಅಜಯ್‌ ಚಂದ್ರ ಅವರನ್ನು ಮುಂಬೈನ ಆರ್ಥರ್‌ ರೋಡ್‌ ಜೈಲು ಹಾಗೂ ತಲೋಜಾ ಜೈಲಿಗೆ ಸ್ಥಳಾಂತರಿಸುವಂತೆ ಸುಪ್ರೀಂಕೋರ್ಟ್‌  ಆದೇಶ ನೀಡಿತ್ತು. ಅಲ್ಲದೆ, ತಿಹಾರ್ ಜೈಲಿನ ಅಧಿಕಾರಿಗಳ ಬಗ್ಗೆ ನ್ಯಾಯಾಲಯಕ್ಕೆ ನಂಬಿಕೆಯೇ ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. ಈ ಇಬ್ಬರು ಆರೋಪಿಗಳೊಂದಿಗೆ ತಿಹಾರ್‌ ಜೈಲು ಸಿಬ್ಬಂದಿ ನಡೆದುಕೊಳ್ಳುತ್ತಿದ್ದ ರೀತಿ ಕುರಿತು ಖುದ್ದಾಗಿ ತನಿಖೆ ನಡೆಸಿ, ವರದಿ ಸಲ್ಲಿಸಬೇಕು ಎಂದು ದೆಹಲಿ ಪೊಲೀಸ್‌ ಕಮಿಷನರ್‌ಗೆ ನ್ಯಾಯಪೀಠ ನಿರ್ದೇಶನ ನೀಡಿತ್ತು.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲೇ ಜೈಲಿನ ಅಧಿಕಾರಿಗಳು ಸುಪ್ರೀಂ ಕೋರ್ಟ್​ನ ಆದೇಶವನ್ನು ಕಡೆಗಣಿಸಿ, ತಮಗೆ ಬೇಕಾದಂತೆ ವರ್ತನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಯುನಿಟೆಕ್‌ನ ಸಂಸ್ಥಾಪಕ ರಮೇಶ್‌ ಚಂದ್ರ ರಹಸ್ಯವಾಗಿ ಭೂಗತ ಕಚೇರಿ ಸ್ಥಾಪಿಸಿರುವುದು ನಮಗೆ ತಿಳಿದುಬಂದಿದೆ ಎಂಬ ವಿಷಯವನ್ನು ಇಡಿ ಅಧಿಕಾರಿಗಳು ನ್ಯಾಯಪೀಠದ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ತಿಹಾರ್ ಜೈಲಿನ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಸಂಜಯ್ ಚಂದ್ರ- ಅಜಯ್‌ ಚಂದ್ರ ಅವರ ವರ್ತನೆ ಹಾಗೂ ಈ ಬಗ್ಗೆ ತಿಹಾರ್‌ ಜೈಲು ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಳ್ಳದ ಬಗ್ಗೆ ಇ.ಡಿ ಅಧಿಕಾರಿಗಳು ಎರಡು ವರದಿಗಳನ್ನು ಸಲ್ಲಿಸಿದ್ದಾರೆ. ಈ ಇಬ್ಬರು ಆರೋಪಿಗಳ ವರ್ತನೆ ಹಾಗೂ ತಿಹಾರ್ ಜೈಲಿನ ಅಧಿಕಾರಿಗಳ ನಡವಳಿಕೆ ನಾಚಿಕೆಗೇಡಿನ ಸಂಗತಿ. ಇದು ಬಹಳ ಗಂಭೀರವಾದ ವಿಷಯವಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳಿಗೆ ಛೀಮಾರಿ ಹಾಕಿತ್ತು.

ಸಂಜಯ್ ಚಂದ್ರ ಮತ್ತು ಅಜಯ್ ಚಂದ್ರ ಸಹೋದರರು ಹಾಗೂ ಯುನಿಟೆಕ್‌ ಲಿಮಿಟೆಡ್‌ ಕಂಪನಿಯ ವಿರುದ್ಧದ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪಗಳ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿದೆ. 2015ರಲ್ಲಿ ಸಂಜಯ್ ಮತ್ತು ಅಜಯ್ ಚಂದ್ರ ವಿರುದ್ಧ ಕೇಸ್ ದಾಖಲಾಗಿತ್ತು. ಸುಪ್ರೀಂ ಕೋರ್ಟ್ 2021ರ ಜೂನ್ 4ರಂದು ಸಂಜಯ್ ಚಂದ್ರ ಅವರಿಗೆ ತನ್ನ ಮಾವನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು 15 ದಿನಗಳ ಮಧ್ಯಂತರ ಜಾಮೀನು ನೀಡಿತ್ತು. ಸಂಜಯ್ ಚಂದ್ರ ಅವರ ಪರವಾದ ಹಿರಿಯ ವಕೀಲರ ಕೋರಿಕೆಯಂತೆ ಸಂಜಯ್​ಗೆ ಹೆಚ್ಚಿನ ಸಮಯಾವಕಾಶ ನೀಡಲು ಕೋರ್ಟ್​ ನಿರಾಕರಿಸಿತ್ತು. 2020ರ ಆಗಸ್ಟ್ 14ರಂದು ಸಂಜಯ್ ಚಂದ್ರ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಆದರೆ, ಒಂದು ತಿಂಗಳ ಹಿಂದೆ ಅವರ ಪೋಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಮಾನವೀಯತೆಯ ಆಧಾರದ ಮೇಲೆ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.

ಇದನ್ನೂ ಓದಿ: ತಿಹಾರ್ ಜೈಲಧಿಕಾರಿಗಳ ಬಗ್ಗೆ ನಂಬಿಕೆಯೇ ಇಲ್ಲ, ಆರೋಪಿಗಳನ್ನು ಬೇರೆಡೆ ಶಿಫ್ಟ್ ಮಾಡಿ; ಯುನಿಟೆಕ್ ಕೇಸ್​ನಲ್ಲಿ ಸುಪ್ರೀಂ ಕೋರ್ಟ್ ತರಾಟೆ

ವಸೂಲಿ ದಂಧೆ: ತಿಹಾರ್ ಜೈಲಿನಲ್ಲಿದ್ದುಕೊಂಡೇ 200 ಕೋಟಿ ಹಣ ವಸೂಲಿ ಮಾಡಿದ ಸುಕೇಶ್ ಚಂದ್ರಶೇಖರ್

Published On - 8:27 pm, Thu, 14 October 21

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ