ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಸಂಚಾಲಕರಿಲ್ಲ, 13 ಸದಸ್ಯರ ಸಮನ್ವಯ ಸಮಿತಿ ರಚನೆ

INDIA meet Mumbai: ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ ಮುಂಬೈನಲ್ಲಿ ನಡೆಯುತ್ತಿದ್ದು, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು “ಸೇಡಿನ ರಾಜಕಾರಣ” ಮಾಡುತ್ತಿದೆ ಎಂದು ಆರೋಪಿಸಿದರು. ಇಂಡಿಯಾ ನೆಲೆಗೊಳ್ಳುತ್ತಿದ್ದಂತೆ ಸರ್ಕಾರವು ಪ್ರತಿಪಕ್ಷ ನಾಯಕರ ವಿರುದ್ಧ ಏಜೆನ್ಸಿಗಳನ್ನು ಹೆಚ್ಚು ದುರುಪಯೋಗಪಡಿಸಿಕೊಳ್ಳುತ್ತದೆ ಎಂದಿದ್ದಾರೆ ಖರ್ಗೆ.

ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಸಂಚಾಲಕರಿಲ್ಲ, 13 ಸದಸ್ಯರ ಸಮನ್ವಯ ಸಮಿತಿ ರಚನೆ
ಇಂಡಿಯಾ ಮೈತ್ರಿಕೂಟ ಸಭೆ
Follow us
|

Updated on:Sep 01, 2023 | 3:52 PM

ಮುಂಬೈ ಸೆಪ್ಟೆಂಬರ್ 01: ಮುಂಬೈನಲ್ಲಿ ತನ್ನ ಮೂರನೇ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ (INDIA) 13 ಸದಸ್ಯರನ್ನು ಒಳಗೊಂಡ ಸಮನ್ವಯ ಸಮಿತಿಯನ್ನು  ರಚಿಸಿದೆ. ಅಂದಹಾಗೆ ಈ ಮೈತ್ರಿಕೂಟ ಇಂದು ಲೋಗೋ ಅನಾವರಣ ಮಾಡಿಲ್ಲ.  ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ (Congress) ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು “ಸೇಡಿನ ರಾಜಕಾರಣ” ಮಾಡುತ್ತಿದೆ ಎಂದು ಆರೋಪಿಸಿದರು. ಇಂಡಿಯಾ ನೆಲೆಗೊಳ್ಳುತ್ತಿದ್ದಂತೆ ಸರ್ಕಾರವು ಪ್ರತಿಪಕ್ಷ ನಾಯಕರ ವಿರುದ್ಧ ಏಜೆನ್ಸಿಗಳನ್ನು ಹೆಚ್ಚು ದುರುಪಯೋಗಪಡಿಸಿಕೊಳ್ಳುತ್ತದೆ ಎಂದಿದ್ದಾರೆ ಖರ್ಗೆ.

ರೈತರು, ಯುವಕರು, ಮಹಿಳೆಯರು, ಅಂಚಿನಲ್ಲಿರುವವರು, ಮಧ್ಯಮ ವರ್ಗದವರು, ಬುದ್ಧಿಜೀವಿಗಳು, ಎನ್‌ಜಿಒಗಳು ಮತ್ತು ಪತ್ರಕರ್ತರು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗವೂ ಬಿಜೆಪಿಯ ಸರ್ವಾಧಿಕಾರಿ ಆಡಳಿತದಿಂದ ಬಳಲುತ್ತಿದೆ ಎಂದು ಖರ್ಗೆ ಹೇಳಿದರು.”ಮುಗ್ಧ ರೈಲು ಪ್ರಯಾಣಿಕರು ಮತ್ತು ಶಾಲಾ ಮಕ್ಕಳ ಮೇಲಿನ ದ್ವೇಷದ ಅಪರಾಧಗಳಿಗೆ” ಕೇಂದ್ರ ಸರ್ಕಾರವೇ ಕಾರಣ ಎಂದು ಖರ್ಗೆ ದೂರಿದ್ದಾರೆ. ಸಭೆಗೆ ಮುನ್ನ ತೆಗೆದ ವಿರೋಧ ಪಕ್ಷದ ನಾಯಕರ ಗುಂಪಿನ ಫೋಟೊ ಶೇರ್ ಮಾಡಿದ ಖರ್ಗೆ, ಭಾರತದ ಪ್ರಜೆಗಳು “ಇನ್ನು ಮುಂದೆ ಯಾವುದೇ ದ್ರೋಹಕ್ಕೆ ಒಳಗಾಗುವುದಿಲ್ಲ” ಮತ್ತು “140 ಕೋಟಿ ಭಾರತೀಯರು ಬದಲಾವಣೆಯನ್ನು ತರಲು ನಿರ್ಧರಿಸಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಮೂಲಗಳ ಪ್ರಕಾರ 13 ಸದಸ್ಯರ ವಿರೋಧ ಸಮಿತಿಯು ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಸೀಟು ಹಂಚಿಕೆಯ ಕೆಲಸವನ್ನು ಪ್ರಾರಂಭಿಸುತ್ತದೆ

ಇಂಡಿಯಾ ‘ಸಮನ್ವಯ ಸಮಿತಿ’ ಯಲ್ಲಿನ ನಾಯಕರ ಪಟ್ಟಿಯಲ್ಲಿರುವವರು

  • ಕೆ ಸಿ ವೇಣುಗೋಪಾಲ್ (ಕಾಂಗ್ರೆಸ್)
  • ಶರದ್ ಪವಾರ್ (ಎನ್‌ಸಿಪಿ)
  • ಎಂ ಕೆ ಸ್ಟಾಲಿನ್ (ಡಿಎಂಕೆ)
  • ತೇಜಸ್ವಿ ಯಾದವ್ (ಆರ್‌ಜೆಡಿ)
  • ಅಭಿಷೇಕ್ ಬ್ಯಾನರ್ಜಿ (ಟಿಎಂಸಿ)
  • ಹೇಮಂತ್ ಸೋರೆನ್ (ಕಾಂಗ್ರೆಸ್)
  • ಸಂಜಯ್ ರಾವುತ್ (ಯುಬಿಟಿ ಶಿವಸೇನೆ)
  • ರಾಘವ್ ಚಡ್ಡಾ (ಎಎಪಿ)
  • ಡಿ ರಾಜಾ (ಸಿಪಿಐ)
  • ಒಮರ್ ಅಬ್ದುಲ್ಲಾ (ನ್ಯಾಷನಲ್ ಕಾನ್ಫರೆನ್ಸ್)
  • ಮೆಹಬೂಬಾ ಮುಫ್ತಿ (ಪಿಡಿಪಿ)

ಶೀಘ್ರದಲ್ಲೇ ದೇಶದಾದ್ಯಂತ ರ‍್ಯಾಲಿ

ಸಾರ್ವಜನಿಕ ಕಾಳಜಿಯ ವಿಷಯಗಳ ಕುರಿತು ನಾವು ದೇಶದ ವಿವಿಧ ಭಾಗಗಳಲ್ಲಿ ಶೀಘ್ರವಾಗಿ ರ್ಯಾಲಿಗಳನ್ನು ನಡೆಸುತ್ತೇವೆ ಎಂದು ಇಂಡಿಯಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.ನಾವು ಸಾಧ್ಯವಾದಷ್ಟು ಲೋಕಸಭೆ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸಲು ನಿರ್ಧರಿಸುತ್ತೇವೆ ಎಂದು ಮೈತ್ರಿಕೂಟ ಹೇಳಿದೆ.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ ಎಂದರೆ ಏನು?; ಇದರ ಸಾಧಕ-ಬಾಧಕಗಳೇನು?

ಸಭೆಯ  ಆರಂಭದಲ್ಲಿ  ಇಂಡಿಯಾ ಮೈತ್ರಿಕೂಟ ಚಂದ್ರಯಾನ-3 ಬಗ್ಗೆ  ನಿರ್ಣಯವನ್ನು ಅಂಗೀಕರಿಸಿತು. “ನಮ್ಮ ದೇಶವನ್ನು ಹೆಮ್ಮೆ ಪಡಿಸಿದ ಅತ್ಯುತ್ತಮ ಸಾಧನೆಗಳಿಗಾಗಿ ನಾವು ಇಡೀ ಇಸ್ರೋ ಕುಟುಂಬವನ್ನು ಅಭಿನಂದಿಸುತ್ತೇವೆ. ಇಸ್ರೋದ ಸಾಮರ್ಥ್ಯಗಳು ಮತ್ತು ಸಾಮರ್ಥ್ಯಗಳನ್ನು ನಿರ್ಮಿಸಲು, ವಿಸ್ತರಿಸಲು ಆರು ದಶಕಗಳನ್ನು ತೆಗೆದುಕೊಂಡಿದೆ.ಚಂದ್ರಯಾನ-3 ವಿಶ್ವವನ್ನು ರೋಮಾಂಚನಗೊಳಿಸಿದೆ, ಇದು ನಾಳೆ ಆದಿತ್ಯ-ಎಲ್ 1 ಉಡಾವಣೆಗಾಗಿ ಕಾತುರದಿಂದ ನೋಡುತ್ತಿದೆ. ಇಸ್ರೋದ ಅಸಾಧಾರಣ ಸಾಧನೆಗಳು ನಮ್ಮ ಸಮಾಜದಲ್ಲಿ ವೈಜ್ಞಾನಿಕ ಮನೋಭಾವವನ್ನು ಬಲಪಡಿಸುತ್ತದೆ. ವೈಜ್ಞಾನಿಕ ಪ್ರಯತ್ನಗಳು  ನಮ್ಮ ಯುವಕರಿಗೆ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸ್ಫೂರ್ತಿ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ‘ಇಂಡಿಯಾ’ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Fri, 1 September 23

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ