AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನುಬಾಹಿರ ಚಟುವಟಿಕೆ ಆರೋಪ; ಕೇರಳದಿಂದ ಪಿಎಫ್‌ಐ ಮಾಜಿ ರಾಜ್ಯ ಕಾರ್ಯದರ್ಶಿಯನ್ನು ಬಂಧಿಸಿದ ಎನ್ಐಎ

ಆರೋಪಿಯು ಈಗ ನಿಷೇಧಿತ ಪಿಎಫ್‌ಐನ ರಾಜ್ಯ ಕಾರ್ಯದರ್ಶಿಯಾಗಿದ್ದು, ಕೇರಳದಲ್ಲಿ ಅದರ ಮಾಧ್ಯಮ ಮತ್ತು ಪಿಆರ್ ವಿಭಾಗಗಳನ್ನು ನಿರ್ವಹಿಸುತ್ತಿದ್ದಾನೆ

ಕಾನೂನುಬಾಹಿರ ಚಟುವಟಿಕೆ ಆರೋಪ; ಕೇರಳದಿಂದ ಪಿಎಫ್‌ಐ ಮಾಜಿ ರಾಜ್ಯ ಕಾರ್ಯದರ್ಶಿಯನ್ನು ಬಂಧಿಸಿದ ಎನ್ಐಎ
ಸಿಎ ರೌಫ್
TV9 Web
| Edited By: |

Updated on:Oct 28, 2022 | 9:10 PM

Share

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ಕೇರಳದ ಮಾಜಿ ಪ್ರಧಾನ ಕಾರ್ಯದರ್ಶಿ ಸಿಎ ರೌಫ್​​ನ್ನು (CA Rauf) ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶುಕ್ರವಾರ ಪಾಲಕ್ಕಾಡ್‌ನ ಪಟ್ಟಾಂಬಿಯಲ್ಲಿರುವ ಅವರ ಮನೆಯಿಂದ ಬಂಧಿಸಿದೆ. ಕೇರಳದ ಪಿಎಫ್‌ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕ್ಕಾಡ್‌ನ ಕರಿಂಪುಳ್ಳಿಯ ಚಪ್ಪೆಂಗಾತೊಡಿ ಹೌಸ್ ನಿವಾಸಿ ರೌಫ್​​ ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ. ಆರೋಪಿಯು ಈಗ ನಿಷೇಧಿತ ಪಿಎಫ್‌ಐನ ರಾಜ್ಯ ಕಾರ್ಯದರ್ಶಿಯಾಗಿದ್ದು, ಕೇರಳದಲ್ಲಿ ಅದರ ಮಾಧ್ಯಮ ಮತ್ತು ಪಿಆರ್ ವಿಭಾಗಗಳನ್ನು ನಿರ್ವಹಿಸುತ್ತಿದ್ದಾನೆ. ಈತ ಪ್ರಕರಣದ ಪ್ರಮುಖ ಸಂಚುಕೋರರಲ್ಲಿ ಒಬ್ಬನಾಗಿದ್ದಾನೆ ಎಂದು ಎನ್‌ಐಎ ಹೇಳಿದೆ. ಕೇರಳದ ಇತರ ಪಿಎಫ್‌ಐ ಪದಾಧಿಕಾರಿಗಳು, ಸದಸ್ಯರು ಮತ್ತು ಅಂಗಸಂಸ್ಥೆಗಳೊಂದಿಗೆ ರೌಫ್,  ವಿವಿಧ ಧರ್ಮಗಳು ಮತ್ತು ಗುಂಪುಗಳ ಸದಸ್ಯರ ನಡುವೆ ದ್ವೇಷವನ್ನು ಸೃಷ್ಟಿಸುವುದು ಮತ್ತು ಸಾರ್ವಜನಿಕರಿಗೆ ಅಡ್ಡಿಪಡಿಸುವ ಉದ್ದೇಶದಿಂದ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಂಚು ರೂಪಿಸುತ್ತಿದ್ದಾರೆ ಎಂದು ಎನ್ಐಎ ಆರೋಪಿಸಿದೆ.

ಅವರು ಕ್ರಿಮಿನಲ್ ಬಲದ ಬಳಕೆಯನ್ನು ಸಮರ್ಥಿಸುವ ಪರ್ಯಾಯ ನ್ಯಾಯ ವಿತರಣಾ ವ್ಯವಸ್ಥೆಗಳನ್ನು ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ. ಇದು ಜನರಲ್ಲಿ ಎಚ್ಚರಿಕೆ ಮತ್ತು ಭಯವನ್ನು ಉಂಟುಮಾಡುತ್ತದೆ. ಇದು ಲಷ್ಕರ್-ಎ-ತೈಬಾ (ಎಲ್‌ಇಟಿ), ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಎಸ್‌ಐಎಸ್)/ದೇಶ್ ಮತ್ತು ಅಲ್-ಖೈದಾ ಸೇರಿದಂತೆ ದುರ್ಬಲ ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ಪ್ರೋತ್ಸಾಹಿಸುವುದು ಮತ್ತು ಭಯೋತ್ಪಾದಕ ಕೃತ್ಯಗಳನ್ನು ಮಾಡುವ ಮೂಲಕ ಹಿಂಸಾತ್ಮಕ ಜಿಹಾದ್ ಅಂಗವಾಗಿ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸುವ ಪಿತೂರಿ ನಡೆಸುತ್ತಿದೆ ಎಂದು ಎನ್ಐಎ ಹೇಳಿದೆ.

Published On - 8:57 pm, Fri, 28 October 22

Follow Us
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ