ಗಡಿಯಲ್ಲಿ ಶಾಂತಿ ನೆಲೆಸುವವರೆಗೂ ಸಂಬಂಧಗಳು ಸಾಮಾನ್ಯವಾಗಿರಲು ಸಾಧ್ಯವಿಲ್ಲ: ವಿದೇಶಾಂಗ ಸಚಿವಾಲಯ

ಗಡಿಯಲ್ಲಿ ಶಾಂತಿ ನೆಲೆಸುವವರೆಗೂ ಭಾರತ, ಚೀನಾ ಸಂಬಂಧ ಸಾಮಾನ್ಯವಾಗಿರುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಪೂರ್ವ ಲಡಾಖ್‌ನಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಎರಡೂ ಕಡೆಯವರು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆ ನಡೆಸುತ್ತಿದ್ದಾರೆ.

ಗಡಿಯಲ್ಲಿ ಶಾಂತಿ ನೆಲೆಸುವವರೆಗೂ ಸಂಬಂಧಗಳು ಸಾಮಾನ್ಯವಾಗಿರಲು ಸಾಧ್ಯವಿಲ್ಲ: ವಿದೇಶಾಂಗ ಸಚಿವಾಲಯ
ಭಾರತ-ಚೀನಾ
Image Credit source: NDTV

Updated on: Jan 05, 2024 | 9:27 AM

ಗಡಿಯಲ್ಲಿ ಶಾಂತಿ ನೆಲೆಸುವವರೆಗೂ ಭಾರತ(India), ಚೀನಾ(China) ಸಂಬಂಧ ಸಾಮಾನ್ಯವಾಗಿರುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಪೂರ್ವ ಲಡಾಖ್‌ನಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಎರಡೂ ಕಡೆಯವರು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆ ನಡೆಸುತ್ತಿದ್ದಾರೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಚೀನಾ ಕುರಿತ ನಮ್ಮ ನಿಲುವು ಎಲ್ಲರಿಗೂ ತಿಳಿದಿದೆ. ಈ ಸಂಬಂಧಗಳು ಸಾಮಾನ್ಯವಲ್ಲ ಆದರೆ ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತನಾಡಿದ್ದೇವೆ. ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಉಭಯ ಪಕ್ಷಗಳ ನಡುವೆ ನಡೆದ ಮಾತುಕತೆಗಳನ್ನು ಜೈಸ್ವಾಲ್ ಉಲ್ಲೇಖಿಸಿದ್ದಾರೆ.

ಒಂದು ವಿಚಾರದ ಬಗ್ಗೆ ಮಾತನಾಡಿದಾಗ ಮಾತ್ರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯ. ಗಡಿಯಲ್ಲಿ ಶಾಂತಿ ನೆಲೆಸುವವರೆಗೆ ಚೀನಾ ಜತೆಗಿನ ಬಾಂಧವ್ಯ ಸಹಜವಾಗಿರಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ. ಮೇ 5, 2020 ರಂದು ಪ್ಯಾಂಗೊಂಗ್ ಸರೋವರ ಪ್ರದೇಶದಲ್ಲಿ ಹಿಂಸಾತ್ಮಕ ಘರ್ಷಣೆಯ ನಂತರ ಪೂರ್ವ ಲಡಾಖ್ ಗಡಿಯಲ್ಲಿ ಬಿಕ್ಕಟ್ಟು ಉಂಟಾಗಿತ್ತು.

ಮತ್ತಷ್ಟು ಓದಿ: ಭಾರತ- ಚೀನಾ ಸಂಬಂಧಗಳನ್ನು ಹದಗೆಡಿಸುತ್ತಿರುವ ಗಡಿ ವಿವಾದ

ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಆಡಳಿತದಲ್ಲಿ ಭಾರತವು ಅತ್ಯುತ್ತಮ ಫಲಿತಾಂಶಗಳನ್ನು ಸಾಧಿಸಿದೆ. ದೇಶದ ಆರ್ಥಿಕತೆಯು ವೇಗವನ್ನು ಪಡೆದುಕೊಂಡಿದೆ ಮತ್ತು ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗುವ ಹಾದಿಯಲ್ಲಿದೆ ಎಂದು ಅವರು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us