ಉನ್ನಾವೋ ರೇಪ್ ಕೇಸ್​: ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ತೀಸ್ ಹಜಾರಿ ಕೋರ್ಟ್‌ ತೀರ್ಪು ನೀಡಿದೆ. 2017ರ ಜೂನ್ 4ರಂದು ಅಪ್ರಾಪ್ತೆಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪ್ರಕರಣ ಸಂಬಂಧ 2018ರ ಏ.14ರಂದು ಕುಲದೀಪ್ ಸೆಂಗರ್ ಬಂಧನವಾಗಿತ್ತು. ಶಾಸಕ ಕುಲದೀಪ್ ಸೆಂಗರ್ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ. 5 ಪ್ರಕರಣಗಳ ಪೈಕಿ 1 ಪ್ರಕರಣದ ತೀರ್ಪು ನೀಡಿದ ತೀಸ್‌ ಹಜಾರಿ ಕೋರ್ಟ್‌ […]

ಉನ್ನಾವೋ ರೇಪ್ ಕೇಸ್​: ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ

Updated on: Dec 16, 2019 | 4:47 PM

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೋ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ತೀಸ್ ಹಜಾರಿ ಕೋರ್ಟ್‌ ತೀರ್ಪು ನೀಡಿದೆ.

2017ರ ಜೂನ್ 4ರಂದು ಅಪ್ರಾಪ್ತೆಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪ್ರಕರಣ ಸಂಬಂಧ 2018ರ ಏ.14ರಂದು ಕುಲದೀಪ್ ಸೆಂಗರ್ ಬಂಧನವಾಗಿತ್ತು. ಶಾಸಕ ಕುಲದೀಪ್ ಸೆಂಗರ್ ವಿರುದ್ಧ 5 ಪ್ರಕರಣಗಳು ದಾಖಲಾಗಿವೆ. 5 ಪ್ರಕರಣಗಳ ಪೈಕಿ 1 ಪ್ರಕರಣದ ತೀರ್ಪು ನೀಡಿದ ತೀಸ್‌ ಹಜಾರಿ ಕೋರ್ಟ್‌ ಸೆಂಗರ್ ಅಪರಾಧಿ ಎಂದಿದೆ. ಡಿಸೆಂಬರ್ 19ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ವಿಳಂಬ ಹಿನ್ನೆಲೆಯಲ್ಲಿ ಸಿಬಿಐಗೆ ತರಾಟೆ ತೆಗೆದುಕೊಂಡಿದೆ. ಕುಲದೀಪ್ ಸೆಂಗಾರ್ ಬಳಿ ಅಪ್ರಾಪ್ತೆ ಕರೆದೊಯ್ದಿದ್ದ ಶಶಿಸಿಂಗ್ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.

Published On - 3:16 pm, Mon, 16 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us