AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗವದ್ಗೀತೆ ಕಥನ ನಡೆಯುವ ಜಾಗದಲ್ಲಿ ನೂರಾರು ಮಹಿಳೆಯರ ಹಿಂದೆ ಅಂಡರ್​ವೇರ್​ನಲ್ಲಿ ಕುಳಿತ ಪೊಲೀಸ್​

ಭಗವದ್ಗೀತೆ ಕಥನ ನಡೆಯುವ ಜಾಗದಲ್ಲಿ ಮಹಿಳೆಯ ಹಿಂದೆ ಪೊಲೀಸ್​ ಅಧಿಕಾರಿಯೊಬ್ಬರು ಅಂಡರ್​ವೇರ್​ನಲ್ಲಿ ಕುಳಿತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಭಗವದ್ಗೀತೆ ಕಥನ ನಡೆಯುವ ಜಾಗದಲ್ಲಿ ನೂರಾರು ಮಹಿಳೆಯರ ಹಿಂದೆ ಅಂಡರ್​ವೇರ್​ನಲ್ಲಿ ಕುಳಿತ ಪೊಲೀಸ್​
Image Credit source: Free Press Journal
ನಯನಾ ರಾಜೀವ್
|

Updated on: May 27, 2024 | 12:31 PM

Share

ಉನ್ನಾವೋದ ದೇವಸ್ಥಾನದ ಮುಂಭಾಗ ಭಗವದ್ಗೀತೆ ಕಥನ ನಡೆಯುತ್ತಿದ್ದ ಜಾಗದಲ್ಲಿ ನೂರಾರು ಮಹಿಳೆಯರ ಹಿಂದೆ ಪೊಲೀಸ್ ಅಧಿಕಾರಿಯೊಬ್ಬರು ​ ಅಂಡರ್​ವೇರ್​ನಲ್ಲಿ ಕುಳಿತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಸ್​ಪಿ ಕ್ರಮ ಕೈಗೊಂಡಿದ್ದಾರೆ. ಅಚಲಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲುಹಗಡ ಗ್ರಾಮದಲ್ಲಿ ಚಂದ್ರಿಕಾ ಮಾತೆಯ ದೇವಾಲಯವಿದೆ ಆ ದೇವಸ್ಥಾನದ ಆವರಣದಲ್ಲಿ ಪೊಲೀಸ್ ಠಾಣೆಯೂ ಇದೆ.

ದೇವಸ್ಥಾನದಲ್ಲಿ ಭಗವದ್ಗೀತೆ ಕಥನ ನಡೆಯುತ್ತಿತ್ತು, ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಹೊರಠಾಣೆ ಪ್ರಭಾರಿ ರಾಮ್​ನಿವಾಸ್ ಯಾದವ್, ಕೇವಲ ಒಳ ಉಡುಪು ಧರಿಸಿ, ತನ್ನ ಕೋಣೆಯ ಹೊರಗಿನ ವರಾಂಡಾದಲ್ಲಿ ಖುರ್ಚಿಯ ಮೇಲೆ ಕುಳಿತು ತನ್ನ ಮೊಬೈಲ್ ನೋಡುತ್ತಿದ್ದ ದೃಶ್ಯ ಸೆರೆಯಾಗಿತ್ತು.

ಅಲ್ಲಿದ್ದವರೊಬ್ಬರು ತಕ್ಷಣವೇ ಓಡಿಹೋಗಿ ರಾಮ್​ನಿವಾಸ್​ ಬಳಿ ಲುಂಗಿ ಅಥವಾ ಪಂಚೆ ಸುತ್ತಿಕೊಳ್ಳುವಂತೆ ಮನವಿ ಮಾಡಿದರು ಆದರೆ ಯಾರ ಮಾತಿಗೂ ಪೊಲೀಸ್ ಕಿವಿಗೊಡಲಿಲ್ಲ.

ಮತ್ತಷ್ಟು ಓದಿ: ಗದಗ: ತಲೆ ಮೇಲೆ ಪಟಾಕಿ ಹೊತ್ತುಕೊಂಡು ಪುಂಡಾಟ

ಎಸ್ಪಿ ಸಿದ್ಧಾರ್ಥ್ ಶಂಕರ್ ಮೀನಾ ಅವರು ವೈರಲ್ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು ಹೊರಠಾಣೆ ಪ್ರಭಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್‌ಒಗೆ ಸೂಚಿಸಿದರು. ತನಿಖೆ ನಡೆಸುವಂತೆ ಬಿಘಾಪುರ ಸಿಒ ಮಾಯಾ ರೈ ಅವರಿಗೆ ಎಸ್‌ಪಿ ಸೂಚಿಸಿದರು.

ವಿಡಿಯೋ

ಸಿಒ ಅವರ ವರದಿಯ ಮೇರೆಗೆ, ಕೊಲುಹಗಡ ಪೊಲೀಸ್ ಪೋಸ್ಟ್ ಇನ್‌ಚಾರ್ಜ್ ರಾಮ್​ನಿವಾಸ್ ಯಾದವ್ ಅವರನ್ನು ಅಚಲಗಂಜ್ ಪೊಲೀಸ್ ಠಾಣೆಯಿಂದ ಪೊಲೀಸ್ ಲೈನ್‌ಗೆ ಕಳುಹಿಸಲಾಗಿದೆ. ಇನ್‌ಸ್ಪೆಕ್ಟರ್ ವಿನಯ್ ಮಿಶ್ರಾ ಅವರಿಗೆ ಔಟ್‌ಪೋಸ್ಟ್‌ನ ಉಸ್ತುವಾರಿ ನೀಡಲಾಗಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ನಾನಕ್ಕೆ ಹೋಗಿದ್ದೆ, ಬಟ್ಟೆ ಮತ್ತು ಟವೆಲ್ ತೊಳೆದ ನಂತರ ಕರೆಂಟ್​ ಕೈಕೊಟ್ಟಿತ್ತು, ನೀರಿನ ಅಭಾವದಿಂದ ಈ ಸ್ಥಿತಿಯಲ್ಲಿ ಖುರ್ಚಿ ಮೇಲೆ ಕೂರಬೇಕಾಯಿತು ಎಂದು ಸಬೂಬು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!