AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲದಲ್ಲಿ ವೈಕುಂಠ ದ್ವಾರದ ಮೂಲಕ ಸಿಗಲಿದೆ ‘ವೆಂಕಟೇಶ್ವರ’ನ ದರ್ಶನ

ಹೈದರಾಬಾದ್: ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನ ಆಲಯದಲ್ಲಿ ಇಂದು ಸಂಭ್ರಮ. ತಿಮ್ಮಪ್ಪನ ಸನ್ನಿಧಾನಕ್ಕೆ ಭಕ್ತಸಾಗರವೇ ಹರಿದು ಬರುತ್ತೆ. ಹೂವಿನ ಅಲಂಕಾರದೊಂದಿಗೆ ದೇಗುಲ ಝಗಮಗಿಸುತ್ತೆ. ಎಲ್ಲೆಡೆ ಗೋವಿಂದನ ಸ್ಮರಣೆ ಮೊಳಗುತ್ತೆ. ತಿರುಮಲದಲ್ಲಿ ವೈಕುಂಠ ಏಕಾದಶಿ, ದ್ವಾದಶಿ ಸಂಭ್ರಮ: ಹೌದು, ತಿರುಪತಿ ತಿರುಮಲದಲ್ಲಿ ವೈಕುಂಠ ಏಕಾದಶಿ ಮತ್ತು ದ್ವಾದಶಿ ಸಂಭ್ರಮ ಮನೆ ಮಾಡಿದೆ. ಉತ್ಸವ ಹಿನ್ನೆಲೆ ಇಂದಿನಿಂದ ಎರಡು ದಿನಗಳ ಕಾಲ ವೈಕುಂಠ ದ್ವಾರವನ್ನ ತೆರೆಯಲು ಟಿಟಿಡಿ ನಿರ್ಧರಿಸಿದೆ. ಈ ಹಿನ್ನೆಲೆ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಪಡೆಯಲು […]

ತಿರುಮಲದಲ್ಲಿ ವೈಕುಂಠ ದ್ವಾರದ ಮೂಲಕ ಸಿಗಲಿದೆ ‘ವೆಂಕಟೇಶ್ವರ’ನ ದರ್ಶನ
ಸಾಧು ಶ್ರೀನಾಥ್​
|

Updated on:Jan 06, 2020 | 6:46 AM

Share

ಹೈದರಾಬಾದ್: ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನ ಆಲಯದಲ್ಲಿ ಇಂದು ಸಂಭ್ರಮ. ತಿಮ್ಮಪ್ಪನ ಸನ್ನಿಧಾನಕ್ಕೆ ಭಕ್ತಸಾಗರವೇ ಹರಿದು ಬರುತ್ತೆ. ಹೂವಿನ ಅಲಂಕಾರದೊಂದಿಗೆ ದೇಗುಲ ಝಗಮಗಿಸುತ್ತೆ. ಎಲ್ಲೆಡೆ ಗೋವಿಂದನ ಸ್ಮರಣೆ ಮೊಳಗುತ್ತೆ.

ತಿರುಮಲದಲ್ಲಿ ವೈಕುಂಠ ಏಕಾದಶಿ, ದ್ವಾದಶಿ ಸಂಭ್ರಮ: ಹೌದು, ತಿರುಪತಿ ತಿರುಮಲದಲ್ಲಿ ವೈಕುಂಠ ಏಕಾದಶಿ ಮತ್ತು ದ್ವಾದಶಿ ಸಂಭ್ರಮ ಮನೆ ಮಾಡಿದೆ. ಉತ್ಸವ ಹಿನ್ನೆಲೆ ಇಂದಿನಿಂದ ಎರಡು ದಿನಗಳ ಕಾಲ ವೈಕುಂಠ ದ್ವಾರವನ್ನ ತೆರೆಯಲು ಟಿಟಿಡಿ ನಿರ್ಧರಿಸಿದೆ. ಈ ಹಿನ್ನೆಲೆ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಪಡೆಯಲು ಭಕ್ತರು ಕೂಡ ಉತ್ಸುಕರಾಗಿದ್ದಾರೆ. ವೈಕುಂಠ ದ್ವಾರದ ಮೂಲಕ ಶ್ರೀವಾರಿಯ ದರ್ಶನ ಪಡೆದ್ರೆ ಪುಣ್ಯ ಸಿಗುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗಿ, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬಾಲಾಜಿಯ ಸನ್ನಿಧಿಯತ್ತ ಹೆಜ್ಜೆ ಹಾಕ್ತಿದ್ದಾರೆ.

ವೈಕುಂಠ ಏಕಾದಶಿ ಹಿನ್ನೆಲೆ ಇಂದು ಸ್ವರ್ಣ ರಥೋತ್ಸವ ನಡೆಯಲಿದ್ದು, ನಾಳೆ ಬೆಳಗ್ಗೆ 6 ಗಂಟೆಗೆ ಪುಷ್ಕರಣಿಯಲ್ಲಿ ಚಕ್ರಸ್ನಾನ ಜರುಗಲಿದೆ. ಇನ್ನು ವೈಕುಂಠ ದ್ವಾರ ತೆರೆಯುತ್ತಿರೋದ್ರಿಂದ ಭಕ್ತರಿಗೆ ನೇರವಾಗಿ ವೆಂಕಟೇಶ್ವರನ ದರ್ಶನ ಸಿಗಲಿದೆ. ಬೆಳಗಿನ ಜಾವ 1.30ರಿಂದ 4.30ರವರೆಗೆ ವಿಐಪಿಗಳ ದರ್ಶನಕ್ಕೆ ವ್ಯವಸ್ಥೆ ಮಾಡಿದ್ರೆ. ಉಳಿದ ಅವಧಿಯಲ್ಲಿ ಸಾಮಾನ್ಯ ಭಕ್ತರಿಗೆ ಶ್ರೀವಾರಿಯ ದರ್ಶನ ಸಿಗಲಿದೆ.

ತಿರುಮಲಕ್ಕೆ ಬರುವ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಟಿಟಿಡಿ ಸಿದ್ಧತೆ ಮಾಡಿಕೊಂಡಿದೆ. 1.70 ಕೋಟಿ ವೆಚ್ಚದಲ್ಲಿ ಅನ್ನ ಸಂತರ್ಪಣೆ, ಕುಡಿಯೋ ನೀರು ಸೇರಿದಂತೆ ವಿವಿಧ ಸೌಕರ್ಯಗಳ ಏರ್ಪಾಡು ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸ್ತಿರೋ ಹಿನ್ನೆಲೆ ಎಲ್ಲಾ ರೀತಿಯ ಪಾವತಿ ದರ್ಶನಗಳನ್ನ ಕೂಡ ರದ್ದು ಮಾಡಲಾಗಿದೆ. ಒಟ್ನಲ್ಲಿ, ತಿರುಮಲದಲ್ಲಿ ವೈಕುಂಠ ಏಕಾದಶಿ ಹಾಗೂ ದ್ವಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಪಡೆಯಲು ಭಕ್ತರ ದಂಡೇ ಹರಿದು ಬರ್ತಿದೆ.

Published On - 6:45 am, Mon, 6 January 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?