AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲದಲ್ಲಿ ವೈಕುಂಠ ದ್ವಾರದ ಮೂಲಕ ಸಿಗಲಿದೆ ‘ವೆಂಕಟೇಶ್ವರ’ನ ದರ್ಶನ

ಹೈದರಾಬಾದ್: ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನ ಆಲಯದಲ್ಲಿ ಇಂದು ಸಂಭ್ರಮ. ತಿಮ್ಮಪ್ಪನ ಸನ್ನಿಧಾನಕ್ಕೆ ಭಕ್ತಸಾಗರವೇ ಹರಿದು ಬರುತ್ತೆ. ಹೂವಿನ ಅಲಂಕಾರದೊಂದಿಗೆ ದೇಗುಲ ಝಗಮಗಿಸುತ್ತೆ. ಎಲ್ಲೆಡೆ ಗೋವಿಂದನ ಸ್ಮರಣೆ ಮೊಳಗುತ್ತೆ. ತಿರುಮಲದಲ್ಲಿ ವೈಕುಂಠ ಏಕಾದಶಿ, ದ್ವಾದಶಿ ಸಂಭ್ರಮ: ಹೌದು, ತಿರುಪತಿ ತಿರುಮಲದಲ್ಲಿ ವೈಕುಂಠ ಏಕಾದಶಿ ಮತ್ತು ದ್ವಾದಶಿ ಸಂಭ್ರಮ ಮನೆ ಮಾಡಿದೆ. ಉತ್ಸವ ಹಿನ್ನೆಲೆ ಇಂದಿನಿಂದ ಎರಡು ದಿನಗಳ ಕಾಲ ವೈಕುಂಠ ದ್ವಾರವನ್ನ ತೆರೆಯಲು ಟಿಟಿಡಿ ನಿರ್ಧರಿಸಿದೆ. ಈ ಹಿನ್ನೆಲೆ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಪಡೆಯಲು […]

ತಿರುಮಲದಲ್ಲಿ ವೈಕುಂಠ ದ್ವಾರದ ಮೂಲಕ ಸಿಗಲಿದೆ ‘ವೆಂಕಟೇಶ್ವರ’ನ ದರ್ಶನ
ಸಾಧು ಶ್ರೀನಾಥ್​
|

Updated on:Jan 06, 2020 | 6:46 AM

Share

ಹೈದರಾಬಾದ್: ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನ ಆಲಯದಲ್ಲಿ ಇಂದು ಸಂಭ್ರಮ. ತಿಮ್ಮಪ್ಪನ ಸನ್ನಿಧಾನಕ್ಕೆ ಭಕ್ತಸಾಗರವೇ ಹರಿದು ಬರುತ್ತೆ. ಹೂವಿನ ಅಲಂಕಾರದೊಂದಿಗೆ ದೇಗುಲ ಝಗಮಗಿಸುತ್ತೆ. ಎಲ್ಲೆಡೆ ಗೋವಿಂದನ ಸ್ಮರಣೆ ಮೊಳಗುತ್ತೆ.

ತಿರುಮಲದಲ್ಲಿ ವೈಕುಂಠ ಏಕಾದಶಿ, ದ್ವಾದಶಿ ಸಂಭ್ರಮ: ಹೌದು, ತಿರುಪತಿ ತಿರುಮಲದಲ್ಲಿ ವೈಕುಂಠ ಏಕಾದಶಿ ಮತ್ತು ದ್ವಾದಶಿ ಸಂಭ್ರಮ ಮನೆ ಮಾಡಿದೆ. ಉತ್ಸವ ಹಿನ್ನೆಲೆ ಇಂದಿನಿಂದ ಎರಡು ದಿನಗಳ ಕಾಲ ವೈಕುಂಠ ದ್ವಾರವನ್ನ ತೆರೆಯಲು ಟಿಟಿಡಿ ನಿರ್ಧರಿಸಿದೆ. ಈ ಹಿನ್ನೆಲೆ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಪಡೆಯಲು ಭಕ್ತರು ಕೂಡ ಉತ್ಸುಕರಾಗಿದ್ದಾರೆ. ವೈಕುಂಠ ದ್ವಾರದ ಮೂಲಕ ಶ್ರೀವಾರಿಯ ದರ್ಶನ ಪಡೆದ್ರೆ ಪುಣ್ಯ ಸಿಗುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗಿ, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬಾಲಾಜಿಯ ಸನ್ನಿಧಿಯತ್ತ ಹೆಜ್ಜೆ ಹಾಕ್ತಿದ್ದಾರೆ.

ವೈಕುಂಠ ಏಕಾದಶಿ ಹಿನ್ನೆಲೆ ಇಂದು ಸ್ವರ್ಣ ರಥೋತ್ಸವ ನಡೆಯಲಿದ್ದು, ನಾಳೆ ಬೆಳಗ್ಗೆ 6 ಗಂಟೆಗೆ ಪುಷ್ಕರಣಿಯಲ್ಲಿ ಚಕ್ರಸ್ನಾನ ಜರುಗಲಿದೆ. ಇನ್ನು ವೈಕುಂಠ ದ್ವಾರ ತೆರೆಯುತ್ತಿರೋದ್ರಿಂದ ಭಕ್ತರಿಗೆ ನೇರವಾಗಿ ವೆಂಕಟೇಶ್ವರನ ದರ್ಶನ ಸಿಗಲಿದೆ. ಬೆಳಗಿನ ಜಾವ 1.30ರಿಂದ 4.30ರವರೆಗೆ ವಿಐಪಿಗಳ ದರ್ಶನಕ್ಕೆ ವ್ಯವಸ್ಥೆ ಮಾಡಿದ್ರೆ. ಉಳಿದ ಅವಧಿಯಲ್ಲಿ ಸಾಮಾನ್ಯ ಭಕ್ತರಿಗೆ ಶ್ರೀವಾರಿಯ ದರ್ಶನ ಸಿಗಲಿದೆ.

ತಿರುಮಲಕ್ಕೆ ಬರುವ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಟಿಟಿಡಿ ಸಿದ್ಧತೆ ಮಾಡಿಕೊಂಡಿದೆ. 1.70 ಕೋಟಿ ವೆಚ್ಚದಲ್ಲಿ ಅನ್ನ ಸಂತರ್ಪಣೆ, ಕುಡಿಯೋ ನೀರು ಸೇರಿದಂತೆ ವಿವಿಧ ಸೌಕರ್ಯಗಳ ಏರ್ಪಾಡು ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸ್ತಿರೋ ಹಿನ್ನೆಲೆ ಎಲ್ಲಾ ರೀತಿಯ ಪಾವತಿ ದರ್ಶನಗಳನ್ನ ಕೂಡ ರದ್ದು ಮಾಡಲಾಗಿದೆ. ಒಟ್ನಲ್ಲಿ, ತಿರುಮಲದಲ್ಲಿ ವೈಕುಂಠ ಏಕಾದಶಿ ಹಾಗೂ ದ್ವಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಪಡೆಯಲು ಭಕ್ತರ ದಂಡೇ ಹರಿದು ಬರ್ತಿದೆ.

Published On - 6:45 am, Mon, 6 January 20

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ