AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲದಲ್ಲಿ ವೈಕುಂಠ ದ್ವಾರದ ಮೂಲಕ ಸಿಗಲಿದೆ ‘ವೆಂಕಟೇಶ್ವರ’ನ ದರ್ಶನ

ಹೈದರಾಬಾದ್: ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನ ಆಲಯದಲ್ಲಿ ಇಂದು ಸಂಭ್ರಮ. ತಿಮ್ಮಪ್ಪನ ಸನ್ನಿಧಾನಕ್ಕೆ ಭಕ್ತಸಾಗರವೇ ಹರಿದು ಬರುತ್ತೆ. ಹೂವಿನ ಅಲಂಕಾರದೊಂದಿಗೆ ದೇಗುಲ ಝಗಮಗಿಸುತ್ತೆ. ಎಲ್ಲೆಡೆ ಗೋವಿಂದನ ಸ್ಮರಣೆ ಮೊಳಗುತ್ತೆ. ತಿರುಮಲದಲ್ಲಿ ವೈಕುಂಠ ಏಕಾದಶಿ, ದ್ವಾದಶಿ ಸಂಭ್ರಮ: ಹೌದು, ತಿರುಪತಿ ತಿರುಮಲದಲ್ಲಿ ವೈಕುಂಠ ಏಕಾದಶಿ ಮತ್ತು ದ್ವಾದಶಿ ಸಂಭ್ರಮ ಮನೆ ಮಾಡಿದೆ. ಉತ್ಸವ ಹಿನ್ನೆಲೆ ಇಂದಿನಿಂದ ಎರಡು ದಿನಗಳ ಕಾಲ ವೈಕುಂಠ ದ್ವಾರವನ್ನ ತೆರೆಯಲು ಟಿಟಿಡಿ ನಿರ್ಧರಿಸಿದೆ. ಈ ಹಿನ್ನೆಲೆ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಪಡೆಯಲು […]

ತಿರುಮಲದಲ್ಲಿ ವೈಕುಂಠ ದ್ವಾರದ ಮೂಲಕ ಸಿಗಲಿದೆ ‘ವೆಂಕಟೇಶ್ವರ’ನ ದರ್ಶನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 06, 2020 | 6:46 AM

Share

ಹೈದರಾಬಾದ್: ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನ ಆಲಯದಲ್ಲಿ ಇಂದು ಸಂಭ್ರಮ. ತಿಮ್ಮಪ್ಪನ ಸನ್ನಿಧಾನಕ್ಕೆ ಭಕ್ತಸಾಗರವೇ ಹರಿದು ಬರುತ್ತೆ. ಹೂವಿನ ಅಲಂಕಾರದೊಂದಿಗೆ ದೇಗುಲ ಝಗಮಗಿಸುತ್ತೆ. ಎಲ್ಲೆಡೆ ಗೋವಿಂದನ ಸ್ಮರಣೆ ಮೊಳಗುತ್ತೆ.

ತಿರುಮಲದಲ್ಲಿ ವೈಕುಂಠ ಏಕಾದಶಿ, ದ್ವಾದಶಿ ಸಂಭ್ರಮ: ಹೌದು, ತಿರುಪತಿ ತಿರುಮಲದಲ್ಲಿ ವೈಕುಂಠ ಏಕಾದಶಿ ಮತ್ತು ದ್ವಾದಶಿ ಸಂಭ್ರಮ ಮನೆ ಮಾಡಿದೆ. ಉತ್ಸವ ಹಿನ್ನೆಲೆ ಇಂದಿನಿಂದ ಎರಡು ದಿನಗಳ ಕಾಲ ವೈಕುಂಠ ದ್ವಾರವನ್ನ ತೆರೆಯಲು ಟಿಟಿಡಿ ನಿರ್ಧರಿಸಿದೆ. ಈ ಹಿನ್ನೆಲೆ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಪಡೆಯಲು ಭಕ್ತರು ಕೂಡ ಉತ್ಸುಕರಾಗಿದ್ದಾರೆ. ವೈಕುಂಠ ದ್ವಾರದ ಮೂಲಕ ಶ್ರೀವಾರಿಯ ದರ್ಶನ ಪಡೆದ್ರೆ ಪುಣ್ಯ ಸಿಗುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗಿ, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬಾಲಾಜಿಯ ಸನ್ನಿಧಿಯತ್ತ ಹೆಜ್ಜೆ ಹಾಕ್ತಿದ್ದಾರೆ.

ವೈಕುಂಠ ಏಕಾದಶಿ ಹಿನ್ನೆಲೆ ಇಂದು ಸ್ವರ್ಣ ರಥೋತ್ಸವ ನಡೆಯಲಿದ್ದು, ನಾಳೆ ಬೆಳಗ್ಗೆ 6 ಗಂಟೆಗೆ ಪುಷ್ಕರಣಿಯಲ್ಲಿ ಚಕ್ರಸ್ನಾನ ಜರುಗಲಿದೆ. ಇನ್ನು ವೈಕುಂಠ ದ್ವಾರ ತೆರೆಯುತ್ತಿರೋದ್ರಿಂದ ಭಕ್ತರಿಗೆ ನೇರವಾಗಿ ವೆಂಕಟೇಶ್ವರನ ದರ್ಶನ ಸಿಗಲಿದೆ. ಬೆಳಗಿನ ಜಾವ 1.30ರಿಂದ 4.30ರವರೆಗೆ ವಿಐಪಿಗಳ ದರ್ಶನಕ್ಕೆ ವ್ಯವಸ್ಥೆ ಮಾಡಿದ್ರೆ. ಉಳಿದ ಅವಧಿಯಲ್ಲಿ ಸಾಮಾನ್ಯ ಭಕ್ತರಿಗೆ ಶ್ರೀವಾರಿಯ ದರ್ಶನ ಸಿಗಲಿದೆ.

ತಿರುಮಲಕ್ಕೆ ಬರುವ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನ ನೀಡಲು ಟಿಟಿಡಿ ಸಿದ್ಧತೆ ಮಾಡಿಕೊಂಡಿದೆ. 1.70 ಕೋಟಿ ವೆಚ್ಚದಲ್ಲಿ ಅನ್ನ ಸಂತರ್ಪಣೆ, ಕುಡಿಯೋ ನೀರು ಸೇರಿದಂತೆ ವಿವಿಧ ಸೌಕರ್ಯಗಳ ಏರ್ಪಾಡು ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸ್ತಿರೋ ಹಿನ್ನೆಲೆ ಎಲ್ಲಾ ರೀತಿಯ ಪಾವತಿ ದರ್ಶನಗಳನ್ನ ಕೂಡ ರದ್ದು ಮಾಡಲಾಗಿದೆ. ಒಟ್ನಲ್ಲಿ, ತಿರುಮಲದಲ್ಲಿ ವೈಕುಂಠ ಏಕಾದಶಿ ಹಾಗೂ ದ್ವಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಪಡೆಯಲು ಭಕ್ತರ ದಂಡೇ ಹರಿದು ಬರ್ತಿದೆ.

Published On - 6:45 am, Mon, 6 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ