AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ರೈಲ್ವೆ ಹೊಸ ಪ್ರಯತ್ನ: ರಿಸರ್ವೇಶನ್ ಇಲ್ಲದ ಎಕ್ಸ್​ಪ್ರೆಸ್ ರೈಲುಗಳ ಸಂಚಾರ

ದೇಶದಲ್ಲಿ ಕೊರೊನಾ ಪಿಡುಗು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯು ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ರೈಲು ಸಂಚಾರವನ್ನು ಹಂತಹಂತವಾಗಿ ಆರಂಭಿಸಿದೆ. ಉತ್ತರ ರೈಲ್ವೆಯು ರಿಸರ್ವೇಶನ್ ಇಲ್ಲದ ಮೈಲ್ ಮತ್ತು ಎಕ್ಸ್​ಪ್ರೆಸ್​ ರೈಲುಗಳನ್ನು ಆರಂಭಿಸುವುದಾಗಿ ಘೋಷಿಸಿದೆ.

ಭಾರತೀಯ ರೈಲ್ವೆ ಹೊಸ ಪ್ರಯತ್ನ: ರಿಸರ್ವೇಶನ್ ಇಲ್ಲದ ಎಕ್ಸ್​ಪ್ರೆಸ್ ರೈಲುಗಳ ಸಂಚಾರ
ಸಂಗ್ರಹ ಚಿತ್ರ
TV9 Web
| Edited By: |

Updated on: Sep 29, 2021 | 5:42 PM

Share

ದೆಹಲಿ: ದೇಶದಲ್ಲಿ ಕೊರೊನಾ ಪಿಡುಗು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯು ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ರೈಲು ಸಂಚಾರವನ್ನು ಹಂತಹಂತವಾಗಿ ಆರಂಭಿಸಿದೆ. ಉತ್ತರ ರೈಲ್ವೆಯು ರಿಸರ್ವೇಶನ್ ಇಲ್ಲದ ಮೈಲ್ ಮತ್ತು ಎಕ್ಸ್​ಪ್ರೆಸ್​ ರೈಲುಗಳನ್ನು ಆರಂಭಿಸುವುದಾಗಿ ಘೋಷಿಸಿದೆ. ಶಾಮ್ಲಿ, ದೆಹಲಿ, ಶದಾರಾ, ಪ್ರಯಾಗ್​ರಾಜ್ ಸಂಗಮ್, ಫೈಜಾಬಾದ್ ಮತ್ತು ಜೌನ್​ಪುರ್ ಮಾರ್ಗಗಳಲ್ಲಿ ಹೊಸ ರೈಲುಗಳು ಅಕ್ಟೋಬರ್ 1ರಿಂದ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ‘ಭಾನುವಾರ ಹೊರತುಪಡಿಸಿ ಅಕ್ಟೋಬರ್ 1ರಿಂದ ಪ್ರತಿದಿನ ಅನ್​ರಿಸರ್ವ್​ಡ್ ಮೈಲ್ ಮತ್ತು ಎಕ್ಸ್​ಪ್ರೆಸ್ ರೈಲುಗಳು ಸಂಚರಿಸಲಿವೆ’ ಎಂದು ರೈಲ್ವೆ ಇಲಾಖೆ ವಕ್ತಾರ ದೀಪಕ್ ಕುಮಾರ್ ಹೇಳಿದ್ದಾರೆ.

ರೈಲುಗಳ ವಿವರ ಶಾಮ್ಲಿ-ದೆಹಲಿ ಶಾಹ್​ದಾರಾ ಸ್ಪೆಷಲ್ ಟ್ರೇನ್, ಪ್ರಯಾಗ್​ರಾಜ್ ಸಂಗಮ್-ಫೈಜಾಬಾದ್-ಪ್ರಯಾಗ್​ರಾಜ್ ಸಂಗಮ್ ಅನ್​ರಿಸರ್ವಡ್​ ಎಕ್ಸ್​ಪ್ರೆಸ್​, ಪ್ರಯಾಗ್​ರಾಜ್ ಸಂಗಮ್-ಜೌನ್​ಪುರ್ ಅನ್​ರಿಸರ್ವಡ್ ಮೈಲ್ ರೈಲುಗಳ ಸಂಚಾರ ಅಕ್ಟೋಬರ್ 1ರಿಂದ ಆರಂಭವಾಗಲಿದೆ.

ಚಾರ್​ಧಾಮ್​ಗೆ ಶೀಘ್ರ ಸುಲಭ ಸಂಪರ್ಕ ಹೃಷಿಕೇಶ್-ಕರ್ಣಪ್ರಯಾಗ್ ರೈಲು ಹಳಿ ಯೋಜನೆ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ರಾಜ್ಯ ಸಚಿವ ದರ್ಶನಾ ಜಾರ್ದೋಶ್ ಹೇಳಿದ್ದಾರೆ. ಉತ್ತರಾಖಂಡದ ಹೃಷಿಕೇಶ್-ಕರ್ಣಪ್ರಯಾಗ್ ರೈಲ್ವೆ ಮಾರ್ಗದ ಪ್ರಗತಿ ಪರಿಶೀಲನೆ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಈ ಮಾರ್ಗದಲ್ಲಿ 15.1 ಕಿಮೀ ಅಂತರದ ಸುರಂಗ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಹೃಷಿಕೇಶ್-ಕರ್ಣಪ್ರಯಾಗ್ ರೈಲು ಮಾರ್ಗವು 125 ಕಿಮೀ ದೂರದಲ್ಲಿ ಸಾಗಿ ಹೋಗುತ್ತದೆ. ಈ ಮಾರ್ಗದಲ್ಲಿ ಶ್ರೀನಗರ, ರುದ್ರಪ್ರಯಾಗ, ದೇವಪ್ರಯಾಗ, ಕರ್ಣಪ್ರಯಾಗ, ಗೌಚಾರ್, ಡೆಹ್ರಾಡೂನ್, ಪೌರಿ ಗರ್​ವಾಲ್, ತೆಹ್ರಿ ಗರ್​ವಾಲ್, ಚಮೋಲಿ ನಿಲ್ದಾಣಗಳು ಬರುತ್ತವೆ.

(Unreserved Trains to Start from October 1 says Indian Railways Spokesperson)

ಇದನ್ನೂ ಓದಿ: ಅದ್ದೂರಿಯಾಗಿ ಆರಂಭವಾದ 6 ತಿಂಗಳಿಗೆ ನಿಂತ ಕೆಂಪೇಗೌಡ ಏರ್ಪೋರ್ಟ್ ರೈಲು; ಲಾಕ್​ಡೌನ್​ ಮುಗಿದರೂ ಸಂಚಾರ ಸ್ಥಗಿತ

ಇದನ್ನೂ ಓದಿ: Shocking Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು