AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ರೈಲ್ವೆ ಹೊಸ ಪ್ರಯತ್ನ: ರಿಸರ್ವೇಶನ್ ಇಲ್ಲದ ಎಕ್ಸ್​ಪ್ರೆಸ್ ರೈಲುಗಳ ಸಂಚಾರ

ದೇಶದಲ್ಲಿ ಕೊರೊನಾ ಪಿಡುಗು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯು ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ರೈಲು ಸಂಚಾರವನ್ನು ಹಂತಹಂತವಾಗಿ ಆರಂಭಿಸಿದೆ. ಉತ್ತರ ರೈಲ್ವೆಯು ರಿಸರ್ವೇಶನ್ ಇಲ್ಲದ ಮೈಲ್ ಮತ್ತು ಎಕ್ಸ್​ಪ್ರೆಸ್​ ರೈಲುಗಳನ್ನು ಆರಂಭಿಸುವುದಾಗಿ ಘೋಷಿಸಿದೆ.

ಭಾರತೀಯ ರೈಲ್ವೆ ಹೊಸ ಪ್ರಯತ್ನ: ರಿಸರ್ವೇಶನ್ ಇಲ್ಲದ ಎಕ್ಸ್​ಪ್ರೆಸ್ ರೈಲುಗಳ ಸಂಚಾರ
ಸಂಗ್ರಹ ಚಿತ್ರ
TV9 Web
| Edited By: |

Updated on: Sep 29, 2021 | 5:42 PM

Share

ದೆಹಲಿ: ದೇಶದಲ್ಲಿ ಕೊರೊನಾ ಪಿಡುಗು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯು ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ರೈಲು ಸಂಚಾರವನ್ನು ಹಂತಹಂತವಾಗಿ ಆರಂಭಿಸಿದೆ. ಉತ್ತರ ರೈಲ್ವೆಯು ರಿಸರ್ವೇಶನ್ ಇಲ್ಲದ ಮೈಲ್ ಮತ್ತು ಎಕ್ಸ್​ಪ್ರೆಸ್​ ರೈಲುಗಳನ್ನು ಆರಂಭಿಸುವುದಾಗಿ ಘೋಷಿಸಿದೆ. ಶಾಮ್ಲಿ, ದೆಹಲಿ, ಶದಾರಾ, ಪ್ರಯಾಗ್​ರಾಜ್ ಸಂಗಮ್, ಫೈಜಾಬಾದ್ ಮತ್ತು ಜೌನ್​ಪುರ್ ಮಾರ್ಗಗಳಲ್ಲಿ ಹೊಸ ರೈಲುಗಳು ಅಕ್ಟೋಬರ್ 1ರಿಂದ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ‘ಭಾನುವಾರ ಹೊರತುಪಡಿಸಿ ಅಕ್ಟೋಬರ್ 1ರಿಂದ ಪ್ರತಿದಿನ ಅನ್​ರಿಸರ್ವ್​ಡ್ ಮೈಲ್ ಮತ್ತು ಎಕ್ಸ್​ಪ್ರೆಸ್ ರೈಲುಗಳು ಸಂಚರಿಸಲಿವೆ’ ಎಂದು ರೈಲ್ವೆ ಇಲಾಖೆ ವಕ್ತಾರ ದೀಪಕ್ ಕುಮಾರ್ ಹೇಳಿದ್ದಾರೆ.

ರೈಲುಗಳ ವಿವರ ಶಾಮ್ಲಿ-ದೆಹಲಿ ಶಾಹ್​ದಾರಾ ಸ್ಪೆಷಲ್ ಟ್ರೇನ್, ಪ್ರಯಾಗ್​ರಾಜ್ ಸಂಗಮ್-ಫೈಜಾಬಾದ್-ಪ್ರಯಾಗ್​ರಾಜ್ ಸಂಗಮ್ ಅನ್​ರಿಸರ್ವಡ್​ ಎಕ್ಸ್​ಪ್ರೆಸ್​, ಪ್ರಯಾಗ್​ರಾಜ್ ಸಂಗಮ್-ಜೌನ್​ಪುರ್ ಅನ್​ರಿಸರ್ವಡ್ ಮೈಲ್ ರೈಲುಗಳ ಸಂಚಾರ ಅಕ್ಟೋಬರ್ 1ರಿಂದ ಆರಂಭವಾಗಲಿದೆ.

ಚಾರ್​ಧಾಮ್​ಗೆ ಶೀಘ್ರ ಸುಲಭ ಸಂಪರ್ಕ ಹೃಷಿಕೇಶ್-ಕರ್ಣಪ್ರಯಾಗ್ ರೈಲು ಹಳಿ ಯೋಜನೆ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ರಾಜ್ಯ ಸಚಿವ ದರ್ಶನಾ ಜಾರ್ದೋಶ್ ಹೇಳಿದ್ದಾರೆ. ಉತ್ತರಾಖಂಡದ ಹೃಷಿಕೇಶ್-ಕರ್ಣಪ್ರಯಾಗ್ ರೈಲ್ವೆ ಮಾರ್ಗದ ಪ್ರಗತಿ ಪರಿಶೀಲನೆ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಈ ಮಾರ್ಗದಲ್ಲಿ 15.1 ಕಿಮೀ ಅಂತರದ ಸುರಂಗ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಹೃಷಿಕೇಶ್-ಕರ್ಣಪ್ರಯಾಗ್ ರೈಲು ಮಾರ್ಗವು 125 ಕಿಮೀ ದೂರದಲ್ಲಿ ಸಾಗಿ ಹೋಗುತ್ತದೆ. ಈ ಮಾರ್ಗದಲ್ಲಿ ಶ್ರೀನಗರ, ರುದ್ರಪ್ರಯಾಗ, ದೇವಪ್ರಯಾಗ, ಕರ್ಣಪ್ರಯಾಗ, ಗೌಚಾರ್, ಡೆಹ್ರಾಡೂನ್, ಪೌರಿ ಗರ್​ವಾಲ್, ತೆಹ್ರಿ ಗರ್​ವಾಲ್, ಚಮೋಲಿ ನಿಲ್ದಾಣಗಳು ಬರುತ್ತವೆ.

(Unreserved Trains to Start from October 1 says Indian Railways Spokesperson)

ಇದನ್ನೂ ಓದಿ: ಅದ್ದೂರಿಯಾಗಿ ಆರಂಭವಾದ 6 ತಿಂಗಳಿಗೆ ನಿಂತ ಕೆಂಪೇಗೌಡ ಏರ್ಪೋರ್ಟ್ ರೈಲು; ಲಾಕ್​ಡೌನ್​ ಮುಗಿದರೂ ಸಂಚಾರ ಸ್ಥಗಿತ

ಇದನ್ನೂ ಓದಿ: Shocking Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ