Sign In

By signing in or creating an account, you agree with Associated Broadcasting Company's Terms & Conditions and Privacy Policy.

Unsung Hero: ನಾಪತ್ತೆಯಾಗಿದ್ದ ಮಗುವನ್ನು ರಕ್ಷಿಸಿ ರಾತ್ರೋರಾತ್ರಿ ಪ್ರಸಿದ್ಧಳಾದ ಶಾಲಾ ಬಾಲಕಿ

ಮಗುವನ್ನು ಸುರಕ್ಷಿತವಾಗಿ ತಂದೆ-ತಾಯಿಗೆ ನೀಡಲು ಪೊಲೀಸರಿಗೆ ಸಹಾಯ ಮಾಡಿದ್ದಕ್ಕಾಗಿ ಪೊಲೀಸ್ ಆಯುಕ್ತ ಅಲೋಕ್ ಸಿಂಗ್ ಶಾಲೆಗೆ ಹೋಗುವ ಬಾಲಕಿಗೆ ವಿಶೇಷ ಬಹುಮಾನವನ್ನು ಘೋಷಿಸಿದ್ದಾರೆ.

Unsung Hero: ನಾಪತ್ತೆಯಾಗಿದ್ದ ಮಗುವನ್ನು ರಕ್ಷಿಸಿ ರಾತ್ರೋರಾತ್ರಿ ಪ್ರಸಿದ್ಧಳಾದ ಶಾಲಾ ಬಾಲಕಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 16, 2022 | 2:34 PM

ನೋಯ್ಡಾ: ಕಳೆದುಹೋದ ಮಗುವನ್ನು ಮತ್ತೆ ಕುಟುಂಬದೊಂದಿಗೆ ಸೇರಿಸಲು ನೋಯ್ಡಾ ಪೊಲೀಸರಿಗೆ ಸಹಾಯ ಮಾಡಿದ 14 ವರ್ಷದ ಬಾಲಕಿ ರಾತ್ರೋರಾತ್ರಿ ಹೀರೋ ಆಗಿದ್ದಾಳೆ. ಮಗು ಕಳೆದುಹೋಗಿದೆ ಎಂದು ಪೊಲೀಸರಿಗೆ ರಾತ್ರಿ 9.30ಕ್ಕೆ ಮಾಹಿತಿ ಸಿಕ್ಕಿತ್ತು. ಹೀಗಾಗಿ, ಕೂಡಲೇ ಪೊಲೀಸರು ಎರಡೂವರೆ ವರ್ಷದ ಮಗುವಿನ ಪತ್ತೆಗಾಗಿ ರಾತ್ರಿಯಿಡೀ ಶೋಧ ನಡೆಸಿದರು. ಆದರೂ ಮಗು ಸಿಕ್ಕಿರಲಿಲ್ಲ. ಮಗು ಬುಧವಾರ ಗಿಜೋಡ್ ಗ್ರಾಮದಿಂದ ನಾಪತ್ತೆಯಾಗಿತ್ತು. ಅದರ ನಂತರ ಸ್ಥಳೀಯ ಪೊಲೀಸರು ಮಗುವಿಗಾಗಿ ಹುಡುಕಾಟ ಆರಂಭಿಸಿದ್ದರು.

ಆರು ಗಂಟೆಗಳ ಹುಡುಕಾಟದ ನಂತರ ಸೆಕ್ಟರ್ 14ರ ಕೊಳೆಗೇರಿಯಲ್ಲಿ ಮಗು ಪತ್ತೆಯಾಗಿತ್ತು. ನಾಪತ್ತೆಯಾಗಿದ್ದ ಮಗು ಕಾಶಿಶ್ ಕುಮಾರಿ ಎಂಬ 14 ವರ್ಷದ ಬಾಲಕಿಯ ಆರೈಕೆಯಲ್ಲಿ ಆರಾಮಾಗಿತ್ತು. ಮಧ್ಯರಾತ್ರಿಯ ವೇಳೆಗೆ ಆ ಬಾಲಕಿಯ ಮನೆಯ ಬಳಿ ಆ ಮಗುವನ್ನಿಟ್ಟು ಹೋಗಲಾಗಿತ್ತು. ಹೀಗಾಗಿ, ಆ ಮಗುವನ್ನು ಮನೆಯೊಳಗೆ ತೆಗೆದುಕೊಂಡು ಹೋಗಿ ಆ ಬಾಲಕಿ ಆರೈಕೆ ಮಾಡಿದ್ದಳು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಮಗುವನ್ನು ಸುರಕ್ಷಿತವಾಗಿ ತಂದೆ-ತಾಯಿಗೆ ನೀಡಲು ಪೊಲೀಸರಿಗೆ ಸಹಾಯ ಮಾಡಿದ್ದಕ್ಕಾಗಿ ಪೊಲೀಸ್ ಆಯುಕ್ತ ಅಲೋಕ್ ಸಿಂಗ್ ಶಾಲೆಗೆ ಹೋಗುವ ಬಾಲಕಿಗೆ ವಿಶೇಷ ಬಹುಮಾನವನ್ನು ಘೋಷಿಸಿದ್ದಾರೆ. ಮಗುವಿನ ಹುಡುಕಾಟದಲ್ಲಿ ತೊಡಗಿದ್ದ ಪೊಲೀಸ್ ತಂಡಕ್ಕೆ 25,000 ರೂ. ನಗದು ಬಹುಮಾನ ನೀಡಲಾಗುವುದು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಎಸಿಪಿ (ನೋಯ್ಡಾ 2) ರಜನೀಶ್ ವರ್ಮಾ ಅವರ ಮೇಲ್ವಿಚಾರಣೆಯಲ್ಲಿ ಮಗುವನ್ನು ನೋಡಲು ಎರಡು ತಂಡಗಳನ್ನು ರಚಿಸಲಾಗಿತ್ತು. ಸೆಕ್ಟರ್ 24 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಉಪ ಪೊಲೀಸ್ ಆಯುಕ್ತ (ನೋಯ್ಡಾ) ರಾಜೇಶ್ ಎಸ್ ಹೇಳಿದ್ದಾರೆ. ಒಂದು ತಂಡವು ಕಾಣೆಯಾದ ಮಗುವನ್ನು ಹುಡುಕಲು ಮತ್ತು ಮಗುವಿನ ಬಗ್ಗೆ ಸ್ಥಳೀಯರನ್ನು ಕೇಳಲು ಹೋದರೆ, ಇನ್ನೊಂದು ತಂಡವು ಸುತ್ತಮುತ್ತಲೂ ಅನುಮಾನಾಸ್ಪದ ಚಲನವಲನಗಳನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಪ್ರಾರಂಭಿಸಿತು ಎಂದು ರಾಜೇಶ್ ಹೇಳಿದ್ದಾರೆ.

ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾಶಿಶ್ ಮಗುವಿನ ಪೋಷಕರ ಬಗ್ಗೆ ವಿಚಾರಿಸುತ್ತಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ತಕ್ಷಣ ಕಾಶಿಶ್ ಅವರ ಮನೆಗೆ ಹೋಗಿ ನೋಡಿದಾಗ ಆಕೆಯ ಬಳಿ ನಾಪತ್ತೆಯಾಗಿದ್ದ ಮಗು ಸುರಕ್ಷಿತವಾಗಿತ್ತು. ಅನಾಥವಾಗಿ ಬಿದ್ದಿದ್ದ ಮಗುವನ್ನು ಜವಾಬ್ದಾರಿಯಿಂದ ತೆಗೆದುಕೊಂಡು ಹೋಗಿ ಕಾಪಾಡಿರುವುದಕ್ಕೆ ಆ ಬಾಲಕಿಯನ್ನು ಸನ್ಮಾನಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Viral News: ಕೈದಿಯ ಹೆಂಡತಿ ಗರ್ಭಿಣಿಯಾಗಲೆಂದು ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿಗೆ 15 ದಿನಗಳ ಪೆರೋಲ್!

Viral News: ಗಾಳಿಯ ರಭಸಕ್ಕೆ ತಲೆ ಮೇಲಿಂದ ಹಾರಿ ಹೋಯ್ತು ವಿಗ್; ನಕ್ಕು ನಕ್ಕು ಸುಸ್ತಾದ ನೆಟ್ಟಿಗರು

Published On - 2:32 pm, Sat, 16 April 22

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್