AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unsung Hero: ನಾಪತ್ತೆಯಾಗಿದ್ದ ಮಗುವನ್ನು ರಕ್ಷಿಸಿ ರಾತ್ರೋರಾತ್ರಿ ಪ್ರಸಿದ್ಧಳಾದ ಶಾಲಾ ಬಾಲಕಿ

ಮಗುವನ್ನು ಸುರಕ್ಷಿತವಾಗಿ ತಂದೆ-ತಾಯಿಗೆ ನೀಡಲು ಪೊಲೀಸರಿಗೆ ಸಹಾಯ ಮಾಡಿದ್ದಕ್ಕಾಗಿ ಪೊಲೀಸ್ ಆಯುಕ್ತ ಅಲೋಕ್ ಸಿಂಗ್ ಶಾಲೆಗೆ ಹೋಗುವ ಬಾಲಕಿಗೆ ವಿಶೇಷ ಬಹುಮಾನವನ್ನು ಘೋಷಿಸಿದ್ದಾರೆ.

Unsung Hero: ನಾಪತ್ತೆಯಾಗಿದ್ದ ಮಗುವನ್ನು ರಕ್ಷಿಸಿ ರಾತ್ರೋರಾತ್ರಿ ಪ್ರಸಿದ್ಧಳಾದ ಶಾಲಾ ಬಾಲಕಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Apr 16, 2022 | 2:34 PM

Share

ನೋಯ್ಡಾ: ಕಳೆದುಹೋದ ಮಗುವನ್ನು ಮತ್ತೆ ಕುಟುಂಬದೊಂದಿಗೆ ಸೇರಿಸಲು ನೋಯ್ಡಾ ಪೊಲೀಸರಿಗೆ ಸಹಾಯ ಮಾಡಿದ 14 ವರ್ಷದ ಬಾಲಕಿ ರಾತ್ರೋರಾತ್ರಿ ಹೀರೋ ಆಗಿದ್ದಾಳೆ. ಮಗು ಕಳೆದುಹೋಗಿದೆ ಎಂದು ಪೊಲೀಸರಿಗೆ ರಾತ್ರಿ 9.30ಕ್ಕೆ ಮಾಹಿತಿ ಸಿಕ್ಕಿತ್ತು. ಹೀಗಾಗಿ, ಕೂಡಲೇ ಪೊಲೀಸರು ಎರಡೂವರೆ ವರ್ಷದ ಮಗುವಿನ ಪತ್ತೆಗಾಗಿ ರಾತ್ರಿಯಿಡೀ ಶೋಧ ನಡೆಸಿದರು. ಆದರೂ ಮಗು ಸಿಕ್ಕಿರಲಿಲ್ಲ. ಮಗು ಬುಧವಾರ ಗಿಜೋಡ್ ಗ್ರಾಮದಿಂದ ನಾಪತ್ತೆಯಾಗಿತ್ತು. ಅದರ ನಂತರ ಸ್ಥಳೀಯ ಪೊಲೀಸರು ಮಗುವಿಗಾಗಿ ಹುಡುಕಾಟ ಆರಂಭಿಸಿದ್ದರು.

ಆರು ಗಂಟೆಗಳ ಹುಡುಕಾಟದ ನಂತರ ಸೆಕ್ಟರ್ 14ರ ಕೊಳೆಗೇರಿಯಲ್ಲಿ ಮಗು ಪತ್ತೆಯಾಗಿತ್ತು. ನಾಪತ್ತೆಯಾಗಿದ್ದ ಮಗು ಕಾಶಿಶ್ ಕುಮಾರಿ ಎಂಬ 14 ವರ್ಷದ ಬಾಲಕಿಯ ಆರೈಕೆಯಲ್ಲಿ ಆರಾಮಾಗಿತ್ತು. ಮಧ್ಯರಾತ್ರಿಯ ವೇಳೆಗೆ ಆ ಬಾಲಕಿಯ ಮನೆಯ ಬಳಿ ಆ ಮಗುವನ್ನಿಟ್ಟು ಹೋಗಲಾಗಿತ್ತು. ಹೀಗಾಗಿ, ಆ ಮಗುವನ್ನು ಮನೆಯೊಳಗೆ ತೆಗೆದುಕೊಂಡು ಹೋಗಿ ಆ ಬಾಲಕಿ ಆರೈಕೆ ಮಾಡಿದ್ದಳು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಮಗುವನ್ನು ಸುರಕ್ಷಿತವಾಗಿ ತಂದೆ-ತಾಯಿಗೆ ನೀಡಲು ಪೊಲೀಸರಿಗೆ ಸಹಾಯ ಮಾಡಿದ್ದಕ್ಕಾಗಿ ಪೊಲೀಸ್ ಆಯುಕ್ತ ಅಲೋಕ್ ಸಿಂಗ್ ಶಾಲೆಗೆ ಹೋಗುವ ಬಾಲಕಿಗೆ ವಿಶೇಷ ಬಹುಮಾನವನ್ನು ಘೋಷಿಸಿದ್ದಾರೆ. ಮಗುವಿನ ಹುಡುಕಾಟದಲ್ಲಿ ತೊಡಗಿದ್ದ ಪೊಲೀಸ್ ತಂಡಕ್ಕೆ 25,000 ರೂ. ನಗದು ಬಹುಮಾನ ನೀಡಲಾಗುವುದು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಎಸಿಪಿ (ನೋಯ್ಡಾ 2) ರಜನೀಶ್ ವರ್ಮಾ ಅವರ ಮೇಲ್ವಿಚಾರಣೆಯಲ್ಲಿ ಮಗುವನ್ನು ನೋಡಲು ಎರಡು ತಂಡಗಳನ್ನು ರಚಿಸಲಾಗಿತ್ತು. ಸೆಕ್ಟರ್ 24 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಉಪ ಪೊಲೀಸ್ ಆಯುಕ್ತ (ನೋಯ್ಡಾ) ರಾಜೇಶ್ ಎಸ್ ಹೇಳಿದ್ದಾರೆ. ಒಂದು ತಂಡವು ಕಾಣೆಯಾದ ಮಗುವನ್ನು ಹುಡುಕಲು ಮತ್ತು ಮಗುವಿನ ಬಗ್ಗೆ ಸ್ಥಳೀಯರನ್ನು ಕೇಳಲು ಹೋದರೆ, ಇನ್ನೊಂದು ತಂಡವು ಸುತ್ತಮುತ್ತಲೂ ಅನುಮಾನಾಸ್ಪದ ಚಲನವಲನಗಳನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲು ಪ್ರಾರಂಭಿಸಿತು ಎಂದು ರಾಜೇಶ್ ಹೇಳಿದ್ದಾರೆ.

ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾಶಿಶ್ ಮಗುವಿನ ಪೋಷಕರ ಬಗ್ಗೆ ವಿಚಾರಿಸುತ್ತಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ತಕ್ಷಣ ಕಾಶಿಶ್ ಅವರ ಮನೆಗೆ ಹೋಗಿ ನೋಡಿದಾಗ ಆಕೆಯ ಬಳಿ ನಾಪತ್ತೆಯಾಗಿದ್ದ ಮಗು ಸುರಕ್ಷಿತವಾಗಿತ್ತು. ಅನಾಥವಾಗಿ ಬಿದ್ದಿದ್ದ ಮಗುವನ್ನು ಜವಾಬ್ದಾರಿಯಿಂದ ತೆಗೆದುಕೊಂಡು ಹೋಗಿ ಕಾಪಾಡಿರುವುದಕ್ಕೆ ಆ ಬಾಲಕಿಯನ್ನು ಸನ್ಮಾನಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Viral News: ಕೈದಿಯ ಹೆಂಡತಿ ಗರ್ಭಿಣಿಯಾಗಲೆಂದು ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿಗೆ 15 ದಿನಗಳ ಪೆರೋಲ್!

Viral News: ಗಾಳಿಯ ರಭಸಕ್ಕೆ ತಲೆ ಮೇಲಿಂದ ಹಾರಿ ಹೋಯ್ತು ವಿಗ್; ನಕ್ಕು ನಕ್ಕು ಸುಸ್ತಾದ ನೆಟ್ಟಿಗರು

Published On - 2:32 pm, Sat, 16 April 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!