AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೊಲೇಟ್​ ಆಮಿಷವೊಡ್ಡಿ 4 ವರ್ಷದ ಬಾಲಕಿ ಕರೆದೊಯ್ದು ಅತ್ಯಾಚಾರ, ಇಟ್ಟಿಗೆಯಿಂದ ಹಲ್ಲೆ

ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಪಕ್ಕದ ಮನೆಯ ವ್ಯಕ್ತಿ ಬಾಲಕಿಗೆ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಬಳಿಕ ಇಟ್ಟಿಗೆಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಂಗಳವಾರ ಸಂಜೆ ಕಾನ್ಪುರ ನಗರ ಜಿಲ್ಲೆಯ ಘಟಂಪುರದಲ್ಲಿ ಈ ಘಟನೆ ನಡೆದಿದೆ. ಸಂಜೆ 5.30 ರ ಸುಮಾರಿಗೆ ಬಾಲಕಿ ಹತ್ತಿರದ ಅಂಗಡಿಗೆ ಹೋಗಿದ್ದಳು ಎಂದು ಆಕೆಯ ತಂದೆ ಹೇಳಿದ್ದಾರೆ .ಅಂಗಡಿಯ ಬಳಿ, ಅದೇ ಪ್ರದೇಶದ ಯುವಕನೊಬ್ಬ ಬಾಲಕಿ ಬಳಿ ಚಾಕೊಲೇಟ್​ ಕೊಡಿಸುವುದಾಗಿ ಹೇಳಿ ಅಂಗಡಿಯ ಹಿಂದಿನ  ಪೊದೆಯೊಳಗೆ ಕರೆದೊಯ್ದಿದ್ದ. 

ಚಾಕೊಲೇಟ್​ ಆಮಿಷವೊಡ್ಡಿ 4 ವರ್ಷದ ಬಾಲಕಿ ಕರೆದೊಯ್ದು ಅತ್ಯಾಚಾರ, ಇಟ್ಟಿಗೆಯಿಂದ ಹಲ್ಲೆ
ಕ್ರೈಂ Image Credit source: The Hindu
ನಯನಾ ರಾಜೀವ್
|

Updated on: Jun 11, 2025 | 10:51 AM

Share

ಕಾನ್ಪುರ, ಜೂನ್ 11: ಚಾಕೊಲೇಟ್ ಆಮಿಷವೊಡ್ಡಿ 4 ವರ್ಷದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಪಕ್ಕದ ಮನೆಯ ವ್ಯಕ್ತಿ ಬಾಲಕಿಗೆ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಬಳಿಕ ಇಟ್ಟಿಗೆಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಂಗಳವಾರ ಸಂಜೆ ಕಾನ್ಪುರ ನಗರ ಜಿಲ್ಲೆಯ ಘಟಂಪುರದಲ್ಲಿ ಈ ಘಟನೆ ನಡೆದಿದೆ.

ಸಂಜೆ 5.30 ರ ಸುಮಾರಿಗೆ ಬಾಲಕಿ ಹತ್ತಿರದ ಅಂಗಡಿಗೆ ಹೋಗಿದ್ದಳು ಎಂದು ಆಕೆಯ ತಂದೆ ಹೇಳಿದ್ದಾರೆ .ಅಂಗಡಿಯ ಬಳಿ, ಅದೇ ಪ್ರದೇಶದ ಯುವಕನೊಬ್ಬ ಬಾಲಕಿ ಬಳಿ ಚಾಕೊಲೇಟ್​ ಕೊಡಿಸುವುದಾಗಿ ಹೇಳಿ ಅಂಗಡಿಯ ಹಿಂದಿನ  ಪೊದೆಯೊಳಗೆ ಕರೆದೊಯ್ದಿದ್ದ.  ಬಾಲಕಿ ನೋವಿನಿಂದ ಕಿರುಚಿದಾಗ, ಆರೋಪಿ ಆಕೆಯ ಬಾಯಿಯೊಳಗೆ ಎಲೆಗಳನ್ನು ತುರುಕಿದ್ದಾನೆ.

ಆಕೆ ಅಳುತ್ತಲೇ ಇದ್ದಳು. ಆ ವ್ಯಕ್ತಿ ಹತ್ತಿರದಲ್ಲಿ ಇರಿಸಲಾಗಿದ್ದ ಇಟ್ಟಿಗೆಯಿಂದ ಆಕೆಗೆ ಹಲವಾರು ಬಾರಿ ಹೊಡೆದು ಬಾಲಕಿಯನ್ನು ರಕ್ತದ ಮಡುವಿನಲ್ಲಿ ಬಿಟ್ಟು ಓಡಿಹೋಗಿದ್ದಾನೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ ಬಾಲಕಿಯ ತಂದೆ, ನನ್ನ ಮಗಳು ಸಂಜೆ 5.30 ರ ಸುಮಾರಿಗೆ ಹತ್ತಿರದ ಅಂಗಡಿಗೆ ಹೋಗಿದ್ದಳು. 10 ರಿಂದ 15 ನಿಮಿಷಗಳಾದರೂ ಆಕೆ ಹಿಂತಿರುಗದಿದ್ದಾಗ, ಅವಳ ತಾಯಿ ಆಕೆಯನ್ನು ಹುಡುಕಲು ಹೋಗಿದ್ದಳು.

ಇದನ್ನೂ ಓದಿ
Image
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣದ ಎ3 ಪೊಲೀಸಪ್ಪನ ಮಗ ಪರಾರಿ
Image
ಹೆಬ್ಬಾಳ್ಕರ್​​ಗೆ ಅವಾಚ್ಯ ಪದ ಬಳಕೆ ಆರೋಪ: ಸಿಟಿ ರವಿಗೆ ಕೋರ್ಟ್​ ರಿಲೀಫ್!
Image
ಯೋಧನ ಅಂತ್ಯಕ್ರಿಯೆಗೆ ಸರ್ಕಾರಿ ಜಾಗ ಕೇಳಿದವರ ಮೇಲೆ ಲಾಠಿ ಬೀಸಿದ ಪೊಲೀಸರು
Image
ಕುರಾನ್ ಸುಟ್ಟಿದ್ದನ್ನ ಖಂಡಿಸಿ ಪ್ರತಿಭಟನೆ: ಪೊಲೀಸರ ಮೇಲೆಯೇ ಚಪ್ಪಲಿ ಎಸೆತ

ಮತ್ತಷ್ಟು ಓದಿ: ಉತ್ತರ ಪ್ರದೇಶ: ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೆಟ್ರೋ ಸೇತುವೆ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಅಂಗಡಿಯವರನ್ನು ಕೇಳಿದಾಗ, ನಮ್ಮ ಮಗಳು ಅಲ್ಲಿಗೆ ಹೋಗಿಲ್ಲ ಎಂದು ತಿಳಿಸಿದ್ದಾರೆ. ನನ್ನ ಮಗಳು ಅಂಗಡಿಯನ್ನು ತಲುಪಲೇ ಇಲ್ಲ.ನಮ್ಮ ಪ್ರದೇಶದ ಒಬ್ಬ ವ್ಯಕ್ತಿ ಅವಳನ್ನು ಎತ್ತಿಕೊಂಡು ಮಾರುಕಟ್ಟೆ ಪ್ರದೇಶದ ಹಿಂದೆ, ಪೊದೆಗಳ ಹಿಂದೆ ಕರೆದೊಯ್ದಿದ್ದ ಎಂಬುದು ಬಳಿಕ ತಿಳಿದುಬಂದಿದೆ.

ಆರೋಪಿ ತಮ್ಮ ಪಕ್ಕದ ಮನೆಯ ಹುಡುಗ, ಯಾವುದೇ ದ್ವೇಷವಿಲ್ಲ, ಯಾವುದೇ ನೆರೆಹೊರೆಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮಾತ್ರ ಇದ್ದವು. ಆತನ ಪೋಷಕರೇ ಆತನಿಗೆ ಹೀಗೆ ಮಾಡೆಂದು ಹೇಳಿಕೊಟ್ಟಿರಬಹುದು ಎಂದು ಬಾಲಕಿ ತಂದೆ ಆರೋಪಿಸಿದ್ದಾರೆ.

ತನ್ನ ಮಗಳು ಈ ಹಲ್ಲೆಯಿಂದ ಬದುಕುಳಿಯುತ್ತಾಳೋ ಇಲ್ಲವೋ ಎಂಬುದು ಖಚಿತವಿಲ್ಲ,ಆಕೆ ಸ್ಥಿತಿ ನೋಡಿದರೆ ಆಕೆ ಬದುಕುಳಿದಿದ್ದೇ ಪವಾಡ. ಇದು ಆಕೆಯ ಮೇಲೆ ನಡೆದ ಹತ್ಯೆ ಪ್ರಯತ್ನವಾಗಿತ್ತು ಎಂದಿದ್ದಾರೆ. ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆಕೆಗೆ ಪ್ರಥಮ ಚಿಕಿತ್ಸೆ ನೀಡಲಾಯಿತು ಮತ್ತು ನಂತರ ಗಂಭೀರ ಸ್ಥಿತಿಯಲ್ಲಿದ್ದ ಕಾರಣ ಕಾನ್ಪುರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ