AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಮೊದಲ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಅಮ್ರೋಹಾದಲ್ಲಿನ ನ್ಯಾಯಾಲಯವು ಮತಾಂತರ ನಿಷೇಧ ಕಾನೂನಿನ ಅಡಿಯಲ್ಲಿ 26 ವರ್ಷದ ಯುವಕನಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಮೊದಲ ಶಿಕ್ಷೆ ವಿಧಿಸಿದ ನ್ಯಾಯಾಲಯ
TV9 Web
| Updated By: ವಿವೇಕ ಬಿರಾದಾರ|

Updated on:Sep 18, 2022 | 6:29 PM

Share

ಲಖನೌ: ಉತ್ತರ ಪ್ರದೇಶದ (Uttar Pradesh) ಅಮ್ರೋಹಾದಲ್ಲಿನ ನ್ಯಾಯಾಲಯವು ಮತಾಂತರ ನಿಷೇಧ ಕಾನೂನಿನ (Anti-Conversion law) ಅಡಿಯಲ್ಲಿ 26 ವರ್ಷದ ಯುವಕನಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇದು ಉತ್ತರ ಪ್ರದೇಶದ ಮತಾಂತರ ನಿಷೇಧ ಕಾಯ್ದೆ 2021ರ ಅಡಿಯಲ್ಲಿ ನೀಡಲಾದ ಮೊದಲ ತೀರ್ಪು ಇದಾಗಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಡಿಎನ್​ಎ ವರದಿ ಮಾಡಿದೆ.

ಡಿಸೆಂಬರ್ 2021 ರಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು- ಸುವ್ಯವಸ್ಥೆ) ಅಶುತೋಷ್ ಪಾಂಡೆ ಅವರು ಮತಾಂತರ ನಿಷೇಧ ಕಾಯ್ದೆಯನ್ನು ಪರಿಚಯಿಸಿದರು. ಅಮ್ರೋಹಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಕಪಿಲಾ ರಾಘವ್ ಅವರು ಶನಿವಾರ (ಸೆ.18) ಅಫ್ಜಲ್‌ಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 40,000 ರೂಪಾಯಿ ದಂಡ ವಿಧಿಸಿದ್ದಾರೆ.

16 ವರ್ಷದ ಬಾಲಕಿಯನ್ನು ಅಪಹರಿಸಿದ ಆರೋಪದ ಮೇಲೆ ಹಸನ್‌ಪುರ ಪೊಲೀಸ್ ಠಾಣೆಯ ತನಿಖಾ ಅಧಿಕಾರಿ ಗಜೇಂದ್ರ ಪಾಲ್ ಸಿಂಗ್ ಏಪ್ರಿಲ್ 4, 2021 ರಂದು, ಆರೋಪಿ ಅಫ್ಜಲ್​ನನ್ನು ದೆಹಲಿಯಲ್ಲಿ ಬಂಧಿಸಿದ್ದರು. ಆರೋಪಿ ವಿರುದ್ಧ ಮತಾಂತರ ನಿಷೇಧ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಬಾಲಕಿಯ ತಂದೆ ಸಸ್ಯ ನರ್ಸರಿ ನಡೆಸುತ್ತಿದ್ದು, ತನ್ನ ಮಗಳು ಕೆಲಸಕ್ಕೆಂದು ಮನೆಯಿಂದ ಹೋದಳು ಹಿಂತಿರುಗಲಿಲ್ಲ ಎಂದು ಹೇಳಿಕೊಂಡಿದ್ದರು. ಇಬ್ಬರು ಸ್ಥಳೀಯರು ಆಕೆಯನ್ನು ಯುವಕನೊಂದಿಗೆ ನೋಡಿದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದರು. ಸಸಿಗಳನ್ನು ಖರೀದಿಸಲು, ತನ್ನ ತಂದೆಯ ನರ್ಸರಿಗೆ ಅಫ್ಜಲ್‌ ಬರುತ್ತಿದ್ದು, ಆಗ ಇಬ್ಬರು ಪರಿಚಯವಾಗಿದ್ದರು ಎಂದು ಬಾಲಕಿಯ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದರು. ನಂತರ ಪೊಲೀಸರು ಅಫ್ಜಲ್ ವಿರುದ್ಧ ಪ್ರಕರಣ ದಾಖಲಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Sun, 18 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ