Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಉಪಚುನಾವಣೆ; ನವೆಂಬರ್ 13ರಂದು 9 ಸ್ಥಾನಗಳಿಗೆ ಮತದಾನ, ನವೆಂಬರ್ 23ರಂದು ಫಲಿತಾಂಶ

ಚುನಾವಣಾ ಆಯೋಗವು 9 ಉತ್ತರ ಪ್ರದೇಶ ವಿಧಾನಸಭಾ ಸ್ಥಾನಗಳಲ್ಲಿ ನಿರ್ಣಾಯಕ ಉಪಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. ಮುಂಬರುವ ಉಪಚುನಾವಣೆಗಳು ಇಂಡಿಯಾ ಬಣದ ಏಕತೆಗೆ ಅಗ್ನಿಪರೀಕ್ಷೆಯಾಗಲಿದೆ. ಇಂಡಿಯಾ ಬಣ ಆಮ್ ಆದ್ಮಿ ಪಾರ್ಟಿ (ಎಎಪಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳಲು ವಿಫಲರಾಗಿದ್ದಾರೆ.

ಉತ್ತರ ಪ್ರದೇಶ ಉಪಚುನಾವಣೆ; ನವೆಂಬರ್ 13ರಂದು 9 ಸ್ಥಾನಗಳಿಗೆ ಮತದಾನ, ನವೆಂಬರ್ 23ರಂದು ಫಲಿತಾಂಶ
ಯೋಗಿ ಆದಿತ್ಯನಾಥ್- ಅಖಿಲೇಶ್ ಯಾದವ್
Follow us
ಸುಷ್ಮಾ ಚಕ್ರೆ
|

Updated on: Oct 15, 2024 | 4:57 PM

ನವದೆಹಲಿ: ಉತ್ತರ ಪ್ರದೇಶದ 9 ವಿಧಾನಸಭಾ ಕ್ಷೇತ್ರಗಳಲ್ಲಿ ಮುಂಬರುವ ಉಪಚುನಾವಣೆಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕಗಳೊಂದಿಗೆ ಉತ್ತರ ಪ್ರದೇಶದ ನಿರ್ಣಾಯಕ ಉಪಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

ಉತ್ತರ ಪ್ರದೇಶದಲ್ಲಿ 9 ಅಸೆಂಬ್ಲಿ ಸ್ಥಾನಗಳಾದ ಕಟೆಹಾರಿ (ಅಂಬೇಡ್ಕರ್ ನಗರ), ಕರ್ಹಾಲ್ (ಮೈನ್‌ಪುರಿ), ಮೀರಾಪುರ (ಮುಜಾಫರ್‌ನಗರ), ಘಾಜಿಯಾಬಾದ್, ಮಜ್ವಾನ್ (ಮಿರ್ಜಾಪುರ್), ಸಿಸಾಮಾವು (ಕಾನ್ಪುರ್ ನಗರ), ಖೈರ್ (ಅಲಿಗಢ), ಫುಲ್ಪುರ್ (ಪ್ರಯಾಗರಾಜ್) ಮತ್ತು ಕುಂದರ್ಕಿ. (ಮೊರಾದಾಬಾದ್) ಉಪಚುನಾವಣೆ ನಡೆಯಲಿದೆ. ಪ್ರಸ್ತುತ ಈ ಸುತ್ತಿನ ಉಪಚುನಾವಣೆಯಿಂದ ಅಯೋಧ್ಯೆಯ ಮಿಲ್ಕಿಪುರ ವಿಧಾನಸಭಾ ಸ್ಥಾನವನ್ನು ಹೊರತುಪಡಿಸಲಾಗಿದೆ.

ಇದನ್ನೂ ಓದಿ: Maharashtra Jharkhand Assembly Elections: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟ

ಉತ್ತರ ಪ್ರದೇಶದ 10 ವಿಧಾನಸಭಾ ಸ್ಥಾನಗಳ ಪೈಕಿ 6 ಸ್ಥಾನಗಳಿಗೆ ಎಸ್‌ಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಇಂಡಿಯಾ ಬ್ಲಾಕ್‌ನ ಭಾಗವಾಗಿರುವ ಎಸ್‌ಪಿ 5 ಸ್ಥಾನಗಳಿಗೆ ಬೇಡಿಕೆಯಿರುವ ಕಾಂಗ್ರೆಸ್‌ನೊಂದಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಎಸ್​ಪಿ 6 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ತೇಜ್ ಪ್ರತಾಪ್ ಯಾದವ್, ಸಿಸಾಮೌದಿಂದ ನಸೀಮ್ ಸೋಲಂಕಿ, ಫುಲ್ಪುರದಿಂದ ಮುಸ್ತಫಾ ಸಿದ್ದಿಕಿ, ಮಿಲ್ಕಿಪುರದಿಂದ ಅಜಿತ್ ಪ್ರಸಾದ್, ಕಾಟೇಹಾರಿಯಿಂದ ಶೋಭಾವತಿ ವರ್ಮಾ, ಮಜ್ವಾನ್‌ನಿಂದ ಜ್ಯೋತಿ ಬಿಂದ್ ಅವರ ಹೆಸರನ್ನು ಘೋಷಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶ ರಾಜ್ಯದಲ್ಲಿ ಹಿನ್ನಡೆಯನ್ನು ಎದುರಿಸಿದ ನಂತರ ಮುಂಬರುವ ಉಪಚುನಾವಣೆಗಳು ರಾಜ್ಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇದು ಬಹಳ ಮಹತ್ವದ ಚುನಾವಣೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು