AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಭಾರತ್ ರೈಲಿಗೆ ಚಾಲನೆ ವೇಳೆ ನೂಕುನುಗ್ಗಲು; ರೈಲು ಹಳಿಗೆ ಜಾರಿ ಬಿದ್ದ ಬಿಜೆಪಿ ಶಾಸಕಿ

ಹೊಸ ವಂದೇ ಭಾರತ್ ರೈಲಿಗಾಗಿ ಜನರು ಕುತೂಹಲದಿಂದ ಕಾಯುತ್ತಿರುವಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್‌ನಲ್ಲಿ ಸರಿತಾ ಬದೌರಿಯಾ ರೈಲಿಗೆ ಚಾಲನೆ ಮಾಡಲು ನಿಂತಿದ್ದರು. ಕೆಲವೇ ಕ್ಷಣಗಳಲ್ಲಿ ನೂಕು ನುಗ್ಗಲಿನಿಂದಾಗಿ, 61 ವರ್ಷದ ಬಿಜೆಪಿ ಶಾಸಕಿ ರೈಲು ಹಳಿಗಳ ಮೇಲೆ ಬಿದ್ದಿದ್ದು, ಅಲ್ಲಿದ್ದವರು ಸಹಾಯ ಮಾಡಿ ಫ್ಲಾಟ್ ಫಾರ್ಮ್ ಮೇಲೆ ಹತ್ತಿಸಿದ್ದಾರೆ

ವಂದೇ ಭಾರತ್ ರೈಲಿಗೆ ಚಾಲನೆ ವೇಳೆ ನೂಕುನುಗ್ಗಲು; ರೈಲು ಹಳಿಗೆ ಜಾರಿ ಬಿದ್ದ ಬಿಜೆಪಿ ಶಾಸಕಿ
ಸರಿತಾ ಭದೌರಿಯಾ
ರಶ್ಮಿ ಕಲ್ಲಕಟ್ಟ
|

Updated on:Sep 17, 2024 | 12:49 PM

Share

ಲಕ್ನೋ ಸೆಪ್ಟೆಂಬರ್ 17: ಆಗ್ರಾ-ವಾರಣಾಸಿ ವಂದೇ ಭಾರತ್ ಎಕ್ಸ್‌ಪ್ರೆಸ್​​​​ಗೆ (Agra-Varanasi Vande Bharat Express) ಫ್ಲ್ಯಾಗ್ ಆಫ್ ಮಾಡುವ ವೇಳೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಬಿಜೆಪಿ ಶಾಸಕಿ ಸರಿತಾ ಭದೌರಿಯಾ (Sarita Bhadauria) ಹಳಿಗಳ ಮೇಲೆ ಜಾರಿ ಬಿದ್ದಿದ್ದಾರೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಹೊಸ ವಂದೇ ಭಾರತ್ ರೈಲಿಗಾಗಿ ಜನರು ಕುತೂಹಲದಿಂದ ಕಾಯುತ್ತಿರುವಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್‌ನಲ್ಲಿ ಸರಿತಾ ಬದೌರಿಯಾ ರೈಲಿಗೆ ಚಾಲನೆ ಮಾಡಲು ನಿಂತಿದ್ದರು. ಕೆಲವೇ ಕ್ಷಣಗಳಲ್ಲಿ ನೂಕು ನುಗ್ಗಲಿನಿಂದಾಗಿ, 61 ವರ್ಷದ ಬಿಜೆಪಿ ಶಾಸಕಿ ರೈಲು ಹಳಿಗಳ ಮೇಲೆ ಬಿದ್ದಿದ್ದು, ಅಲ್ಲಿದ್ದವರು ಸಹಾಯ ಮಾಡಿ ಫ್ಲಾಟ್ ಫಾರ್ಮ್ ಮೇಲೆ ಹತ್ತಿಸಿದ್ದಾರೆ.

ಸೆಪ್ಟೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆರು ಹೊಸ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸಿದ ನಂತರ ಆಗ್ರಾದಿಂದ ರೈಲಿಗೆ ಫ್ಲ್ಯಾಗ್ ಆಫ್ ಮಾಡಲಾಯಿತು.

ಶಾಸಕಿ ರೈಲು ಹಳಿ ಮೇಲೆ ಬೀಳುತ್ತಿರುವ ವಿಡಿಯೊ

ಘಟನೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿಯ ಇಟಾವಾ ಘಟಕದ ಖಜಾಂಚಿ ಸಂಜೀವ್ ಭದೌರಿಯಾ, “ಶಾಸಕಿಯನ್ನು ಹಳಿಗಳಿಂದ ಮೇಲೆತ್ತಿ ನಂತರ ಫ್ಲಾಗ್-ಆಫ್ ಕಾರ್ಯಕ್ರಮ ನಡೆಯಿತು ಎಂದು ಹೇಳಿರುವುದಾಗಿ ಎಂದು ಪಿಟಿಐ ವರದಿ ಮಾಡಿದೆ. ವೈದ್ಯರು ಸರಿತಾ ಬದೌರಿಯಾ ಅವರನ್ನು ಪರೀಕ್ಷಿಸಿದ್ದಾರೆ ಮತ್ತು ಯಾವುದೇ ಗಂಭೀರವಾದ ಗಾಯಗಳು ವರದಿಯಾಗಿಲ್ಲ ಎಂದು ಅವರು ಹೇಳಿದರು.

ಇಟಾವಾ ನಿಲ್ದಾಣಕ್ಕೆ ಬರುವ ಮೊದಲು ರೈಲು ತುಂಡ್ಲಾದಲ್ಲಿ ನಿಲುಗಡೆ ಮಾಡಿತು. ಅದರ ಆಗಮನದ ನಂತರ, ವಿಡಿಯೊಗಳಲ್ಲಿ ತೋರಿಸಿರುವಂತೆ ಸಮಾಜವಾದಿ ಪಕ್ಷದ ಸಂಸದ ಜಿತೇಂದ್ರ ದೌವ್ಹಾರೆ, ಬಿಜೆಪಿಯ ಮಾಜಿ ಸಂಸದ ರಾಮ್ ಶಂಕರ್ ಸೇರಿದಂತೆ ವಿವಿಧ ರಾಜಕೀಯ ವ್ಯಕ್ತಿಗಳು ಫ್ಲ್ಯಾಗ್‌ಆಫ್‌ಗೆ ಜಮಾಯಿಸಿದ್ದರಿಂದ ವೇದಿಕೆ ತುಂಬಿತ್ತು.

ರೈಲು ಹೊರಡುವ ಸೂಚನೆ ನೀಡಿದಾಗ, ವೇದಿಕೆಯಲ್ಲಿ ಜನ ಕಿಕ್ಕಿರಿದು ನಿಂತಿದ್ದರು. ಹೀಗೆ ನೂಕು ನುಗ್ಗಲಾದಾಗ ಶಾಸಕಿ ಪ್ಲಾಟ್‌ಫಾರ್ಮ್‌ನಿಂದ ತಳ್ಳಲ್ಪಟ್ಟು ರೈಲಿನ ಮುಂಭಾಗದ ರೈಲು ಹಳಿಗಳ ಮೇಲೆ ಬಿದ್ದಿದ್ದಾರೆ.  ಅದೃಷ್ಟವಶಾತ್, ಪಕ್ಕದಲ್ಲಿದ್ದವರು ರೈಲನ್ನು ಸಕಾಲದಲ್ಲಿ ನಿಲ್ಲಿಸಿದ್ದರಿಂದ ಭಾರೀ ಅನಾಹುತ ತಪ್ಪಿತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಾಸಕಿಯನ್ನು ಪೊಲೀಸರು ಕೂಡಲೇ ಟ್ರ್ಯಾಕ್‌ಗಳಿಂದ ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿ ವಿದೇಶಾಂಗ ನೀತಿ ಸೂಪರ್​ಹಿಟ್; ಭಾರತಕ್ಕೆ ಹೆಚ್ಚಾದ ಜಾಗತಿಕ ಮಾನ್ಯತೆ

ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು

ವರದಿಗಳ ಪ್ರಕಾರ, ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಾರ್ಯಾಚರಣೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ರೈಲ್ವೆಯ ಆಗ್ರಾ ವಿಭಾಗದ PRO ಪ್ರಶಸ್ತಿ ಶ್ರೀವಾಸ್ತವ ತಿಳಿಸಿದ್ದಾರೆ. ರೈಲು ಆಗ್ರಾ ಮತ್ತು ವಾರಣಾಸಿ ನಡುವೆ ಸುಮಾರು ಏಳು ಗಂಟೆಗಳಲ್ಲಿ ಪ್ರಯಾಣಿಸಲಿದೆ. ರಿಟರ್ನ್ ಸೇವೆಯು ವಾರಣಾಸಿಯಿಂದ ಆಗ್ರಾಕ್ಕೆ ರೈಲು ಸಂಖ್ಯೆ 20176 ನಂತೆ ಕಾರ್ಯನಿರ್ವಹಿಸುತ್ತದೆ,  ಆಗ್ರಾ-ವಾರಣಾಸಿಯನ್ನು 20175 ರೈಲು ಸಂಪರ್ಕಿಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Tue, 17 September 24

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್