AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ನಾಲ್ಕೇ ದಿನ ಬಾಕಿಯಿದೆ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಕರೆ

Yogi Adityanath: ಉತ್ತರ ಪ್ರದೇಶ ಪೊಲೀಸರ ಸಹಾಯವಾಣಿ 112ಕ್ಕೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಸಿಎಂ ಆದಿತ್ಯನಾಥ್​ಗೆ ಬೆದರಿಕೆ ಹಾಕಿದ್ದಾನೆ. ಉತ್ತರ ಪ್ರದೇಶದ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

ಇನ್ನೂ ನಾಲ್ಕೇ ದಿನ ಬಾಕಿಯಿದೆ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಕರೆ
ಯೋಗಿ ಆದಿತ್ಯನಾಥ್
guruganesh bhat
|

Updated on: May 04, 2021 | 3:16 PM

Share

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ‘ನಿಮಗೆ ಇನ್ನೂ ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ’ ಎಂಬ ಜೀವ ಬೆದರಿಕೆ ಒಡ್ಡಲಾಗಿದೆ. ಉತ್ತರ ಪ್ರದೇಶ ಪೊಲೀಸರ ಸಹಾಯವಾಣಿ 112ಕ್ಕೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಸಿಎಂ ಆದಿತ್ಯನಾಥ್​ಗೆ ಬೆದರಿಕೆ ಹಾಕಿದ್ದಾನೆ. ಉತ್ತರ ಪ್ರದೇಶದ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

ಏಪ್ರಿಲ್ 29ರಂದು ಪೊಲೀಸ್ ಸಹಾಯವಾಣಿ ಸಂಖ್ಯೆಗೆ ಈ ಬೆದರಿಕೆ ಕರೆ ಬಂದಿದೆ. ಈ ಹಿಂದೆಯೂ ಕೆಲವು ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್​ಗೆ ಬೆದರಿಕೆ ಕರೆ ಬಂದಿದ್ದವು. ಕಳೆದ ನವೆಂಬರ್ ಮತ್ತು ಡಿಸೆಂಬರ್​ ತಿಂಗಳಲ್ಲಿಯೂ ಇಂತಹುದೇ ಕರೆಗಳು ಬಂದಿದ್ದವು. ಈ ಪೈಕಿ 15ವರ್ಷದ ಬಾಲಕನೊಬ್ಬ ಯೋಗಿ ಆದಿತ್ಯನಾಥ್​ಗೆ ಬೆದರಿಕೆ ಒಡ್ಡಿದ್ದ ಕಾರಣ ಆತನನ್ನು ರಿಮ್ಯಾಂಡ್ ಹೋಂಗೆ ಕಳಿಸಲಾಗಿತ್ತು.

ಈ ಹಿಂದಿನ ಬೆದರಿಕೆ ಪ್ರಕರಣ ಕಳೆದ ತಿಂಗಳ ರ ರಂದು (ಏಪ್ರಿಲ್ 6) ಗೃಹಸಚಿವ ಅಮಿತ್​ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಹತ್ಯೆ ಮಾಡುವುದಾಗಿ ಕೇಂದ್ರೀಯ ಮೀಸಲು ಪಡೆ (CRPF)ಗೆ ಬೆದರಿಕೆ ಇಮೇಲ್​ವೊಂದು ಬಂದಿತ್ತು. ಈ ಇಬ್ಬರೂ ರಾಜಕೀಯ ನಾಯಕರ ಜೀವ ತೆಗೆಯುವುದಾಗಿ ಸಿಆರ್​ಪಿಎಫ್​ನ ಮುಂಬೈ ಪ್ರಧಾನ ಕಚೇರಿಗೆ ಇಮೇಲ್​ ಕಳಿಸಿದ್ದಾಗಿ ಮೂಲಗಳು ತಿಳಿಸಿದ್ದು, ಕೆಲವು ಪುಣ್ಯಸ್ಥಳಗಳು, ಪ್ರಮುಖ ಪ್ರದೇಶಗಳ ಮೇಲೆ ಕೂಡ ದಾಳಿ ನಡೆಸುವುದಾಗಿ ಮೇಲ್​ನಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿದ್ದವು.

ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್​ರನ್ನು ಆತ್ಮಾಹುತಿ ದಾಳಿಯ ಮೂಲಕ ಹತ್ಯೆ ಮಾಡುವುದಾಗಿ ಬೆದರಿಕೆ ಇಮೇಲ್​ ಬಂದಿತ್ತು. ತಾವು 11 ಜನ ಸೂಸೈಡ್​ ಬಾಂಬರ್​ಗಳಿದ್ದಿದ್ದಾಗ್ಯೂ ಅವರು ಹೇಳಿಕೊಂಡಿದ್ದಾರೆ. ಈ ಮೇಲ್​ನ್ನು ತನಿಖಾ ದಳಗಳು ಮತ್ತು ಭದ್ರತಾ ಪಡೆಗಳ ಮುಖ್ಯಸ್ಥರಿಗೂ ಫಾರ್​​ವರ್ಡ್ ಮಾಡಲಾಗಿದೆ ಎಂದು ಸಿಆರ್​ಪಿಎಫ್​ ಹೇಳಿತ್ತು. ಇಮೇಲ್​ ಬಂದು ಕೆಲವು ದಿನಗಳು ಕಳೆದಿದ್ದವು.

ಅಮಿತ್ ಶಾ ಚತ್ತೀಸ್​ಗಡ್​​ದ ಬಸ್​ಗುಡಾ ಸಿಆರ್​ಪಿಎಫ್ ಕ್ಯಾಂಪ್​ಗೆ ಭೇಟಿ ನೀಡಿದ್ದರು. ನಕ್ಸಲ್​ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದರು ಅಮಿತ್ ಶಾ, ಯೋಗಿ ಆದಿತ್ಯನಾಥ್​ಗೆ ಜೀವ ಬೆದರಿಕೆ ಇದೇ ಮೊದಲೇನೂ ಅಲ್ಲ. ಇದೇ ವರ್ಷ ಜನವರಿಯಲ್ಲಿ ಉತ್ತರಪ್ರದೇಶ ತುರ್ತು ಸೇವೆ ವಿಭಾಗಕ್ಕೆ, ಯೋಗಿ ಆದಿತ್ಯನಾಥ್​ರನ್ನು 24 ಗಂಟೆಯಲ್ಲಿ ಎಕೆ 47 ರೈಫಲ್​​ನಿಂದ ಕೊಲ್ಲುವುದಾಗಿ ಸಂದೇಶ ಕಳಿಸಲಾಗಿತ್ತು. ನವೆಂಬರ್​​ನಲ್ಲೂ ಇಂಥದ್ದೇ ಒಂದು ಸಂದೇಶ ಇದೇ ವಿಭಾಗಕ್ಕೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಗ್ರಾದ ಅಪ್ರಾಪ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: IPL 2021: ಐಪಿಎಲ್​ ಒಳಗೆ ಕೊರೊನಾ ಪ್ರವೇಶಿಸಲು ದೋಷಪೂರಿತ ಜಿಪಿಎಸ್​ ಸಾಧನ ಕಾರಣವಾಯ್ತ? ಇಲ್ಲಿದೆ ರೋಚಕ ಸುದ್ದಿ

Coronavirus India Update: ಭಾರತದಲ್ಲಿ ಒಂದೇ ದಿನ 3.57 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ, 3,449 ಮಂದಿ ಸಾವು

(Yogi Adityanath gets death treat warns only four days left )

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ