AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? ತಪ್ಪಾಗಿದೆ ಎಂದು ಮುಸ್ಲಿಂ ಸಮುದಾಯ ಒಪ್ಪಿಕೊಳ್ಳಬೇಕು: ಯೋಗಿ ಆದಿತ್ಯನಾಥ್

ಜ್ಞಾನವಾಪಿ ಮಸೀದಿ(Gyanvapi Mosque)ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? ತಪ್ಪಾಗಿದೆ ಎಂದು ಮುಸ್ಲಿಂ ಸಮುದಾಯ ಒಪ್ಪಿಕೊಳ್ಳಬೇಕು: ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ನಯನಾ ರಾಜೀವ್
|

Updated on:Jul 31, 2023 | 12:32 PM

Share

ಜ್ಞಾನವಾಪಿ ಮಸೀದಿ(Gyanvapi Mosque)ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಎಎನ್​ಐಗೆ ನೀಡಿರುವ ಸಂದರ್ಶನವೊಂದರಲ್ಲಿ ಮಾತನಾಡಿರುವ ಯೋಗಿ, ಅದು ಮಸೀದಿಯೇ ಆಗಿದ್ದರೆ ಅಲ್ಲಿ ತ್ರಿಶೂಲ ಏನು ಮಾಡುತ್ತಿದೆ, ಮುಸ್ಲಿಂ ಸಮುದಾಯವು ತಮ್ಮಿಂದ ತಪ್ಪಾಗಿದೆ ಎಂದು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

ಪ್ರಸ್ತುತ, ಜ್ಞಾನವಾಪಿ ಮಸೀದಿ ಸಮೀಕ್ಷೆಯ ವಿಚಾರ ಸುಪ್ರೀಂಕೋರ್ಟ್​ನಲ್ಲಿದ್ದು, ಸಧ್ಯಕ್ಕೆ ಕೋರ್ಟ್ ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡಿದೆ, ಈ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಮಹತ್ವ ಪಡೆದಿದೆ.

ಮತ್ತಷ್ಟು ಓದಿ: ಆಗಸ್ಟ್ 3ರಂದು ತೀರ್ಪು ನೀಡುವವರೆಗೆ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆಯಾಜ್ಞೆ ನೀಡಿದ ಅಲಹಾಬಾದ್ ಹೈಕೋರ್ಟ್

1991 ರಲ್ಲಿ, ಕಾಶಿ ವಿಶ್ವನಾಥ ದೇವಾಲಯದ ಭಕ್ತರು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ವಿಶ್ವೇಶ್ವರ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ಜ್ಞಾನವಾಪಿ ಮಸೀದಿಯ ಸಮೀಪದಲ್ಲಿ ಮೊಕದ್ದಮೆ ಹೂಡಲಾಗಿದೆ.

ಮಸೀದಿಯಲ್ಲಿ ಜೋತಿರ್ಲಿಂಗ, ತ್ರಿಶೂಲಗಳಿವೆ ಇದು ಮಸೀದಿಯಲ್ಲ ಎಂದು ಅಲ್ಲಿನ ಗೋಡೆಗಳೇ ಕೂಗಿ ಹೇಳುತ್ತಿವೆ. ಮುಸ್ಲಿಮರಿಂದ ಐತಿಹಾಸಿಕ ತಪ್ಪಾಗಿದೆ ಅದನ್ನು ಒಪ್ಪಿಕೊಳ್ಳಬೇಕೆಂದು ನಾವು ಬಯಸುತ್ತೇವೆ.

ವಾರಾಣಸಿ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಕ್ಯಾಂಪಸ್‌ನ ವಿವಾದಿತ ವಝುಖಾನಾ ಭಾಗವನ್ನು ಹೊರತುಪಡಿಸಿ ಎಲ್ಲಾ ಪ್ರದೇಶಗಳ ಎಎಸ್‌ಐ ಸಮೀಕ್ಷೆಗೆ ಆದೇಶಿಸಿತ್ತು.

ಈ ಆದೇಶದ ವಿರುದ್ಧ ಮಸೀದಿ ಸಮಿತಿ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಸರ್ವೆ ನಿಲ್ಲಿಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಿತು.

ಹೈಕೋರ್ಟ್ ವಿಚಾರಣೆಯನ್ನು ಪೂರ್ಣಗೊಳಿಸಿದೆ. ಎಎಸ್‌ಐ ಸಮೀಕ್ಷೆಯ ಕುರಿತು ನಿರ್ಧಾರ ಹೊರಬೀಳಲಿದೆ. ಈ ವಿಚಾರದಲ್ಲಿ ರಾಜಕೀಯ ಬಿಸಿ ಏರಿದೆ. ಜ್ಞಾನವಾಪಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಸರಕಾರ ಪ್ರಯತ್ನಿಸುತ್ತಿದೆ ಎಂದರು.

ರಾಷ್ಟ್ರೀಯು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:20 pm, Mon, 31 July 23

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
ಪುಣ್ಯಕ್ಷೇತ್ರ ದರ್ಶನದಿಂದ ಏನೇನು ಪ್ರಯೋಜನ? ತಿಳಿಯಿರಿ
ಪುಣ್ಯಕ್ಷೇತ್ರ ದರ್ಶನದಿಂದ ಏನೇನು ಪ್ರಯೋಜನ? ತಿಳಿಯಿರಿ