AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಠಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ, ಪ್ರಿಯಾಂಕಾ ಎಲ್ಲಿ ಬಯಸುತ್ತಾರೋ ಅಲ್ಲಿ ಕಣಕ್ಕಿಳಿಯಬಹುದು: ಯುಪಿ ಕಾಂಗ್ರೆಸ್ ಮುಖ್ಯಸ್ಥ

2019 ರಲ್ಲಿ, ಪ್ರಿಯಾಂಕಾ ಗಾಂಧಿ ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಇದ್ದಾಗಲೇ ಕೊನೆಯ ಕ್ಷಣದಲ್ಲಿ ಅಜಯ್ ರಾಯ್ ಅವರನ್ನು ವಾರಣಾಸಿಯಿಂದ ಕಣಕ್ಕೆ ಇಳಿಸಲಾಗಿತ್ತು. 2014ರಲ್ಲೂ ಅಜಯ್ ರಾಯ್ ವಾರಣಾಸಿಯಿಂದ ಸ್ಪರ್ಧಿಸಿ ನರೇಂದ್ರ ಮೋದಿ ವಿರುದ್ಧ ಸೋತಿದ್ದರು. ಲೋಕಸಭೆ ಚುನಾವಣೆ 2024ಕ್ಕೆ ಇನ್ನೇನು ತಿಂಗಳುಗಳು ಬಾಕಿ ಇರುವಾಗ ಬ್ರಿಜ್ಲಾಲ್ ಖಾಬ್ರಿ ಬದಲಿಗೆ ಅಜಯ್ ರಾಯ್ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಅಮೇಠಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ, ಪ್ರಿಯಾಂಕಾ ಎಲ್ಲಿ ಬಯಸುತ್ತಾರೋ ಅಲ್ಲಿ ಕಣಕ್ಕಿಳಿಯಬಹುದು: ಯುಪಿ ಕಾಂಗ್ರೆಸ್ ಮುಖ್ಯಸ್ಥ
ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 18, 2023 | 6:13 PM

Share

ದೆಹಲಿ ಆಗಸ್ಟ್ 18: ರಾಹುಲ್ ಗಾಂಧಿ (Rahul Gandhi) ಅವರು ಅಮೇಠಿಯಿಂದಲೇ (Amethi) ಸ್ಪರ್ಧಿಸಲಿದ್ದಾರೆ ಎಂದು ಅಜಯ್ ರಾಯ್ (Ajay Rai)ಶುಕ್ರವಾರ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ಒಂದು ದಿನದ ನಂತರ ಅಜಯ್ ರಾಯ್ ಈ  ಹೇಳಿಕೆ ನೀಡಿದ್ದಾರೆ. 2024 ರ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅಜಯ್ ರಾಯ್, ಅವರು ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಎಲ್ಲಿ ಬೇಕಾದರೂ ಸ್ಪರ್ಧಿಸುತ್ತಾರೆ. ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಬಯಸಿದರೆ, ಪ್ರತಿಯೊಬ್ಬ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸುತ್ತಾರೆ ಎಂದಿದ್ದಾರೆ. ಸ್ಮೃತಿ ಇರಾನಿ ಕುರಿತು ಮಾತನಾಡಿದ ರಾಯ್, ಅವರು ಭರವಸೆ ನೀಡಿದಂತೆ ಪ್ರತಿ ಕಿಲೋಗೆ ₹ 13 ಕ್ಕೆ ಸಕ್ಕರೆ ಲಭ್ಯವಾಗಬಹುದೇ ಎಂದು ಅವರನ್ನು ಕೇಳಿ, ಸಕ್ಕರೆ ಎಲ್ಲಿ ಹೋಯಿತು ಎಂದು ಸಾರ್ವಜನಿಕರಿಗೆ ಉತ್ತರಿಸಬೇಕು ಎಂದಿದ್ದಾರೆ.

2019 ರಲ್ಲಿ, ಪ್ರಿಯಾಂಕಾ ಗಾಂಧಿ ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಇದ್ದಾಗಲೇ ಕೊನೆಯ ಕ್ಷಣದಲ್ಲಿ ಅಜಯ್ ರಾಯ್ ಅವರನ್ನು ವಾರಣಾಸಿಯಿಂದ ಕಣಕ್ಕೆ ಇಳಿಸಲಾಗಿತ್ತು. 2014ರಲ್ಲೂ ಅಜಯ್ ರಾಯ್ ವಾರಣಾಸಿಯಿಂದ ಸ್ಪರ್ಧಿಸಿ ನರೇಂದ್ರ ಮೋದಿ ವಿರುದ್ಧ ಸೋತಿದ್ದರು. ಲೋಕಸಭೆ ಚುನಾವಣೆ 2024ಕ್ಕೆ ಇನ್ನೇನು ತಿಂಗಳುಗಳು ಬಾಕಿ ಇರುವಾಗ ಬ್ರಿಜ್ಲಾಲ್ ಖಾಬ್ರಿ ಬದಲಿಗೆ ಅಜಯ್ ರಾಯ್ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ:  Maternity Benefits: ಗುತ್ತಿಗೆ ಉದ್ಯೋಗದಲ್ಲಿನ ಅವಧಿ ಮುಗಿದಿದ್ದರೂ ಹೆರಿಗೆ ರಜೆಯನ್ನು ನೀಡಬಹುದು: ಸುಪ್ರೀಂಕೋರ್ಟ್

ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಬಗ್ಗೆ ಆಕೆಯ ಪತಿ ರಾಬರ್ಟ್ ವಾದ್ರಾ ಕೂಡಾ ಮಾತನಾಡಿದ್ದಾರೆ. ಅವಳು ಪ್ರಿಯಾಂಕಾ ಲೋಕಸಭೆಯಲ್ಲಿ ಇರಲೇಬೇಕು. ಆಕೆಗೆ ಎಲ್ಲಾ ಅರ್ಹತೆಗಳಿವೆ. ಅವಳು ಸಂಸತ್ತಿನಲ್ಲಿರಲು ಅರ್ಹಳು. ಕಾಂಗ್ರೆಸ್ ಪಕ್ಷವು ಅವಳನ್ನು ಸ್ವೀಕರಿಸುತ್ತದೆ ಮತ್ತು ಉತ್ತಮವಾಗಿ ಯೋಜಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ್ದ ರಾಬರ್ಟ್ ವಾದ್ರಾ ಹೇಳಿದ್ದಾರೆ.

ವಯನಾಡಿನಿಂದ ಸ್ಪರ್ಧಿಸಿದ್ದರು ರಾಹುಲ್ ಗಾಂಧಿ

2019ರಲ್ಲಿ ರಾಹುಲ್ ಗಾಂಧಿ ಅವರು ಅಮೇಠಿ ಮತ್ತು ವಯನಾಡ್ ಎರಡರಿಂದಲೂ ಸ್ಪರ್ಧಿಸಿದ್ದರು. ಅಮೇಠಿ ಪ್ರತಿಷ್ಠೆಯ ಸ್ಥಾನವಾಗಿದ್ದರೆ ವಯನಾಡ್ ದಕ್ಷಿಣ ಭಾರತದಲ್ಲಿ ಅವರ ಮೊದಲ ಪ್ರವೇಶವಾಗಿತ್ತು. ಅಮೇಠಿಯಲ್ಲಿ ರಾಹುಲ್ ಗಾಂಧಿಯನ್ನು ಸ್ಮೃತಿ ಇರಾನಿ ಸೋಲಿಸಿದ್ದುಸ ರಾಹುಲ್ ಗಾಂಧಿ ಅವರು ವಯನಾಡಿನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. 2019 ರ ಮೋದಿ ಉಪನಾಮ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡ ನಂತರ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತದೆಯೇ ಎಂಬುದು ಅನುಮಾನವಾಗಿತ್ತು. ರಾಹುಲ್ ಗಾಂಧಿ ಅವರ ದೋಷಾರೋಪಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದ್ದರಿಂದ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ