AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕೃಷ್ಣನ ಜನ್ಮಭೂಮಿ ಮಥುರಾದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಾಣ

ಅಯೋಧ್ಯೆಯ ರಾಮ ಮಂದಿರದಂತೆಯೇ ಶ್ರೀಕೃಷ್ಣನ ಜನ್ಮಭೂಮಿ ಮಥುರಾ(Mathura)ದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ. ಇದೀಗ ಕೃಷ್ಣ ಜನ್ಮಭೂಮಿ ಸಮೀಕ್ಷೆಗೆ ನ್ಯಾಯಾಲಯ ಆದೇಶ ನೀಡಿದ್ದು , ಅಂತಿಮ ತೀರ್ಮಾನವೂ ಹಿಂದೂಗಳ ಪರವಾಗಿಯೇ ಇರಲಿದೆ ಎಂದು ದೃಢವಾಗಿ ನಂಬಿರುವುದಾಗಿ ಮೌರ್ಯ ತಿಳಿಸಿದ್ದಾರೆ.

ಶ್ರೀಕೃಷ್ಣನ ಜನ್ಮಭೂಮಿ ಮಥುರಾದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಾಣ
ಮಥುರಾImage Credit source: Trawell.in
Follow us
ನಯನಾ ರಾಜೀವ್
|

Updated on: Jan 02, 2024 | 11:59 AM

ಅಯೋಧ್ಯೆಯ ರಾಮ ಮಂದಿರದಂತೆಯೇ ಶ್ರೀಕೃಷ್ಣನ ಜನ್ಮಭೂಮಿ ಮಥುರಾ(Mathura)ದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ. ಇದೀಗ ಕೃಷ್ಣ ಜನ್ಮಭೂಮಿ ಸಮೀಕ್ಷೆಗೆ ನ್ಯಾಯಾಲಯ ಆದೇಶ ನೀಡಿದ್ದು , ಅಂತಿಮ ತೀರ್ಮಾನವೂ ಹಿಂದೂಗಳ ಪರವಾಗಿಯೇ ಇರಲಿದೆ ಎಂದು ದೃಢವಾಗಿ ನಂಬಿರುವುದಾಗಿ ಮೌರ್ಯ ತಿಳಿಸಿದ್ದಾರೆ.

ಕೃಷ್ಣ ಜನ್ಮಭೂಮಿಗೆ ಭೇಟಿ ನೀಡಿದ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು ಮತ್ತು ಬಿಜೆಪಿ ಸರ್ಕಾರವು ಧಾರ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸಲು ಮಥುರಾ ಮತ್ತು ವೃಂದಾವನದ ಅಭಿವೃದ್ಧಿಗೆ ಕೋಟಿಗಟ್ಟಲೆ ಖರ್ಚು ಮಾಡಿದೆ. ಶ್ರೀಕೃಷ್ಣ ಮಂದಿರವನ್ನು ಕಟ್ಟಲು ಸಮಾಜವಾದಿ ಪಕ್ಷಕ್ಕೆ ಇಷ್ಟವಿಲ್ಲ ಎಂದು ಆರೋಪಿಸಿರುವ ಕೇಶವ್ ಪ್ರಸಾದ್ ಮೌರ್ಯ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಅಲ್ಪಸಂಖ್ಯಾತರ ಮತಕ್ಕಾಗಿ ಹಿಂದೂಗಳ ರಕ್ತ ಹರಿಸುತ್ತಿರುವ ಎಸ್‌ಪಿಗೆ ಶ್ರೀಕೃಷ್ಣನ ವಂಶಸ್ಥರ ಮತ ಬೇಕು, ಆದರೆ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಮಂದಿರ ಬೇಡ ಎಂದು ಮೌರ್ಯ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಮುಸ್ಲಿಮರು ಮಥುರಾ, ಕಾಶಿ ಬಿಟ್ಟುಕೊಡದಿದ್ದರೆ ಕರಸೇವೆ ಮೂಲಕ ಪಡೆದುಕೊಳ್ಳುತ್ತೇವೆ: ಪ್ರಮೋದ್ ಮುತಾಲಿಕ್

2021 ರಲ್ಲಿ, ಮೌರ್ಯ ಅವರು ಮಥುರಾದಲ್ಲಿ ಶ್ರೀ ಕೃಷ್ಣ ದೇವಾಲಯವನ್ನು ನಿರ್ಮಿಸಲು ಬಯಸುತ್ತೀರಾ ಅಥವಾ ಬೇಡವೇ ಎಂದು ಯಾದವ್ ಅವರನ್ನು ಕೇಳಿದ್ದರು. ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದದ ಪ್ರಕರಣವು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ