AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕೃಷ್ಣನ ಜನ್ಮಭೂಮಿ ಮಥುರಾದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಾಣ

ಅಯೋಧ್ಯೆಯ ರಾಮ ಮಂದಿರದಂತೆಯೇ ಶ್ರೀಕೃಷ್ಣನ ಜನ್ಮಭೂಮಿ ಮಥುರಾ(Mathura)ದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ. ಇದೀಗ ಕೃಷ್ಣ ಜನ್ಮಭೂಮಿ ಸಮೀಕ್ಷೆಗೆ ನ್ಯಾಯಾಲಯ ಆದೇಶ ನೀಡಿದ್ದು , ಅಂತಿಮ ತೀರ್ಮಾನವೂ ಹಿಂದೂಗಳ ಪರವಾಗಿಯೇ ಇರಲಿದೆ ಎಂದು ದೃಢವಾಗಿ ನಂಬಿರುವುದಾಗಿ ಮೌರ್ಯ ತಿಳಿಸಿದ್ದಾರೆ.

ಶ್ರೀಕೃಷ್ಣನ ಜನ್ಮಭೂಮಿ ಮಥುರಾದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಾಣ
ಮಥುರಾImage Credit source: Trawell.in
ನಯನಾ ರಾಜೀವ್
|

Updated on: Jan 02, 2024 | 11:59 AM

Share

ಅಯೋಧ್ಯೆಯ ರಾಮ ಮಂದಿರದಂತೆಯೇ ಶ್ರೀಕೃಷ್ಣನ ಜನ್ಮಭೂಮಿ ಮಥುರಾ(Mathura)ದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ. ಇದೀಗ ಕೃಷ್ಣ ಜನ್ಮಭೂಮಿ ಸಮೀಕ್ಷೆಗೆ ನ್ಯಾಯಾಲಯ ಆದೇಶ ನೀಡಿದ್ದು , ಅಂತಿಮ ತೀರ್ಮಾನವೂ ಹಿಂದೂಗಳ ಪರವಾಗಿಯೇ ಇರಲಿದೆ ಎಂದು ದೃಢವಾಗಿ ನಂಬಿರುವುದಾಗಿ ಮೌರ್ಯ ತಿಳಿಸಿದ್ದಾರೆ.

ಕೃಷ್ಣ ಜನ್ಮಭೂಮಿಗೆ ಭೇಟಿ ನೀಡಿದ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು ಮತ್ತು ಬಿಜೆಪಿ ಸರ್ಕಾರವು ಧಾರ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸಲು ಮಥುರಾ ಮತ್ತು ವೃಂದಾವನದ ಅಭಿವೃದ್ಧಿಗೆ ಕೋಟಿಗಟ್ಟಲೆ ಖರ್ಚು ಮಾಡಿದೆ. ಶ್ರೀಕೃಷ್ಣ ಮಂದಿರವನ್ನು ಕಟ್ಟಲು ಸಮಾಜವಾದಿ ಪಕ್ಷಕ್ಕೆ ಇಷ್ಟವಿಲ್ಲ ಎಂದು ಆರೋಪಿಸಿರುವ ಕೇಶವ್ ಪ್ರಸಾದ್ ಮೌರ್ಯ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಅಲ್ಪಸಂಖ್ಯಾತರ ಮತಕ್ಕಾಗಿ ಹಿಂದೂಗಳ ರಕ್ತ ಹರಿಸುತ್ತಿರುವ ಎಸ್‌ಪಿಗೆ ಶ್ರೀಕೃಷ್ಣನ ವಂಶಸ್ಥರ ಮತ ಬೇಕು, ಆದರೆ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಮಂದಿರ ಬೇಡ ಎಂದು ಮೌರ್ಯ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಮುಸ್ಲಿಮರು ಮಥುರಾ, ಕಾಶಿ ಬಿಟ್ಟುಕೊಡದಿದ್ದರೆ ಕರಸೇವೆ ಮೂಲಕ ಪಡೆದುಕೊಳ್ಳುತ್ತೇವೆ: ಪ್ರಮೋದ್ ಮುತಾಲಿಕ್

2021 ರಲ್ಲಿ, ಮೌರ್ಯ ಅವರು ಮಥುರಾದಲ್ಲಿ ಶ್ರೀ ಕೃಷ್ಣ ದೇವಾಲಯವನ್ನು ನಿರ್ಮಿಸಲು ಬಯಸುತ್ತೀರಾ ಅಥವಾ ಬೇಡವೇ ಎಂದು ಯಾದವ್ ಅವರನ್ನು ಕೇಳಿದ್ದರು. ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದದ ಪ್ರಕರಣವು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​