AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕೃಷ್ಣನ ಜನ್ಮಭೂಮಿ ಮಥುರಾದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಾಣ

ಅಯೋಧ್ಯೆಯ ರಾಮ ಮಂದಿರದಂತೆಯೇ ಶ್ರೀಕೃಷ್ಣನ ಜನ್ಮಭೂಮಿ ಮಥುರಾ(Mathura)ದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ. ಇದೀಗ ಕೃಷ್ಣ ಜನ್ಮಭೂಮಿ ಸಮೀಕ್ಷೆಗೆ ನ್ಯಾಯಾಲಯ ಆದೇಶ ನೀಡಿದ್ದು , ಅಂತಿಮ ತೀರ್ಮಾನವೂ ಹಿಂದೂಗಳ ಪರವಾಗಿಯೇ ಇರಲಿದೆ ಎಂದು ದೃಢವಾಗಿ ನಂಬಿರುವುದಾಗಿ ಮೌರ್ಯ ತಿಳಿಸಿದ್ದಾರೆ.

ಶ್ರೀಕೃಷ್ಣನ ಜನ್ಮಭೂಮಿ ಮಥುರಾದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಾಣ
ಮಥುರಾImage Credit source: Trawell.in
ನಯನಾ ರಾಜೀವ್
|

Updated on: Jan 02, 2024 | 11:59 AM

Share

ಅಯೋಧ್ಯೆಯ ರಾಮ ಮಂದಿರದಂತೆಯೇ ಶ್ರೀಕೃಷ್ಣನ ಜನ್ಮಭೂಮಿ ಮಥುರಾ(Mathura)ದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ. ಇದೀಗ ಕೃಷ್ಣ ಜನ್ಮಭೂಮಿ ಸಮೀಕ್ಷೆಗೆ ನ್ಯಾಯಾಲಯ ಆದೇಶ ನೀಡಿದ್ದು , ಅಂತಿಮ ತೀರ್ಮಾನವೂ ಹಿಂದೂಗಳ ಪರವಾಗಿಯೇ ಇರಲಿದೆ ಎಂದು ದೃಢವಾಗಿ ನಂಬಿರುವುದಾಗಿ ಮೌರ್ಯ ತಿಳಿಸಿದ್ದಾರೆ.

ಕೃಷ್ಣ ಜನ್ಮಭೂಮಿಗೆ ಭೇಟಿ ನೀಡಿದ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು ಮತ್ತು ಬಿಜೆಪಿ ಸರ್ಕಾರವು ಧಾರ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸಲು ಮಥುರಾ ಮತ್ತು ವೃಂದಾವನದ ಅಭಿವೃದ್ಧಿಗೆ ಕೋಟಿಗಟ್ಟಲೆ ಖರ್ಚು ಮಾಡಿದೆ. ಶ್ರೀಕೃಷ್ಣ ಮಂದಿರವನ್ನು ಕಟ್ಟಲು ಸಮಾಜವಾದಿ ಪಕ್ಷಕ್ಕೆ ಇಷ್ಟವಿಲ್ಲ ಎಂದು ಆರೋಪಿಸಿರುವ ಕೇಶವ್ ಪ್ರಸಾದ್ ಮೌರ್ಯ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಅಲ್ಪಸಂಖ್ಯಾತರ ಮತಕ್ಕಾಗಿ ಹಿಂದೂಗಳ ರಕ್ತ ಹರಿಸುತ್ತಿರುವ ಎಸ್‌ಪಿಗೆ ಶ್ರೀಕೃಷ್ಣನ ವಂಶಸ್ಥರ ಮತ ಬೇಕು, ಆದರೆ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಮಂದಿರ ಬೇಡ ಎಂದು ಮೌರ್ಯ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಮುಸ್ಲಿಮರು ಮಥುರಾ, ಕಾಶಿ ಬಿಟ್ಟುಕೊಡದಿದ್ದರೆ ಕರಸೇವೆ ಮೂಲಕ ಪಡೆದುಕೊಳ್ಳುತ್ತೇವೆ: ಪ್ರಮೋದ್ ಮುತಾಲಿಕ್

2021 ರಲ್ಲಿ, ಮೌರ್ಯ ಅವರು ಮಥುರಾದಲ್ಲಿ ಶ್ರೀ ಕೃಷ್ಣ ದೇವಾಲಯವನ್ನು ನಿರ್ಮಿಸಲು ಬಯಸುತ್ತೀರಾ ಅಥವಾ ಬೇಡವೇ ಎಂದು ಯಾದವ್ ಅವರನ್ನು ಕೇಳಿದ್ದರು. ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದದ ಪ್ರಕರಣವು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ