AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕೃಷ್ಣನ ಜನ್ಮಭೂಮಿ ಮಥುರಾದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಾಣ

ಅಯೋಧ್ಯೆಯ ರಾಮ ಮಂದಿರದಂತೆಯೇ ಶ್ರೀಕೃಷ್ಣನ ಜನ್ಮಭೂಮಿ ಮಥುರಾ(Mathura)ದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ. ಇದೀಗ ಕೃಷ್ಣ ಜನ್ಮಭೂಮಿ ಸಮೀಕ್ಷೆಗೆ ನ್ಯಾಯಾಲಯ ಆದೇಶ ನೀಡಿದ್ದು , ಅಂತಿಮ ತೀರ್ಮಾನವೂ ಹಿಂದೂಗಳ ಪರವಾಗಿಯೇ ಇರಲಿದೆ ಎಂದು ದೃಢವಾಗಿ ನಂಬಿರುವುದಾಗಿ ಮೌರ್ಯ ತಿಳಿಸಿದ್ದಾರೆ.

ಶ್ರೀಕೃಷ್ಣನ ಜನ್ಮಭೂಮಿ ಮಥುರಾದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಾಣ
ಮಥುರಾImage Credit source: Trawell.in
ನಯನಾ ರಾಜೀವ್
|

Updated on: Jan 02, 2024 | 11:59 AM

Share

ಅಯೋಧ್ಯೆಯ ರಾಮ ಮಂದಿರದಂತೆಯೇ ಶ್ರೀಕೃಷ್ಣನ ಜನ್ಮಭೂಮಿ ಮಥುರಾ(Mathura)ದಲ್ಲಿ ಶೀಘ್ರ ಬೃಹತ್ ದೇವಾಲಯ ನಿರ್ಮಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ. ಇದೀಗ ಕೃಷ್ಣ ಜನ್ಮಭೂಮಿ ಸಮೀಕ್ಷೆಗೆ ನ್ಯಾಯಾಲಯ ಆದೇಶ ನೀಡಿದ್ದು , ಅಂತಿಮ ತೀರ್ಮಾನವೂ ಹಿಂದೂಗಳ ಪರವಾಗಿಯೇ ಇರಲಿದೆ ಎಂದು ದೃಢವಾಗಿ ನಂಬಿರುವುದಾಗಿ ಮೌರ್ಯ ತಿಳಿಸಿದ್ದಾರೆ.

ಕೃಷ್ಣ ಜನ್ಮಭೂಮಿಗೆ ಭೇಟಿ ನೀಡಿದ ದೇಶದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು ಮತ್ತು ಬಿಜೆಪಿ ಸರ್ಕಾರವು ಧಾರ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸಲು ಮಥುರಾ ಮತ್ತು ವೃಂದಾವನದ ಅಭಿವೃದ್ಧಿಗೆ ಕೋಟಿಗಟ್ಟಲೆ ಖರ್ಚು ಮಾಡಿದೆ. ಶ್ರೀಕೃಷ್ಣ ಮಂದಿರವನ್ನು ಕಟ್ಟಲು ಸಮಾಜವಾದಿ ಪಕ್ಷಕ್ಕೆ ಇಷ್ಟವಿಲ್ಲ ಎಂದು ಆರೋಪಿಸಿರುವ ಕೇಶವ್ ಪ್ರಸಾದ್ ಮೌರ್ಯ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಅಲ್ಪಸಂಖ್ಯಾತರ ಮತಕ್ಕಾಗಿ ಹಿಂದೂಗಳ ರಕ್ತ ಹರಿಸುತ್ತಿರುವ ಎಸ್‌ಪಿಗೆ ಶ್ರೀಕೃಷ್ಣನ ವಂಶಸ್ಥರ ಮತ ಬೇಕು, ಆದರೆ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಮಂದಿರ ಬೇಡ ಎಂದು ಮೌರ್ಯ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಮುಸ್ಲಿಮರು ಮಥುರಾ, ಕಾಶಿ ಬಿಟ್ಟುಕೊಡದಿದ್ದರೆ ಕರಸೇವೆ ಮೂಲಕ ಪಡೆದುಕೊಳ್ಳುತ್ತೇವೆ: ಪ್ರಮೋದ್ ಮುತಾಲಿಕ್

2021 ರಲ್ಲಿ, ಮೌರ್ಯ ಅವರು ಮಥುರಾದಲ್ಲಿ ಶ್ರೀ ಕೃಷ್ಣ ದೇವಾಲಯವನ್ನು ನಿರ್ಮಿಸಲು ಬಯಸುತ್ತೀರಾ ಅಥವಾ ಬೇಡವೇ ಎಂದು ಯಾದವ್ ಅವರನ್ನು ಕೇಳಿದ್ದರು. ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದದ ಪ್ರಕರಣವು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ