AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಎನ್​ಕೌಂಟರ್​ನಲ್ಲಿ ಮೋಸ್ಟ್​ ವಾಂಟೆಡ್ ಕ್ರಿಮಿನಲ್​ ಗುಫ್ರಾನ್​ ಹತ್ಯೆ

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ವಾಂಟೆಡ್ ಕ್ರಿಮಿನಲ್ ಒಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

Uttar Pradesh: ಎನ್​ಕೌಂಟರ್​ನಲ್ಲಿ ಮೋಸ್ಟ್​ ವಾಂಟೆಡ್ ಕ್ರಿಮಿನಲ್​ ಗುಫ್ರಾನ್​ ಹತ್ಯೆ
ಎನ್​ಕೌಂಟರ್Image Credit source: ANI
Follow us
ನಯನಾ ರಾಜೀವ್
|

Updated on:Jun 27, 2023 | 8:00 AM

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ವಾಂಟೆಡ್ ಕ್ರಿಮಿನಲ್ ಒಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಾತಕಿಯನ್ನು ಗುಫ್ರಾನ್ ಎಂದು ಗುರುತಿಸಲಾಗಿದ್ದು, ಹಲವಾರು ಕೊಲೆ ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಈತ ಬೇಕಾಗಿದ್ದ ಎನ್ನಲಾಗಿದೆ. ಪ್ರತಾಪ್‌ಗಢ್ ಮತ್ತು ಉತ್ತರ ಪ್ರದೇಶದ ಇತರ ಜಿಲ್ಲೆಗಳಲ್ಲಿ 13 ಕೊಲೆ, ಕೊಲೆ ಯತ್ನ ಮತ್ತು ದರೋಡೆ ಪ್ರಕರಣಗಳಲ್ಲಿ ಗುಫ್ರಾನ್ ಬೇಕಾಗಿದ್ದ.

ಈತನ ಪತ್ತೆಗೆ ಉತ್ತರ ಪ್ರದೇಶ ಪೊಲೀಸರು 1,00,000 ರೂ.ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ಪೊಲೀಸರು ಮತ್ತು ಅಪರಾಧಿಗಳ ನಡುವಿನ ಎನ್‌ಕೌಂಟರ್‌ನಲ್ಲಿ ಇದು ಇತ್ತೀಚಿನದು.

ಮತ್ತಷ್ಟು ಓದಿ: Encounter In UP: ಯುಪಿಯಲ್ಲಿ ಕಳೆದ 6 ವರ್ಷಗಳಲ್ಲಿ 10 ಸಾವಿರಕ್ಕೂ ಅಧಿಕ ಎನ್​ಕೌಂಟರ್​ಗಳು, 63 ಕ್ರಿಮಿನಲ್​ಗಳ ಹತ್ಯೆ

2017 ರಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ನಂತರ, 10,900 ಕ್ಕೂ ಹೆಚ್ಚು ಎನ್‌ಕೌಂಟರ್‌ಗಳು ನಡೆದಿವೆ, ಇದರಲ್ಲಿ 185 ಕ್ಕೂ ಹೆಚ್ಚು ಕ್ರಿಮಿನಲ್‌ಗಳು ಕೊಲ್ಲಲ್ಪಟ್ಟಿದ್ದಾರೆ.

ಕೌಶಂಬಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಎನ್‌ಕೌಂಟರ್ ನಡೆದಿದ್ದು, ಇದರಲ್ಲಿ ಗುಫ್ರಾನ್‌ಗೆ ಗುಂಡು ಹಾರಿಸಲಾಗಿದೆ. ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಷ್ಟರಲ್ಲಿ ಆತ ಮೃತಪಟ್ಟಿದ್ದ ಎಂದು ವೈದ್ಯರು ಘೋಷಿಸಿದ್ದಾರೆ.

ಎಸ್‌ಪಿ ಕೌಶಂಬಿ ಬ್ರಿಜೇಶ್ ಶ್ರೀವಾಸ್ತವ ಪ್ರಕಾರ, ಕೌಶಂಬಿಯ ಮಂಜನ್‌ಪುರದ ಸಮದಾ ಸಕ್ಕರೆ ಕಾರ್ಖಾನೆಯ ಬಳಿ ಯುಪಿ ಎಸ್‌ಟಿಎಫ್‌ನೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೊ.ಗುಫ್ರಾನ್ ಎಂದು ಗುರುತಿಸಲಾದ ಕ್ರಿಮಿನಲ್ ಮೃತಪಟ್ಟಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:00 am, Tue, 27 June 23

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು