Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡಗಳ ತೆರವು ಕಾನೂನು ಪ್ರಕಾರವೇ ನಡೆದಿದೆ: ಸುಪ್ರೀಂಗೆ ಯುಪಿ ಸರ್ಕಾರದ ಮಾಹಿತಿ

ಉತ್ತರ ಪ್ರದೇಶದ ಕಾನ್ಪುರ್, ಪ್ರಯಾಗ್​ರಾಜ್​ನಲ್ಲಿ ನಡೆದ ಕಟ್ಟಡಗಳ ತೆರವು ಪ್ರಕರಣದ ಕುರಿತು ಸರ್ಕಾರವು ಸುಪ್ರೋಂಕೋರ್ಟ್​ಗೆ ಮಾಹಿತಿ ನೀಡಿದ್ದು, ಅಕ್ರಮ ಕಟ್ಟಡಗಳ ಧ್ವಂಸವು ಕಾನೂನು ಪ್ರಕಾರವೇ ನಡೆದಿದೆ ಗಲಭೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

ಕಟ್ಟಡಗಳ ತೆರವು ಕಾನೂನು ಪ್ರಕಾರವೇ ನಡೆದಿದೆ: ಸುಪ್ರೀಂಗೆ ಯುಪಿ ಸರ್ಕಾರದ ಮಾಹಿತಿ
Demolition
Follow us
TV9 Web
| Updated By: ನಯನಾ ರಾಜೀವ್

Updated on: Jun 22, 2022 | 2:38 PM

ಲಕ್ನೋ:  ಕಾನ್ಪುರ್, ಪ್ರಯಾಗ್​ರಾಜ್​ನಲ್ಲಿ ನಡೆದ ಕಟ್ಟಡಗಳ ತೆರವು ಪ್ರಕರಣದ ಕುರಿತು ಉತ್ತರ ಪ್ರದೇಶ ಸರ್ಕಾರವು ಸುಪ್ರೋಂಕೋರ್ಟ್​ಗೆ ಮಾಹಿತಿ ನೀಡಿದ್ದು, ಅಕ್ರಮ ಕಟ್ಟಡಗಳ ಧ್ವಂಸವು ಕಾನೂನು ಪ್ರಕಾರವೇ ನಡೆದಿದೆ ಗಲಭೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

ಕಟ್ಟಡಗಳ ತೆರವು ಕಾರ್ಯದ ಕುರಿತು ಜಮೈತ್ ಉಲಾಮಾ-ಎ-ಹಿಂದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ, ಉತ್ತರ ಪ್ರದೇಶ ಅರ್ಬನ್ ಪ್ಲಾನಿಂಗ್ ಆಂಡ್ ಡೆವಲಾಪ್​ಮೆಂಟ್ ಆಕ್ಟ್​ 1972ರ ಪ್ರಕಾರ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಸರ್ಕಾರ ತಿಳಿಸಿದೆ.

ಕಳೆದ ವಾರದ ಹಿಂಸಾಚಾರ ಪ್ರಕರಣದ ಆರೋಪಿಗಳ ಮನೆಗಳನ್ನು ಅಕ್ರಮವಾಗಿ ಕೆಡವಲಾಗಿದೆ ಎಂದು ಆರೋಪಿಸಿ, ಯೋಗಿ ಆದಿತ್ಯನಾಥ್ ಸರ್ಕಾರದ ಬುಲ್ಡೋಜರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ‘ಬುಲ್ಡೋಜರ್‌ನ ಕ್ರಮ ಕಾನೂನಿನ ಪ್ರಕಾರ ಇರಬೇಕು’ಎಂದು ಹೇಳಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಯೋಗಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರೆ, ಅರ್ಜಿದಾರರ ಪರ ವಕೀಲ ಸಿಯು ಸಿಂಗ್ ಇದಕ್ಕೆ ತಡೆ ನೀಡಬೇಕೆಂದು ಒತ್ತಾಯಿಸಿದರು. ವಿಚಾರಣೆಯ ನಂತರ, ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ವೇಳೆ ಕಾನೂನಿನ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಇದರೊಂದಿಗೆ ಯುಪಿ ಸರ್ಕಾರ ಹಾಗೂ ಪ್ರಯಾಗ್‌ರಾಜ್ ಮತ್ತು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ಬಗ್ಗೆ 3 ದಿನಗಳಲ್ಲಿ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಇದೀಗ ಸರ್ಕಾರವು ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದ್ದು, ಎಲ್ಲಾ ಕಟ್ಟಡಗಳ ತೆರವು ಕಾನೂನು ಪ್ರಕಾರವೇ ನಡೆದಿದೆ, ತೆರವು ಕಾರ್ಯಕ್ಕೂ ಗಲಭೆಗೂ ಸಂಬಂಧವಿಲ್ಲ ಎಂದು ಹೇಳಿದೆ.

ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ನಡೆದ ಗಲಭೆಯ ಮಾಸ್ಟರ್​ ಮೈಂಡ್ ಎನಿಸಿಕೊಂಡಿದ್ದ ಜಾವೇದ್ ಮೊಹಮ್ಮದ್ ಮನೆಯೂ ಕೂಡ ಅದರಲ್ಲಿ ಒಂದಾಗಿತ್ತು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ