AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡಗಳ ತೆರವು ಕಾನೂನು ಪ್ರಕಾರವೇ ನಡೆದಿದೆ: ಸುಪ್ರೀಂಗೆ ಯುಪಿ ಸರ್ಕಾರದ ಮಾಹಿತಿ

ಉತ್ತರ ಪ್ರದೇಶದ ಕಾನ್ಪುರ್, ಪ್ರಯಾಗ್​ರಾಜ್​ನಲ್ಲಿ ನಡೆದ ಕಟ್ಟಡಗಳ ತೆರವು ಪ್ರಕರಣದ ಕುರಿತು ಸರ್ಕಾರವು ಸುಪ್ರೋಂಕೋರ್ಟ್​ಗೆ ಮಾಹಿತಿ ನೀಡಿದ್ದು, ಅಕ್ರಮ ಕಟ್ಟಡಗಳ ಧ್ವಂಸವು ಕಾನೂನು ಪ್ರಕಾರವೇ ನಡೆದಿದೆ ಗಲಭೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

ಕಟ್ಟಡಗಳ ತೆರವು ಕಾನೂನು ಪ್ರಕಾರವೇ ನಡೆದಿದೆ: ಸುಪ್ರೀಂಗೆ ಯುಪಿ ಸರ್ಕಾರದ ಮಾಹಿತಿ
Demolition
TV9 Web
| Edited By: |

Updated on: Jun 22, 2022 | 2:38 PM

Share

ಲಕ್ನೋ:  ಕಾನ್ಪುರ್, ಪ್ರಯಾಗ್​ರಾಜ್​ನಲ್ಲಿ ನಡೆದ ಕಟ್ಟಡಗಳ ತೆರವು ಪ್ರಕರಣದ ಕುರಿತು ಉತ್ತರ ಪ್ರದೇಶ ಸರ್ಕಾರವು ಸುಪ್ರೋಂಕೋರ್ಟ್​ಗೆ ಮಾಹಿತಿ ನೀಡಿದ್ದು, ಅಕ್ರಮ ಕಟ್ಟಡಗಳ ಧ್ವಂಸವು ಕಾನೂನು ಪ್ರಕಾರವೇ ನಡೆದಿದೆ ಗಲಭೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

ಕಟ್ಟಡಗಳ ತೆರವು ಕಾರ್ಯದ ಕುರಿತು ಜಮೈತ್ ಉಲಾಮಾ-ಎ-ಹಿಂದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ, ಉತ್ತರ ಪ್ರದೇಶ ಅರ್ಬನ್ ಪ್ಲಾನಿಂಗ್ ಆಂಡ್ ಡೆವಲಾಪ್​ಮೆಂಟ್ ಆಕ್ಟ್​ 1972ರ ಪ್ರಕಾರ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಸರ್ಕಾರ ತಿಳಿಸಿದೆ.

ಕಳೆದ ವಾರದ ಹಿಂಸಾಚಾರ ಪ್ರಕರಣದ ಆರೋಪಿಗಳ ಮನೆಗಳನ್ನು ಅಕ್ರಮವಾಗಿ ಕೆಡವಲಾಗಿದೆ ಎಂದು ಆರೋಪಿಸಿ, ಯೋಗಿ ಆದಿತ್ಯನಾಥ್ ಸರ್ಕಾರದ ಬುಲ್ಡೋಜರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ‘ಬುಲ್ಡೋಜರ್‌ನ ಕ್ರಮ ಕಾನೂನಿನ ಪ್ರಕಾರ ಇರಬೇಕು’ಎಂದು ಹೇಳಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಯೋಗಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರೆ, ಅರ್ಜಿದಾರರ ಪರ ವಕೀಲ ಸಿಯು ಸಿಂಗ್ ಇದಕ್ಕೆ ತಡೆ ನೀಡಬೇಕೆಂದು ಒತ್ತಾಯಿಸಿದರು. ವಿಚಾರಣೆಯ ನಂತರ, ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ವೇಳೆ ಕಾನೂನಿನ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಇದರೊಂದಿಗೆ ಯುಪಿ ಸರ್ಕಾರ ಹಾಗೂ ಪ್ರಯಾಗ್‌ರಾಜ್ ಮತ್ತು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ಬಗ್ಗೆ 3 ದಿನಗಳಲ್ಲಿ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಇದೀಗ ಸರ್ಕಾರವು ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದ್ದು, ಎಲ್ಲಾ ಕಟ್ಟಡಗಳ ತೆರವು ಕಾನೂನು ಪ್ರಕಾರವೇ ನಡೆದಿದೆ, ತೆರವು ಕಾರ್ಯಕ್ಕೂ ಗಲಭೆಗೂ ಸಂಬಂಧವಿಲ್ಲ ಎಂದು ಹೇಳಿದೆ.

ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ನಡೆದ ಗಲಭೆಯ ಮಾಸ್ಟರ್​ ಮೈಂಡ್ ಎನಿಸಿಕೊಂಡಿದ್ದ ಜಾವೇದ್ ಮೊಹಮ್ಮದ್ ಮನೆಯೂ ಕೂಡ ಅದರಲ್ಲಿ ಒಂದಾಗಿತ್ತು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ