ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣ: ಎಸ್​ಪಿ ವಿಕ್ರಾಂತ್​ ವೀರ್ ಸೇರಿ ಐವರ ಅಮಾನತು

ಉತ್ತರ ಪ್ರದೇಶದ ಹತ್ರಾಸ್‌ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ, ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿ, ಮಧ್ಯರಾತ್ರಿ ಯುವತಿಯ ಶವವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೆ ಎಸ್​ಐಟಿ ಶಿಫಾರಸು ಮೇರೆಗೆ ಹತ್ರಾಸ್‌ನ ಎಸ್​ಪಿ ವಿಕ್ರಾಂತ್​ ವೀರ್ ಸೇರಿ ಐವರನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ. ಇನ್ಸ್​ಪೆಕ್ಟರ್​ ದಿನೇಶ್​ ವರ್ಮಾ, ಎಸ್​ಐ ಜಗವೀರ್​ ಸಿಂಗ್, ಎಸ್​ಒ ರಾಮ್​ಶಬ್ದ್​, ಹೆಡ್​ ಕಾನ್ಸ್​ಟೇಬಲ್​ ಮಹೇಶ್​ […]

ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣ: ಎಸ್​ಪಿ ವಿಕ್ರಾಂತ್​ ವೀರ್ ಸೇರಿ ಐವರ ಅಮಾನತು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 03, 2020 | 9:53 AM

ಉತ್ತರ ಪ್ರದೇಶದ ಹತ್ರಾಸ್‌ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ, ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿ, ಮಧ್ಯರಾತ್ರಿ ಯುವತಿಯ ಶವವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಈ ಬೆನ್ನಲ್ಲೆ ಎಸ್​ಐಟಿ ಶಿಫಾರಸು ಮೇರೆಗೆ ಹತ್ರಾಸ್‌ನ ಎಸ್​ಪಿ ವಿಕ್ರಾಂತ್​ ವೀರ್ ಸೇರಿ ಐವರನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ. ಇನ್ಸ್​ಪೆಕ್ಟರ್​ ದಿನೇಶ್​ ವರ್ಮಾ, ಎಸ್​ಐ ಜಗವೀರ್​ ಸಿಂಗ್, ಎಸ್​ಒ ರಾಮ್​ಶಬ್ದ್​, ಹೆಡ್​ ಕಾನ್ಸ್​ಟೇಬಲ್​ ಮಹೇಶ್​ ಪಾಲ್, ಎಸ್​ಪಿ, ಎಸ್​ಒ ಸೇರಿ ಐವರು ಪೊಲೀಸರ ಅಮಾನತಿಗೆ ಆದೇಶಿಲಾಗಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us