AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ಮುಸ್ಲಿಂ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ಸಹೋದರರು 22 ವರ್ಷದ ಹಿಂದೂ ಯುವತಿ ಹಾಗೂ 27 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾರೆ. ಅಂತರ್ಧರ್ಮೀಯ ಪ್ರೀತಿಯನ್ನು ವಿರೋಧಿಸಿದ ಸಹೋದರರು, ಪ್ರೇಮಿಗಳನ್ನು ಕಟ್ಟಿಹಾಕಿ ಬರ್ಬರವಾಗಿ ಕೊಚ್ಚಿ ಕೊಂದಿದ್ದಾರೆ. ಪೊಲೀಸರ ತನಿಖೆಯಲ್ಲಿ ಹತ್ಯೆಯ ರಹಸ್ಯ ಬಯಲಾಗಿದ್ದು, ಇಬ್ಬರು ಸಹೋದರರನ್ನು ಬಂಧಿಸಲಾಗಿದೆ.

ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು
ಸಾವುImage Credit source: iStock
ನಯನಾ ರಾಜೀವ್
|

Updated on: Jan 22, 2026 | 2:06 PM

Share

ಲಕ್ನೋ, ಜನವರಿ 22: ಉತ್ತರ ಪ್ರದೇಶದ ಮೊರಾದಾಬಾದಿನಲ್ಲಿ  ಮರ್ಯಾದಾ ಹತ್ಯೆ(Honor Killing)ಯೊಂದು ನಡೆದಿದೆ. ತಮ್ಮ ತಂಗಿ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರರು ತಂಗಿಯಂದೂ ನೋಡದೆ ಇಬ್ಬರನ್ನೂ ಹತ್ಯೆ ಮಾಡಿದ್ದಾರೆ. 27 ವರ್ಷದ ಮುಸ್ಲಿಂ ಯುವಕ ಹಾಗೂ 22 ವರ್ಷದ ಹಿಂದೂ ಯುವತಿಯನ್ನು ಕಟ್ಟಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದರು. ಈ ಸಮಯದಲ್ಲಿ, ಅವರು ಕಾಜಲ್ ಅವರನ್ನು ಭೇಟಿಯಾದರು ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಕಾಜಲ್ ಅವರ ಸಹೋದರರು ಅಂತರ್ಧರ್ಮೀಯ ಸಂಬಂಧವನ್ನು ವಿರೋಧಿಸಿದರು ಮತ್ತು ಆತನನ್ನು ಮರೆತುಬಿಡು ಎಂದು ಕೇಳಿಕೊಂಡಿದ್ದರು.

ಸುಮಾರು ಮೂರು ದಿನಗಳ ಹಿಂದೆ, ಅರ್ಮಾನ್ ಮತ್ತು ಕಾಜಲ್ ಕಾಣೆಯಾಗಿದ್ದರು. ಅರ್ಮಾನ್ ತಂದೆ ಹನೀಫ್ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಕಾಜಲ್ ಕೂಡ ನಾಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿತ್ತು. ಆಕೆಯ ಸಹೋದರರನ್ನು ವಿಚಾರಣೆ ನಡೆಸಿದಾಗ, ಇಬ್ಬರನ್ನು ಕೊಂದಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ

ಆರೋಪಿಗಳು ಪೊಲೀಸರಿಗೆ ಶವಗಳನ್ನು ಹೂತಿಟ್ಟ ಸ್ಥಳಕ್ಕೆ ಪೊಲೀಸರನ್ನು ಕರೆದೊಯ್ದಿದ್ದರು. ಬುಧವಾರ ಸಂಜೆ ಶವಗಳನ್ನು ಹೊರತೆಗೆಯಲಾಯಿತು. ಅರ್ಮಾನ್ ಮತ್ತು ಕಾಜಲ್ ಅವರ ಕೈಕಾಲುಗಳನ್ನು ಕಟ್ಟಿಹಾಕಿ ಕೊಚ್ಚಿ ಕೊಲ್ಲಲಾಗಿದೆ ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಯುವತಿಯ ಸಹೋದರರೇ ಅವರನ್ನು ಕೊಂದಿದ್ದಾರೆ ಎಂಬುದು ತಿಳಿದುಬಂದಿದೆ. ಸಹೋದರರು ತಪ್ಪೊಪ್ಪಿಕೊಂಡಿದ್ದು, ನಾವು ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಕೊಲೆಗಳಿಗೆ ಬಳಸಿದ ಗುದ್ದಲಿಯನ್ನು ಸಹ ವಶಪಡಿಸಿಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಆಂಟಿಲ್ ಹೇಳಿದ್ದಾರೆ.

ಮಹಿಳೆಯ ಮೂವರು ಸಹೋದರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರಲ್ಲಿ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅರ್ಮಾನ್ ಮತ್ತು ಕಾಜಲ್ ನಡುವಿನ ಯಾವುದೇ ಸಂಬಂಧದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಅರ್ಮಾನ್ ಸಹೋದರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು