AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನನಿಬಿಡ ಪ್ರದೇಶದಲ್ಲಿ ಪತ್ನಿಯನ್ನು ಕೊಲೆಗೈದು ಪರಾರಿ, ಪತಿ ಕೊನೆಗೂ ಅರೆಸ್ಟ್​​

ಜನನಿಬಿಡ ಪ್ರದೇಶದಲ್ಲಿ ಪಿಸ್ತೂಲ್​ನಿಂದ ಗುಂಡಿಕ್ಕಿ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಗೋರಖ್​ಪುರದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಸ್ಥಳೀಯರು ರಕ್ತಸಿಕ್ತ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಗುಂಡು ಹಾರಿಸಿದ ನಂತರ ಆರೋಪಿ ವಿಶ್ವಕರ್ಮ ಚೌಹಾಣ್ ಸ್ಥಳದಿಂದ ಪರಾರಿಯಾಗಿದ್ದನು ಆದರೆ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಜನನಿಬಿಡ  ಪ್ರದೇಶದಲ್ಲಿ ಪತ್ನಿಯನ್ನು ಕೊಲೆಗೈದು ಪರಾರಿ, ಪತಿ ಕೊನೆಗೂ ಅರೆಸ್ಟ್​​
ಕೊಲೆಯಾದ ಮಹಿಳೆ
ನಯನಾ ರಾಜೀವ್
|

Updated on: Sep 04, 2025 | 11:01 AM

Share

ಗೋರಖ್​ಪುರ, ಸೆಪ್ಟೆಂಬರ್ 04: ಗೋರಖ್​ಪುರದ ಫೋಟೊ ಸ್ಟುಡಿಯೋದ ಬಳಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ(Murder) ಮಾಡಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ತಿರುಗಿ ನೋಡದೆ ಅಲ್ಲಿಂದ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮಹಿಳೆ ಫೋಟೊಗಾಗಿ ಸ್ಟುಡಿಯೋಗೆ ಹೋಗಿದ್ದಾಗ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಸ್ಥಳೀಯರು ರಕ್ತಸಿಕ್ತ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಗುಂಡು ಹಾರಿಸಿದ ನಂತರ ಆರೋಪಿ ವಿಶ್ವಕರ್ಮ ಚೌಹಾಣ್ ಸ್ಥಳದಿಂದ ಪರಾರಿಯಾಗಿದ್ದ ಆದರೆ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ವಿಶ್ವಕರ್ಮ ಮತ್ತು ಅವರ ಪತ್ನಿ ಮಮತಾ ಅಲಿಯಾಸ್ ಮುಕ್ತಿ ಚೌಹಾಣ್ (30) ಮದುವೆಯಾಗಿ ಹಲವು ವರ್ಷಗಳು ಕಳೆದಿತ್ತು ಕಳೆದ ಹತ್ತು ವರ್ಷಗಳಿಂದ ನಿತ್ಯವೂ ಒಂದಲ್ಲಾ ಒಂದು ವಿಚಾರಕ್ಕೆ ಜಗಳವಾಡುತ್ತಿದ್ದರು. ಆಸ್ತಿ ಸಮಸ್ಯೆಯಿಂದಾಗಿ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪ್ರಿಯಕರನ ಜತೆ ಸೇರಿ ಪತಿಯ ಕೊಲೆ: ಬಳಿಕ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ ಪತ್ನಿ

ಮಮತಾ ಬ್ಯಾಂಕ್ ರಸ್ತೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು ಮತ್ತು 13 ವರ್ಷದ ಮಗಳಿದ್ದಾಳೆ. ವಿಶ್ವಕರ್ಮ ಜೈಲ್ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ, ಮಮತಾ ಖಜ್ನಿಗೆ ಸೇರಿದವಳು. ಬುಧವಾರ ಸಂಜೆ, ವಿಶ್ವಕರ್ಮ ಜೈಲ್ ರಸ್ತೆಯಲ್ಲಿರುವ ಫೋಟೋ ಸ್ಟುಡಿಯೋಗೆ ಬಂದಾಗ ಮಮತಾ ಅಲ್ಲಿಯೇ ಇದ್ದರು. ಅವರ ನಡುವೆ ವಾಗ್ವಾದ ನಡೆಯಿತು, ನಂತರ ವಿಶ್ವಕರ್ಮ ದೇಶೀಯ ಪಿಸ್ತೂಲನ್ನು ಹೊರತೆಗೆದು ಆಕೆಯ ಎದೆಗೆ ಗುಂಡು ಹಾರಿಸಿದ ಪರಿಣಾಮ ಮಮತಾ ಸ್ಥಳದಲ್ಲೇ ಕುಸಿದು ಬಿದ್ದರು.

ಅಲ್ಲೇ ಇದ್ದವರು ಆಕೆಯನ್ನು ವಿನಾಯಕ ಆಸ್ಪತ್ರೆಗೆ ಸಾಗಿಸಿದರು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!