AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

No Helmet No Fuel Campaign: ಹೆಲ್ಮೆಟ್​ ಇಲ್ಲ ಅಂದ್ರೆ ಪೆಟ್ರೋಲ್ ಇಲ್ಲ, ಒಂದು ತಿಂಗಳ ವಿಶೇಷ ಅಭಿಯಾನ

ಉತ್ತರ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಜಾಗೃತಿ ಮೂಡಿಸಲು ಹೆಲ್ಮೆಟ್​ ಇಲ್ಲ ಅಂದ್ರೆ ಪೆಟ್ರೋಲ್ ಇಲ್ಲ ಎಂಬ ವಿಶೇಷ ರಸ್ತೆ ಸುರಕ್ಷತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ಮೇರೆಗೆ ಅಭಿಯಾನ ನಡೆಸಲಾಗುತ್ತಿದೆ. ಈ ಉಪಕ್ರಮವು ಸಂಪೂರ್ಣವಾಗಿ ಕಾನೂನುಬದ್ಧವಾಗಿದೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿದೆ.

No Helmet No Fuel Campaign:  ಹೆಲ್ಮೆಟ್​ ಇಲ್ಲ ಅಂದ್ರೆ ಪೆಟ್ರೋಲ್ ಇಲ್ಲ, ಒಂದು ತಿಂಗಳ ವಿಶೇಷ ಅಭಿಯಾನ
ಹೆಲ್ಮೆಟ್Image Credit source: Moglix
ನಯನಾ ರಾಜೀವ್
|

Updated on:Aug 28, 2025 | 2:27 PM

Share

ಲಕ್ನೋ, ಆಗಸ್ಟ್​ 28: ಉತ್ತರ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಜಾಗೃತಿ ಮೂಡಿಸಲು ಹೆಲ್ಮೆಟ್(Helmet)​ ಇಲ್ಲ ಅಂದ್ರೆ ಪೆಟ್ರೋಲ್ ಇಲ್ಲ ಎಂಬ ವಿಶೇಷ ರಸ್ತೆ ಸುರಕ್ಷತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ಮೇರೆಗೆ ಅಭಿಯಾನ ನಡೆಸಲಾಗುತ್ತಿದೆ. ಈ ಉಪಕ್ರಮವು ಸಂಪೂರ್ಣವಾಗಿ ಕಾನೂನುಬದ್ಧವಾಗಿದೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿದೆ.

1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 129 ದ್ವಿಚಕ್ರ ವಾಹನ ಚಾಲಕರು ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸುತ್ತದೆ, ಸೆಕ್ಷನ್ 194D ಉಲ್ಲಂಘನೆಗಳಿಗೆ ದಂಡ ವಿಧಿಸುತ್ತದೆ. ಸುಪ್ರೀಂ ಕೋರ್ಟ್‌ನ ರಸ್ತೆ ಸುರಕ್ಷತಾ ಸಮಿತಿಯು ರಾಜ್ಯಗಳು ಹೆಲ್ಮೆಟ್ ಅನುಸರಣೆಗೆ ಆದ್ಯತೆ ನೀಡುವಂತೆ ಸಲಹೆ ನೀಡಿದೆ.

ಹೆಲ್ಮೆಟ್​ ಇಲ್ಲ ಅಂದ್ರೆ ಇಂಧನವಿಲ್ಲ ಎಂಬ ಅಭಿಯಾನದ ಗುರಿ ಶಿಕ್ಷಿಸುವುದು ಅಲ್ಲ, ಬದಲಾಗಿ ರಸ್ತೆ ಸುರಕ್ಷತೆ ಬಗ್ಗೆ ದ್ವಿಚಕ್ರ ವಾಹನ ಸವಾರರಿಗೆ ಜಾಗೃತಿ ಮೂಡಿಸುವುದಾಗಿದೆ. ಸಾರಿಗೆ ಆಯುಕ್ತ ಬಿ.ಎನ್. ಸಿಂಗ್ ಮಾತನಾಡಿ, ಈ ಅಭಿಯಾನವು ಸಂಪೂರ್ಣವಾಗಿ ಸಾರ್ವಜನಿಕ ಹಿತಾಸಕ್ತಿಯನ್ನು ಆಧರಿಸಿದೆ. ಹಿಂದಿನ ಅನುಭವಗಳು ದ್ವಿಚಕ್ರ ವಾಹನ ಮಾಲೀಕರು ಹೆಲ್ಮೆಟ್ ಧರಿಸುವುದನ್ನು ಅಭ್ಯಾಸ ಮಾಡಿಕೊಳ್ಳುತ್ತಾರೆ ಎನ್ನುವ ಭರವಸೆ ಇದೆ.

ಮತ್ತಷ್ಟು ಓದಿ: ಕಳಪೆ ಹೆಲ್ಮೆಟ್​​ಗೆ ಕೇಂದ್ರ ತಡೆ: ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ ಕಡ್ಡಾಯ

ಇದು ಇಂಧನ ಮಾರಾಟದ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ. ತೈಲ ಮಾರುಕಟ್ಟೆ ಕಂಪನಿಗಳು – ಐಒಸಿಎಲ್, ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ ಮತ್ತು ಎಲ್ಲಾ ಪೆಟ್ರೋಲ್ ಪಂಪ್ ನಿರ್ವಾಹಕರು ಈ ಪ್ರಯತ್ನದಲ್ಲಿ ಸಕ್ರಿಯವಾಗಿ ಸಹಕರಿಸಲು ವಿನಂತಿಸಲಾಗಿದೆ. ಈ ಅಭಿಯಾನವು ಸೆಪ್ಟೆಂಬರ್ 1 ರಿಂದ 30 ರವರೆಗೆ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:23 pm, Thu, 28 August 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ