Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ಗಾಯವೂ ಆಗದಂತೆ ಜೋಪಾನ ಮಾಡಿದ ತಾಯಿಗೆ ಬೆಂಕಿ ಹಚ್ಚಿ ಕ್ರೂರತೆ ಮೆರೆದ ಮಗ

ಮಗನೊಬ್ಬ ಪೊಲೀಸ್​ ಠಾಣೆ ಎದುರು ತಾಯಿಗೆ ಬೆಂಕಿ ಹಚ್ಚಿರುವ ಘಟನೆ ಅಲಿಗಢದಲ್ಲಿ ನಡೆದಿದೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು ಆದರೆ ಆ ಕ್ರೂರ ಕಿವಿಗೆ ಅದು ಕೇಳಿಸಲೇ ಇಲ್ಲ. ಮಗು ಚಿಕ್ಕದಿದ್ದಾಗ ಬೆಂಕಿ ಬಳಿ ಹೋಗದಂತ, ನೀರಿನ ಬಳಿ ಹೋಗದಂತೆ, ಬೀಳದಂತೆ ಪ್ರತಿ ಹಂತದಲ್ಲೂ ಜೋಪಾನ ಮಾಡುವ ತಾಯಿಯನ್ನು ಈ ವ್ಯಕ್ತಿ ಹತ್ಯೆಯನ್ನೇ ಮಾಡಿದ್ದಾನೆ.

ಚಿಕ್ಕ ಗಾಯವೂ ಆಗದಂತೆ ಜೋಪಾನ ಮಾಡಿದ ತಾಯಿಗೆ ಬೆಂಕಿ ಹಚ್ಚಿ ಕ್ರೂರತೆ ಮೆರೆದ ಮಗ
ತಾಯಿಯ ಹತ್ಯೆImage Credit source: NDTV
Follow us
ನಯನಾ ರಾಜೀವ್
|

Updated on: Jul 17, 2024 | 11:50 AM

ಒಂಬತ್ತು ತಿಂಗಳುಗಳ ಕಾಲ ಹೊತ್ತು, ಹೆತ್ತು ಸಾಕಿರುವ ತಾಯಿಯನ್ನೇ ಮಗನೊಬ್ಬ ಹತ್ಯೆ ಮಾಡಿರುವ ಘಟನೆ ಅಲಿಗಢದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಪೊಲೀಸ್​ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು ಆದರೆ ಆ ಕ್ರೂರ ಕಿವಿಗೆ ಅದು ಕೇಳಿಸಲೇ ಇಲ್ಲ.

ಮಗು ಚಿಕ್ಕದಿದ್ದಾಗ ಬೆಂಕಿ ಬಳಿ ಹೋಗದಂತ, ನೀರಿನ ಬಳಿ ಹೋಗದಂತೆ, ಬೀಳದಂತೆ ಪ್ರತಿ ಹಂತದಲ್ಲೂ ಜೋಪಾನ ಮಾಡುವ ತಾಯಿಯನ್ನು ಈ ವ್ಯಕ್ತಿ ಹತ್ಯೆಯನ್ನೇ ಮಾಡಿದ್ದಾನೆ. ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಆಕೆಯ ಸ್ಥಿತಿ ಗಂಭೀರವಾದುದನ್ನು ನೋಡಿದ ವೈದ್ಯರು ಆಕೆಯನ್ನು ಅಲಿಗಢಕ್ಕೆ ಕಳುಹಿಸಿದ್ದರು, ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ.

ಅವರಿಗೆ ಶೇ.80ರಷ್ಟು ಭಾಗ ಸುಟ್ಟು ಹೋಗಿತ್ತು. ಪೊಲೀಸರು ಮಗನನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 45 ವರ್ಷದ ಮಹಿಳೆಯನ್ನು ಆಕೆಯ ಮಗ ಹತ್ಯೆ ಮಾಡಿದ್ದಾನೆ.

ಮತ್ತಷ್ಟು ಓದಿ: ಸೂಟ್‌ಕೇಸ್‌ನಲ್ಲಿ 2 ಶವ ಪತ್ತೆ; ಕೊನೆಗೂ ಬಯಲಾಯ್ತು ಡಬಲ್ ಮರ್ಡರ್ ರಹಸ್ಯ

ಸಿಸಿಟಿವಿ ದೃಶ್ಯಾವಳಿಯಲ್ಲಿ ಮಹಿಳೆ ತನ್ನ ಮಗನೊಂದಿಗೆ ಪೊಲೀಸ್​ ಠಾಣೆಗೆ ಆಗಮಿಸಿದ್ದು ಪೊಲೀಸರ ಜತೆ ಮಾತುಕತೆ ನಡೆಸಿದ್ದನ್ನು ಕಾಣಬಹುದು. ಮಹಿಳೆಯೇ ಮೊದಲು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು, ಪೊಲೀಸರು ಲೈಟರ್​ ಕಿತ್ತುಕೊಳ್ಳಲು ಹೋದಾಗ ಅದು ಕೆಳಗೆ ಬಿದ್ದಿತ್ತು, ಆಗ ಅದನ್ನು ತೆಗೆದುಕೊಂಡ ಮಗ ತಾಯಿಗೆ ಬೆಂಕಿ ಹಚ್ಚಿದ್ದಾನೆ.

ಮಹಿಳೆಯ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು, ಇದನ್ನು ಬಗೆಹರಿಸಿಕೊಡಿ ಎಂದು ಕೇಳಲು ಪೊಲೀಸ್​ ಠಾಣೆಗೆ ಹೋಗಿದ್ದರು, ತಾವು ಹೋದ ಕೆಲಸ ಆಗದಿದ್ದಾಗ ಮಹಿಳೆ ಪೆಟ್ರೋಲ್​ ಸುರಿದುಕೊಂಡು ಹೆದರಿಸಲು ಶುರು ಮಾಡಿದ್ದರು ಇದೇ ಸಮಯದಲ್ಲ ಅವರ ಮಗ ಬೆಂಕಿ ಹಚ್ಚಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ ಮಗನನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ
ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ
ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ