AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ಗಾಯವೂ ಆಗದಂತೆ ಜೋಪಾನ ಮಾಡಿದ ತಾಯಿಗೆ ಬೆಂಕಿ ಹಚ್ಚಿ ಕ್ರೂರತೆ ಮೆರೆದ ಮಗ

ಮಗನೊಬ್ಬ ಪೊಲೀಸ್​ ಠಾಣೆ ಎದುರು ತಾಯಿಗೆ ಬೆಂಕಿ ಹಚ್ಚಿರುವ ಘಟನೆ ಅಲಿಗಢದಲ್ಲಿ ನಡೆದಿದೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು ಆದರೆ ಆ ಕ್ರೂರ ಕಿವಿಗೆ ಅದು ಕೇಳಿಸಲೇ ಇಲ್ಲ. ಮಗು ಚಿಕ್ಕದಿದ್ದಾಗ ಬೆಂಕಿ ಬಳಿ ಹೋಗದಂತ, ನೀರಿನ ಬಳಿ ಹೋಗದಂತೆ, ಬೀಳದಂತೆ ಪ್ರತಿ ಹಂತದಲ್ಲೂ ಜೋಪಾನ ಮಾಡುವ ತಾಯಿಯನ್ನು ಈ ವ್ಯಕ್ತಿ ಹತ್ಯೆಯನ್ನೇ ಮಾಡಿದ್ದಾನೆ.

ಚಿಕ್ಕ ಗಾಯವೂ ಆಗದಂತೆ ಜೋಪಾನ ಮಾಡಿದ ತಾಯಿಗೆ ಬೆಂಕಿ ಹಚ್ಚಿ ಕ್ರೂರತೆ ಮೆರೆದ ಮಗ
ತಾಯಿಯ ಹತ್ಯೆImage Credit source: NDTV
Follow us
ನಯನಾ ರಾಜೀವ್
|

Updated on: Jul 17, 2024 | 11:50 AM

ಒಂಬತ್ತು ತಿಂಗಳುಗಳ ಕಾಲ ಹೊತ್ತು, ಹೆತ್ತು ಸಾಕಿರುವ ತಾಯಿಯನ್ನೇ ಮಗನೊಬ್ಬ ಹತ್ಯೆ ಮಾಡಿರುವ ಘಟನೆ ಅಲಿಗಢದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಪೊಲೀಸ್​ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಜ್ವಾಲೆ ಹೆಚ್ಚುತ್ತಿದ್ದಂತೆ ತಾಯಿ ಕಿರುಚುತ್ತಲೇ ಇದ್ದಳು ಆದರೆ ಆ ಕ್ರೂರ ಕಿವಿಗೆ ಅದು ಕೇಳಿಸಲೇ ಇಲ್ಲ.

ಮಗು ಚಿಕ್ಕದಿದ್ದಾಗ ಬೆಂಕಿ ಬಳಿ ಹೋಗದಂತ, ನೀರಿನ ಬಳಿ ಹೋಗದಂತೆ, ಬೀಳದಂತೆ ಪ್ರತಿ ಹಂತದಲ್ಲೂ ಜೋಪಾನ ಮಾಡುವ ತಾಯಿಯನ್ನು ಈ ವ್ಯಕ್ತಿ ಹತ್ಯೆಯನ್ನೇ ಮಾಡಿದ್ದಾನೆ. ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಆಕೆಯ ಸ್ಥಿತಿ ಗಂಭೀರವಾದುದನ್ನು ನೋಡಿದ ವೈದ್ಯರು ಆಕೆಯನ್ನು ಅಲಿಗಢಕ್ಕೆ ಕಳುಹಿಸಿದ್ದರು, ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ.

ಅವರಿಗೆ ಶೇ.80ರಷ್ಟು ಭಾಗ ಸುಟ್ಟು ಹೋಗಿತ್ತು. ಪೊಲೀಸರು ಮಗನನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 45 ವರ್ಷದ ಮಹಿಳೆಯನ್ನು ಆಕೆಯ ಮಗ ಹತ್ಯೆ ಮಾಡಿದ್ದಾನೆ.

ಮತ್ತಷ್ಟು ಓದಿ: ಸೂಟ್‌ಕೇಸ್‌ನಲ್ಲಿ 2 ಶವ ಪತ್ತೆ; ಕೊನೆಗೂ ಬಯಲಾಯ್ತು ಡಬಲ್ ಮರ್ಡರ್ ರಹಸ್ಯ

ಸಿಸಿಟಿವಿ ದೃಶ್ಯಾವಳಿಯಲ್ಲಿ ಮಹಿಳೆ ತನ್ನ ಮಗನೊಂದಿಗೆ ಪೊಲೀಸ್​ ಠಾಣೆಗೆ ಆಗಮಿಸಿದ್ದು ಪೊಲೀಸರ ಜತೆ ಮಾತುಕತೆ ನಡೆಸಿದ್ದನ್ನು ಕಾಣಬಹುದು. ಮಹಿಳೆಯೇ ಮೊದಲು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು, ಪೊಲೀಸರು ಲೈಟರ್​ ಕಿತ್ತುಕೊಳ್ಳಲು ಹೋದಾಗ ಅದು ಕೆಳಗೆ ಬಿದ್ದಿತ್ತು, ಆಗ ಅದನ್ನು ತೆಗೆದುಕೊಂಡ ಮಗ ತಾಯಿಗೆ ಬೆಂಕಿ ಹಚ್ಚಿದ್ದಾನೆ.

ಮಹಿಳೆಯ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು, ಇದನ್ನು ಬಗೆಹರಿಸಿಕೊಡಿ ಎಂದು ಕೇಳಲು ಪೊಲೀಸ್​ ಠಾಣೆಗೆ ಹೋಗಿದ್ದರು, ತಾವು ಹೋದ ಕೆಲಸ ಆಗದಿದ್ದಾಗ ಮಹಿಳೆ ಪೆಟ್ರೋಲ್​ ಸುರಿದುಕೊಂಡು ಹೆದರಿಸಲು ಶುರು ಮಾಡಿದ್ದರು ಇದೇ ಸಮಯದಲ್ಲ ಅವರ ಮಗ ಬೆಂಕಿ ಹಚ್ಚಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ ಮಗನನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ