AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಮ್ಮಾರಿಗೆ ಉತ್ತರ ಪ್ರದೇಶದ ಸಚಿವೆ ಕಮಲಾ ರಾಣಿ ಬಲಿ

ಲಖನೌ: ಉತ್ತರ ಪ್ರದೇಶದ ಕ್ಯಾಬಿನೇಟ್ ದರ್ಜೆ ಸಚಿವೆ ಶ್ರೀಮತಿ ಕಮಲಾ ರಾಣಿ ಕೋವಿಡ್‌ ನಿಂದಾಗಿ ಕೊನೆಯುಸಿರೆಳೆದಿದ್ದಾರೆ. ಕಮಲಾ ರಾಣಿ ಜುಲೈ 18ರಂದು ಲಖನೌದ ರಾಜಧಾನಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಕಮಲಾರಾಣಿ ಕಾನ್ಪುರ್‌ದ ಘಟಂಪುರ ವಿಧಾನ ಸಭಾ ಕ್ಷೇತ್ರದಿಂದ ಉತ್ತರ ಪ್ರದೇಶ ವಿಧಾನ ಸಭೆಗೆ ಆಯ್ಕೆಯಾಗಿದ್ದರು. ನಂತರ ಸಿಎಂ ಯೋಗಿ ಆದಿತ್ಯನಾಥ್‌ ಅವರ ಸಚಿವ ಸಂಪುಟದಲ್ಲಿ ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದರು. ಸಚಿವೆಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಯ್ಯೋಧ್ಯೆ ಭೇಟಿಯನ್ನ […]

ಕೊರೊನಾ ಹೆಮ್ಮಾರಿಗೆ ಉತ್ತರ ಪ್ರದೇಶದ ಸಚಿವೆ ಕಮಲಾ ರಾಣಿ ಬಲಿ
Guru
|

Updated on:Aug 02, 2020 | 1:51 PM

Share

ಲಖನೌ: ಉತ್ತರ ಪ್ರದೇಶದ ಕ್ಯಾಬಿನೇಟ್ ದರ್ಜೆ ಸಚಿವೆ ಶ್ರೀಮತಿ ಕಮಲಾ ರಾಣಿ ಕೋವಿಡ್‌ ನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಕಮಲಾ ರಾಣಿ ಜುಲೈ 18ರಂದು ಲಖನೌದ ರಾಜಧಾನಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಕಮಲಾರಾಣಿ ಕಾನ್ಪುರ್‌ದ ಘಟಂಪುರ ವಿಧಾನ ಸಭಾ ಕ್ಷೇತ್ರದಿಂದ ಉತ್ತರ ಪ್ರದೇಶ ವಿಧಾನ ಸಭೆಗೆ ಆಯ್ಕೆಯಾಗಿದ್ದರು. ನಂತರ ಸಿಎಂ ಯೋಗಿ ಆದಿತ್ಯನಾಥ್‌ ಅವರ ಸಚಿವ ಸಂಪುಟದಲ್ಲಿ ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದರು.

ಸಚಿವೆಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಯ್ಯೋಧ್ಯೆ ಭೇಟಿಯನ್ನ ರದ್ದು ಪಡಿಸಿರುವ ಸಿಎಂ ಯೋಗಿ ಆದಿತ್ಯನಾಥ್‌ , ಕಮಲಾರಾಣಿ ಒಬ್ಬ ದಕ್ಷ ಸಚಿವೆಯಾಗಿದ್ದರು, ಅವರ ನಿಧನದಿಂದ ಒಬ್ಬ ಅತ್ಯುತ್ತಮ ಸಮಾಜ ಸೇವಕಿಯನ್ನ ಕಳೆದುಕೊಂಡಂತಾಗಿದೆ ಎಂದು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

Published On - 1:37 pm, Sun, 2 August 20