AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಟೊಮೆಟೊ ತಿನ್ನುವುದನ್ನು ನಿಲ್ಲಿಸಿದರೆ ಬೆಲೆ ತಾನಾಗಿಯೇ ಕಡಿಮೆ ಆಗುತ್ತೆ: ಸಚಿವೆ ಪ್ರತಿಭಾ ಶುಕ್ಲಾ

‘‘ಟೊಮೆಟೊ(Tomato) ದುಬಾರಿಯಾದರೆ ಅವುಗಳನ್ನು ಮನೆಯಲ್ಲೇ ಬೆಳೆಯಿರಿ ಅಥವಾ ತಿನ್ನುವುದನ್ನು ನಿಲ್ಲಿಸಿ, ಆಗ ತಾನಾಗಿಯೇ ಬೆಲೆ ಕಡಿಮೆಯಾಗುವುದು’’ ಎಂದು ಉತ್ತರ ಪ್ರದೇಶದ ಸಚಿವೆ ಪ್ರತಿಭಾ ಶುಕ್ಲಾ ಹೇಳಿದ್ದಾರೆ.

ನೀವು ಟೊಮೆಟೊ ತಿನ್ನುವುದನ್ನು ನಿಲ್ಲಿಸಿದರೆ ಬೆಲೆ ತಾನಾಗಿಯೇ ಕಡಿಮೆ ಆಗುತ್ತೆ: ಸಚಿವೆ ಪ್ರತಿಭಾ ಶುಕ್ಲಾ
ಪ್ರತಿಭಾ ಶುಕ್ಲಾImage Credit source: India Today
ನಯನಾ ರಾಜೀವ್
|

Updated on: Jul 24, 2023 | 11:44 AM

Share

‘‘ಟೊಮೆಟೊ(Tomato) ದುಬಾರಿಯಾದರೆ ಅವುಗಳನ್ನು ಮನೆಯಲ್ಲೇ ಬೆಳೆಯಿರಿ ಅಥವಾ ತಿನ್ನುವುದನ್ನು ನಿಲ್ಲಿಸಿ, ಆಗ ತಾನಾಗಿಯೇ ಬೆಲೆ ಕಡಿಮೆಯಾಗುವುದು’’ ಎಂದು ಉತ್ತರ ಪ್ರದೇಶದ ಸಚಿವೆ ಪ್ರತಿಭಾ ಶುಕ್ಲಾ ಹೇಳಿದ್ದಾರೆ. ದೇಶಾದ್ಯಂತ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಈ ನಡುವೆ ಪ್ರತಿಭಾ ಅವರ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಗಿಡ ನೆಡುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಟೊಮೆಟೊ ದುಬಾರಿ ಅನಿಸಿದರೆ ಅದನ್ನು ಮನೆಯಲ್ಲಿಯೇ ಬೆಳೆದುಕೊಳ್ಳಿ, ಅಥವಾ ತಿನ್ನುವುದನ್ನು ನಿಲ್ಲಿಸಿ ಆಗ ಬೆಲೆ ಇಲಿಯುತ್ತದೆ, ಟೊಮೆಟೊ ಬದಲಿಗೆ ನಿಂಬೆ ಹಣ್ಣು ಬಳಕೆ ಮಾಡಬಹುದು ಎಂದಿದ್ದಾರೆ.

ಪ್ರಸ್ತುತ ಹೆಚ್ಚುತ್ತಿರುವ ಟೊಮೆಟೊ ಬೆಲೆಯನ್ನು ಪರಿಶೀಲಿಸಿ ಮತ್ತು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು, ಸರ್ಕಾರವು ಬೆಲೆ ಸ್ಥಿರೀಕರಣ ನಿಧಿಯ ಅಡಿಯಲ್ಲಿ ಟೊಮೆಟೊ ಖರೀದಿಯನ್ನು ಪ್ರಾರಂಭಿಸಿದೆ ಮತ್ತು ಗ್ರಾಹಕರಿಗೆ ಹೆಚ್ಚಿನ ಸಬ್ಸಿಡಿ ದರದಲ್ಲಿ ಲಭ್ಯವಾಗುವಂತೆ ಮಾಡುತ್ತಿದೆ ಎಂದರು.

ಮತ್ತಷ್ಟು ಓದಿ: Tomato Price: ಸರ್ಕಾರದಿಂದ ಟೊಮೆಟೋಗೆ ಸಬ್ಸಿಡಿ ಇನ್ನಷ್ಟು ಹೆಚ್ಚಳ; ಕಿಲೋಗೆ 70 ರೂನಂತೆ ಮಾರಾಟ

ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್) ಮತ್ತು ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಒಕ್ಕೂಟ (ಎನ್‌ಎಎಫ್‌ಇಡಿ) ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದ ಮಂಡಿಗಳಿಂದ ನಿರಂತರವಾಗಿ ಟೊಮೆಟೊಗಳನ್ನು ಖರೀದಿಸುತ್ತಿದೆ ಮತ್ತು ಗ್ರಾಹಕರಿಗೆ ಸಬ್ಸಿಡಿ ನೀಡಿದ ನಂತರ ದೆಹಲಿ-ಎನ್‌ಸಿಆರ್, ಬಿಹಾರ ಮತ್ತು ರಾಜಸ್ಥಾನದ ಪ್ರಮುಖ ಗ್ರಾಹಕ ಕೇಂದ್ರಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡುತ್ತಿದೆ ಎಂದು ಸಚಿವ ಅಶ್ವಿನಿ ಚೌಬೆ ಹೇಳಿದರು.

ಟೊಮ್ಯಾಟೊವನ್ನು ಚಿಲ್ಲರೆ ದರದಲ್ಲಿ 90 ರೂ. ನಂತೆ ವಿಲೇವಾರಿ ಮಾಡಲಾಗಿದ್ದು, ಜುಲೈ 16 ರಿಂದ 80 ರೂ,ಗೆ ಇಳಿಸಲಾಗಿದೆ ಮತ್ತು ಜುಲೈ 20 ರಿಂದ 70 ರೂ. ಇಳಿಸಲಾಗಿದೆ, ಟೊಮೆಟೊ ಬೆಲೆಯನ್ನು ನಿಯಂತ್ರಿಸಲು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ