AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನ ಆ ಹೆಂಡತಿ ಮನೆ, ಮೂರು ದಿನ ಈ ಹೆಂಡತಿ ಮನೆ, ಅಂತೂ ಇಬ್ಬರು ಹೆಂಡತಿಯರ ಕಗ್ಗಂಟು ಸಡಿಲ

ಉತ್ತರ ಪ್ರದೇಶದ ರಾಂಪುರದಲ್ಲಿ ಇಬ್ಬರು ಪತ್ನಿಯರ ವಿವಾದ ಬಗೆಹರಿಸಲು ಗ್ರಾಮ ಪಂಚಾಯಿತಿ ಮಹತ್ವದ ತೀರ್ಪು ನೀಡಿದೆ. ವಾರದ ಏಳು ದಿನಗಳನ್ನು ಇಬ್ಬರು ಹೆಂಡತಿಯರ ನಡುವೆ ವಿಭಜಿಸಿ 'ಸಮಪಾಲು-ಸಮಬಾಳು' ಸೂತ್ರ ಅಳವಡಿಸಲಾಗಿದೆ. ಪತಿ ಮೂರು ದಿನ ಮೊದಲ ಪತ್ನಿಯೊಂದಿಗೆ, ಮೂರು ದಿನ ಎರಡನೇ ಪತ್ನಿಯೊಂದಿಗೆ ಇರಬೇಕು. ಭಾನುವಾರ ಅವರಿಗೆ ಸ್ವಾತಂತ್ರ್ಯ. ಜೊತೆಗೆ, ಮೊದಲ ಪತ್ನಿಗೆ ಆರ್ಥಿಕ ಬೆಂಬಲ ಕಡ್ಡಾಯಗೊಳಿಸಲಾಗಿದೆ. ಈ ವಿಶಿಷ್ಟ ತೀರ್ಪಿಗೆ ಇಬ್ಬರೂ ಪತ್ನಿಯರು ಮತ್ತು ಪತಿ ಒಪ್ಪಿಗೆ ಸೂಚಿಸಿದ್ದಾರೆ.

ಮೂರು ದಿನ ಆ ಹೆಂಡತಿ ಮನೆ, ಮೂರು ದಿನ ಈ ಹೆಂಡತಿ ಮನೆ, ಅಂತೂ ಇಬ್ಬರು ಹೆಂಡತಿಯರ ಕಗ್ಗಂಟು ಸಡಿಲ
ಮದುವೆ
ನಯನಾ ರಾಜೀವ್
|

Updated on: Jul 21, 2026 | 3:04 PM

Share

ರಾಂಪುರ, ಜುಲೈ 21: ಪತಿ(Husband) ತನ್ನೊಂದಿಗಿರಬೇಕು, ತನ್ನೊಂದಿಗಿರಬೇಕು ಎಂದು ಇಬ್ಬರು ಹೆಂಡತಿಯರು ಪಟ್ಟು ಹಿಡಿದಿದ್ದು, ಗಂಡನಿಗೆ ಕಗ್ಗಂಟಾಗಿ ಪರಿಣಮಿಸಿತ್ತು. ಈ ಕಲಹ ಬಗೆಹರಿಸಲು ಗ್ರಾಮೀಣ ಪಂಚಾಯತಿ ನೀಡಿದ ತೀರ್ಪು ಇಡೀ ಉತ್ತರ ಪ್ರದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಾರದ ಏಳು ದಿನಗಳನ್ನು ಇಬ್ಬರು ಪತ್ನಿಯರ ನಡುವೆ ಹಂಚಿಕೆ ಮಾಡಿ ಪಂಚಾಯಿತಿ ಅಚ್ಚರಿಯ ‘ಸಮಪಾಲು-ಸಮಬಾಳು’ ಸೂತ್ರವನ್ನು ರೂಪಿಸಿದೆ.

ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ದಧಿಯಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿಗೆ ಸುಮಾರು 14 ವರ್ಷಗಳ ಹಿಂದೆ ಮೊದಲ ಮದುವೆಯಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೊದಲ ಪತ್ನಿಯ ಒಪ್ಪಿಗೆಯಿಲ್ಲದೆ ಆತ ಎರಡನೇ ಮದುವೆಯಾಗಿದ್ದ. ಎರಡನೇ ಪತ್ನಿಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಯುವಕ ಸಂಪೂರ್ಣವಾಗಿ ಮೊದಲ ಪತ್ನಿಯನ್ನು ನಿರ್ಲಕ್ಷಿಸಿ, ಹೆಚ್ಚಿನ ಸಮಯವನ್ನು ಎರಡನೇ ಹೆಂಡತಿಯೊಂದಿಗೇ ಕಳೆಯಲು ಪ್ರಾರಂಭಿಸಿದ. ಇದರಿಂದ ಬೇಸರ ಉಂಟಾಗಿ ಮೊದಲ ಪತ್ನಿ ತನಗೆ ಜೀವನ ನಿರ್ವಹಣೆಗೆ ಹಣ ಹಾಗೂ ಬೆಂಬಲ ಸಿಗುತ್ತಿಲ್ಲ ಎಂದು ಪೋಲಿಸ್ ಠಾಣೆಗೆ ದೂರು ನೀಡಿದ್ದಳು. ಈ ವಿಷಯ ಪೊಲೀಸ್ ಠಾಣೆ ಮೆಟ್ಟಿಲೇರಿದ ನಂತರ, ಗ್ರಾಮದ ಹಿರಿಯರು ಹಾಗೂ ಎರಡೂ ಕುಟುಂಬಗಳ ಸಮ್ಮುಖದಲ್ಲಿ ಪಂಚಾಯಿತಿ ಕರೆಯಲಾಯಿತು. ಸುದೀರ್ಘ ಚರ್ಚೆಯ ನಂತರ ಪಂಚಾಯಿತಿ ಈ ಕೆಳಗಿನಂತೆ ಲಿಖಿತ ಒಪ್ಪಂದ ರೂಪಿಸಿತು. ಮೂರು ದಿನ ಒಂದು ಪತ್ನಿ ಜತೆ, ಮತೆತ ಮೂರು ದಿನ ಎರಡನೇ ಜತೆ ಕಳೆಯಬೇಕು ಎಂದು ತೀರ್ಪು ನೀಡಲಾಗಿದೆ.

ಮತ್ತಷ್ಟು ಓದಿ: ರೋಗಿಗಳ ಜೀವದ ಜೊತೆ ಚೆಲ್ಲಾಟ: ಪತಿ ಸರಕಾರಿ ವೈದ್ಯ, ಆದರೆ ಚಿಕಿತ್ಸೆ ನೀಡೋದು ಪತ್ನಿ!

ಭಾನುವಾರ ಆತನಿಗೆ ಸಂಪೂರ್ಣ ಸ್ವಾತಂತ್ರ್ಯ, ಅವರು ತನ್ನ ಇಷ್ಟದಂತೆ ಯಾರ ಜೊತೆಯಾದರೂ ಇರಬಹುದು ಅಥವಾ ಎಲ್ಲಿಗಾದರೂ ಹೋಗಬಹುದು ಎಂದು ಹೇಳಲಾಗಿದೆ.

ಇಷ್ಟೇ ಅಲ್ಲದೆ, ಮೊದಲ ಪತ್ನಿ ಮತ್ತು ಮಕ್ಕಳ ದಿನನಿತ್ಯದ ನಿರ್ವಹಣೆಗಾಗಿ ಪ್ರತಿ ತಿಂಗಳು ಪಡಿತರ ಹಾಗೂ ಸಾಪ್ತಾಹಿಕ ಖರ್ಚಿನ ಹಣವನ್ನು ಗಂಡ ಕಡ್ಡಾಯವಾಗಿ ನೀಡಬೇಕೆಂದು ಪಂಚಾಯಿತಿ ಆದೇಶಿಸಿದೆ. ಪಂಚಾಯಿತಿಯ ಈ ವಿಶಿಷ್ಟ ತೀರ್ಪಿಗೆ ಇಬ್ಬರೂ ಹೆಂಡತಿಯರು ಹಾಗೂ ಗಂಡ ಒಪ್ಪಿಗೆ ಸೂಚಿಸಿದ್ದಾರೆ. ಒಪ್ಪಂದದ ನಂತರ ಮೊದಲ ಪತ್ನಿ ಪೋಲಿಸ್ ಠಾಣೆಯಲ್ಲಿದ್ದ ತನ್ನ ದೂರನ್ನು ವಾಪಸ್ ಪಡೆದುಕೊಂಡಿದ್ದಾಳೆ. ಪ್ರಕರಣವು ಸೌಹಾರ್ದಯುತವಾಗಿ ಇತ್ಯರ್ಥವಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ