ಯುಪಿ ಪೊಲೀಸ್ ನೇಮಕಾತಿ ಪರೀಕ್ಷೆ ರದ್ದು; 6 ತಿಂಗಳೊಳಗೆ ಮರು ಪರೀಕ್ಷೆಗೆ ಸಿಎಂ ಆದಿತ್ಯನಾಥ್ ಆದೇಶ

ಅತ್ಯಂತ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಯುಪಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ 2024 ಅನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಯಾವುದೇ ಹಂತದಲ್ಲಿ ಯಾವುದೇ ನಿರ್ಲಕ್ಷ್ಯದ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಆದೇಶಿಸಿದೆ.

ಯುಪಿ ಪೊಲೀಸ್ ನೇಮಕಾತಿ ಪರೀಕ್ಷೆ ರದ್ದು; 6 ತಿಂಗಳೊಳಗೆ ಮರು ಪರೀಕ್ಷೆಗೆ ಸಿಎಂ ಆದಿತ್ಯನಾಥ್ ಆದೇಶ
ಯೋಗಿ ಆದಿತ್ಯನಾಥ್
Follow us
|

Updated on:Feb 24, 2024 | 4:52 PM

ದೆಹಲಿ ಫೆಬ್ರವರಿ 24 : ರಾಜ್ಯದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇಮಕಾತಿಗಾಗಿ ಇತ್ತೀಚೆಗೆ ನಡೆದ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಉತ್ತರ ಪ್ರದೇಶ (Uttar Pradesh)  ಸರ್ಕಾರ ಶನಿವಾರ ಹೇಳಿದೆ. ಈ ಬಗ್ಗೆ ‘ಎಕ್ಸ್’ ಪೋಸ್ಟ್‌ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಆರು ತಿಂಗಳೊಳಗೆ  ಮರು ಪರೀಕ್ಷೆ ನಡೆಸಲು ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು. “ಪರೀಕ್ಷೆ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಯುವಕರ ಶ್ರಮ ಹಾಳಾಗುವಂತೆ ಮಾಡುವವರನ್ನು ಯಾವುದೇ ಸಂದರ್ಭದಲ್ಲೂ ಬಿಡುವುದಿಲ್ಲ. ಇಂತಹ ಅಶಿಸ್ತಿನ ಅಂಶಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಖಚಿತ,” ಎಂದು ಅವರು ಹೇಳಿದ್ದಾರೆ. 2024 ಫೆಬ್ರವರಿ 17 ಮತ್ತು 18ರಂದು ಪರೀಕ್ಷೆ ನಡೆದಿತ್ತು.

ವಿವಿಧ ವಿವಾದಗಳ ಹಿನ್ನೆಲೆಯಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಗೆ ಆದೇಶ ಹೊರಡಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗಳು, ಒಬ್ಬರ ಬದಲು ಇನ್ನೊಬ್ಬರು ಪರೀಕ್ಷೆ ಬರೆಯುವುದು, ಪ್ರವೇಶ ಕಾರ್ಡ್‌ನಲ್ಲಿ ಅನುಚಿತವಾದ ಚಿತ್ರ, ಕಿಕ್ಕಿರಿದ ರೈಲುಗಳು ಮತ್ತು ಪರೀಕ್ಷಾ ಆವರಣದಲ್ಲಿ ಇತರ ತಪ್ಪು ವ್ಯವಸ್ಥೆಗಳು ವರದಿ ಆಗಿದ್ದವು

ಈ ಹಿಂದೆ, ಈ ವಿಷಯದ ತನಿಖೆಗಾಗಿ, ನೇಮಕಾತಿ ಮಂಡಳಿಯಿಂದ ಆಂತರಿಕ ಸಮಿತಿಯನ್ನು ರಚಿಸಲಾಗಿತ್ತು. ಪೇಪರ್ ಸೋರಿಕೆ ಪ್ರಕರಣದ ತನಿಖೆಯನ್ನು ಐಪಿಎಸ್ ರೇಣುಕಾ ಮಿಶ್ರಾ ಮತ್ತು ಐಪಿಎಸ್ ಸತ್ಯಾರ್ಥ್ ಪಂಕಜ್ ನಡೆಸುತ್ತಿದ್ದರು. ಫೆಬ್ರವರಿ 23, 2024 ರ ಹೊತ್ತಿಗೆ, ಪುರಾವೆಗಳೊಂದಿಗೆ ಸುಮಾರು 1496 ದೂರುಗಳನ್ನು ಸ್ವೀಕರಿಸಲಾಗಿದ್ದು ಈ ದೂರುಗಳ ಬಗ್ಗೆ ಸಮಿತಿಯು ತನಿಖೆ ನಡೆಸುತ್ತಿದೆ.

ಅತ್ಯಂತ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಯುಪಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ 2024 ಅನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಯಾವುದೇ ಹಂತದಲ್ಲಿ ಯಾವುದೇ ನಿರ್ಲಕ್ಷ್ಯದ ವಿರುದ್ಧ ಎಫ್‌ಐಆರ್ ದಾಖಲಿಸಲು ಅಧಿಕಾರಿಗಳಿಗೆ ಆದೇಶಿಸಿದೆ.

ಇದನ್ನೂ ಓದಿ:  ಉತ್ತರ ಪ್ರದೇಶ: ಯೂಟ್ಯೂಬ್ ವಿಡಿಯೊ ನೋಡಿ ಟ್ರಿಕ್ ಕಲಿತು 500 ಕ್ಕೂ ಹೆಚ್ಚು ಕಾರು ಕದ್ದ ಕಳ್ಳರು

ಹೆಚ್ಚುವರಿಯಾಗಿ, ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ಮೂಲಕ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಮತ್ತು ಉಚಿತ ಸಾರಿಗೆ ಸೌಲಭ್ಯವನ್ನು ಒದಗಿಸಲು ಸರ್ಕಾರ ಸೂಚನೆ ನೀಡಿದೆ. ಪರೀಕ್ಷೆಗೆ ಹಾಜರಾದ ಅನೇಕ ವಿದ್ಯಾರ್ಥಿಗಳು ಸಾಕಷ್ಟು ಪ್ರಯಾಣ ಸೌಲಭ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Sat, 24 February 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ