AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಮತ ಹಾಕುವಾಗ ತಪ್ಪು ಮಾಡಿದರೆ ನಮ್ಮ ರಾಜ್ಯವೂ ಕೇರಳವಾಗುತ್ತದೆ: ಉತ್ತರಪ್ರದೇಶ ಜನರಿಗೆ ಸಿಎಂ ಯೋಗಿ ವಿಡಿಯೋ ಸಂದೇಶ

ನಮ್ಮದು ಡಬಲ್​ ಎಂಜಿನ್ ಸರ್ಕಾರವೇ ಆಗಿದೆ. ಕೇಂದ್ರದಲ್ಲಿರುವ ಬಿಜೆಪಿ ಮತ್ತು ರಾಜ್ಯದಲ್ಲಿರು ಬಿಜೆಪಿ ಸರ್ಕಾರಗಳು ಜನರಿಗೆ ಎಲ್ಲ ಅನುಕೂಲಗಳನ್ನೂ ಮಾಡಿಕೊಡಲು ಬದ್ಧತೆಯನ್ನು ಹೊಂದಿವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ನೀವು ಮತ ಹಾಕುವಾಗ ತಪ್ಪು ಮಾಡಿದರೆ ನಮ್ಮ ರಾಜ್ಯವೂ ಕೇರಳವಾಗುತ್ತದೆ: ಉತ್ತರಪ್ರದೇಶ ಜನರಿಗೆ ಸಿಎಂ ಯೋಗಿ ವಿಡಿಯೋ ಸಂದೇಶ
ಸಿಎಂ ಯೋಗಿ
TV9 Web
| Edited By: |

Updated on:Feb 10, 2022 | 8:24 AM

Share

ಇಂದು ಉತ್ತರ ಪ್ರದೇಶದ ಮೊದಲ ಹಂತದ ಮತದಾನ (First Phase Voting In Uttar Pradesh) ಪ್ರಾರಂಭವಾಗಿದೆ. ಹೀಗೆ ಜನರು ತಮ್ಮ ಮತಚಲಾಯಿಸುವುದಕ್ಕೂ ಕೆಲವೇ ಹೊತ್ತುಗಳ ಮೊದಲು ಸಿಎಂ ಯೋಗಿ ಆದಿತ್ಯನಾಥ್​ (CM Yogi Adityanath) ಅವರು ರಾಜ್ಯದ ಜನರಿಗೆ ಒಂದು ಸಣ್ಣ ಎಚ್ಚರಿಕೆ ನೀಡಿದ್ದಾರೆ.  ನೀವೇನಾದರೂ ಇಂದು ಮತ ಹಾಕುವಲ್ಲಿ ಎಡವಿದರೆ ಮುಂದೆ ನಮ್ಮ ಉತ್ತರ ಪ್ರದೇಶ ರಾಜ್ಯವೂ ಕೂಡ ಕಾಶ್ಮೀರ, ಕೇರಳ, ಪಶ್ಚಿಮ ಬಂಗಾಳದಂತೆ ಆಗುತ್ತದೆ ಎಂದು ಹೇಳಿದ್ದಾರೆ. ತಮ್ಮ ಟ್ವಿಟರ್​ ಅಕೌಂಟ್​​ನಲ್ಲಿ ಸುಮಾರು 6 ನಿಮಿಷಗಳ ವಿಡಿಯೋ ಮಾಡಿ, ಶೇರ್​ ಮಾಡಿರುವ ಯೋಗಿ, ಇಷ್ಟುದಿನ ಸುಮ್ಮನಿದ್ದ ದಂಗೆಕೋರರೆಲ್ಲ ಈಗಲೇ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ, ಭಯೋತ್ಪಾದಕರು ಪದೇಪದೇ ಬೆದರಿಕೆಯೊಡ್ಡುತ್ತಿದ್ದಾರೆ ಎಂದೂ ಆರೋಪ ಮಾಡಿದ್ದಾರೆ. 

ನಮ್ಮದು ಡಬಲ್​ ಎಂಜಿನ್​ ಸರ್ಕಾರ ಎಂದು ಹೇಳಲಾಗುತ್ತದೆ. ಹೌದು, ನಮ್ಮದು ಡಬಲ್​ ಎಂಜಿನ್ ಸರ್ಕಾರವೇ ಆಗಿದೆ. ಕೇಂದ್ರದಲ್ಲಿರುವ ಬಿಜೆಪಿ ಮತ್ತು ರಾಜ್ಯದಲ್ಲಿರು ಬಿಜೆಪಿ ಸರ್ಕಾರಗಳು ಜನರಿಗೆ ಎಲ್ಲ ಅನುಕೂಲಗಳನ್ನೂ ಮಾಡಿಕೊಡಲು ಬದ್ಧತೆಯನ್ನು ಹೊಂದಿವೆ. ಕಳೆದ ಐದು ವರ್ಷಗಳಲ್ಲಿ ಜನರಿಗಾಗಿ ತುಂಬ ನಿಷ್ಠೆಯಿಂದ ಕೆಲಸ ಮಾಡಿದ್ದೇವೆ ಎಂದು ಹೇಳಿರುವ ಯೋಗಿ ಆದಿತ್ಯನಾಥ್​,  ಉತ್ತರಪ್ರದೇಶದಲ್ಲಿ ಕಳೆದ 5 ವರ್ಷಗಳಲ್ಲಿ ಅನೇಕ ಅಭಿವೃದ್ಧಿಯಾಗಿದೆ. ಇದನ್ನು ನಾನು ನನ್ನ ಹೃದಯದಿಂದ ಹೇಳುತ್ತಿದ್ದೇನೆ. ಎಚ್ಚರವಿರಲಿ, ನೀವೇನಾದರೂ ಈಗ ಸರಿಯಾಗಿ ಮತದಾನ ಮಾಡದೆ ಇದ್ದರೆ, ಈ ಐದು ವರ್ಷಗಳಲ್ಲಿ ಯುಪಿಯಲ್ಲಿ ಕೆಲಸ ಮಾಡಿದ ಶ್ರಮಿಕರ ಶ್ರಮ ವ್ಯರ್ಥವಾಗುತ್ತದೆ. ಕಾಶ್ಮೀರ, ಕೇರಳ, ಪಶ್ಚಿಮ ಬಂಗಾಳದಂತೆ ನಮ್ಮ ರಾಜ್ಯವೂ ಆಗಲು ತುಂಬ ಸಮಯ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.  ಅಷ್ಟೇ ಅಲ್ಲ, ಈ ಐದು ವರ್ಷದಲ್ಲಿ ನಾನು ಪಟ್ಟ ಶ್ರಮಕ್ಕೆ ನಿಮ್ಮ ಒಂದು ಮತ ಆಶೀರ್ವಾದ ಆಗಲಿದೆ. ಮುಂದಿನ ದಿನಗಳಲ್ಲಿ ಕೂಡ ನೀವು ಭಯಮುಕ್ತರಾಗಿ ಜೀವನ ನಡೆಸಲು ಅದು ಭರವಸೆಯೂ ಹೌದು ಎಂದು ಹೇಳಿದ್ದಾರೆ.

ಉತ್ತರಪ್ರದೇಶಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿದ್ದು, ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮುಂಜಾನೆಯಿಂದ ಮತದಾನ ಶುರುವಾಗಿದೆ. ಇಂದು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಾಮ್ಲಿ, ಹಾಪುರ್, ಗೌತಮ್ ಬುದ್ಧ ನಗರ, ಮುಜಾಫರ್‌ನಗರ, ಮೀರತ್, ಬಾಗ್‌ಪತ್, ಗಾಜಿಯಾಬಾದ್, ಬುಲಂದ್‌ಶಹರ್, ಅಲಿಘರ್, ಮಥುರಾ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಅಂದರೆ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಇಂದು ಮತದಾನ ನಡೆಯಲಿದೆ. ಇಲ್ಲಿ ಜಾಟ್ ಸಮುದಾಯದ ಪ್ರಾಬಲ್ಯವೇ ಇದ್ದು, ಬಿಜೆಪಿ ಪಾಲಿಗೆ ಈ ಸಮುದಾಯದ ಮತಗಳಿಕೆ ಪ್ರಸಕ್ತ ಬಾರಿ ತುಸು ಕಷ್ಟವಾಗಬಹುದು. ಯಾಕೆಂದರೆ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರಬಲ ಹೋರಾಟ ನಡೆಸಿದ್ದು ಇದೇ ಜಾಟ್​ ಸಮುದಾಯದವರೇ ಆಗಿದ್ದರು.

ಇದನ್ನೂ ಓದಿ: UP Assembly Election 2022: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಪ್ರಾರಂಭ; ಮುಂಜಾನೆಯಿಂದಲೇ ಮತಗಟ್ಟೆಗೆ ಜನರ ಆಗಮನ

Published On - 8:14 am, Thu, 10 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ