ನೀವು ಮತ ಹಾಕುವಾಗ ತಪ್ಪು ಮಾಡಿದರೆ ನಮ್ಮ ರಾಜ್ಯವೂ ಕೇರಳವಾಗುತ್ತದೆ: ಉತ್ತರಪ್ರದೇಶ ಜನರಿಗೆ ಸಿಎಂ ಯೋಗಿ ವಿಡಿಯೋ ಸಂದೇಶ

ನಮ್ಮದು ಡಬಲ್​ ಎಂಜಿನ್ ಸರ್ಕಾರವೇ ಆಗಿದೆ. ಕೇಂದ್ರದಲ್ಲಿರುವ ಬಿಜೆಪಿ ಮತ್ತು ರಾಜ್ಯದಲ್ಲಿರು ಬಿಜೆಪಿ ಸರ್ಕಾರಗಳು ಜನರಿಗೆ ಎಲ್ಲ ಅನುಕೂಲಗಳನ್ನೂ ಮಾಡಿಕೊಡಲು ಬದ್ಧತೆಯನ್ನು ಹೊಂದಿವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ನೀವು ಮತ ಹಾಕುವಾಗ ತಪ್ಪು ಮಾಡಿದರೆ ನಮ್ಮ ರಾಜ್ಯವೂ ಕೇರಳವಾಗುತ್ತದೆ: ಉತ್ತರಪ್ರದೇಶ ಜನರಿಗೆ ಸಿಎಂ ಯೋಗಿ ವಿಡಿಯೋ ಸಂದೇಶ
ಸಿಎಂ ಯೋಗಿ
Follow us
| Updated By: Lakshmi Hegde

Updated on:Feb 10, 2022 | 8:24 AM

ಇಂದು ಉತ್ತರ ಪ್ರದೇಶದ ಮೊದಲ ಹಂತದ ಮತದಾನ (First Phase Voting In Uttar Pradesh) ಪ್ರಾರಂಭವಾಗಿದೆ. ಹೀಗೆ ಜನರು ತಮ್ಮ ಮತಚಲಾಯಿಸುವುದಕ್ಕೂ ಕೆಲವೇ ಹೊತ್ತುಗಳ ಮೊದಲು ಸಿಎಂ ಯೋಗಿ ಆದಿತ್ಯನಾಥ್​ (CM Yogi Adityanath) ಅವರು ರಾಜ್ಯದ ಜನರಿಗೆ ಒಂದು ಸಣ್ಣ ಎಚ್ಚರಿಕೆ ನೀಡಿದ್ದಾರೆ.  ನೀವೇನಾದರೂ ಇಂದು ಮತ ಹಾಕುವಲ್ಲಿ ಎಡವಿದರೆ ಮುಂದೆ ನಮ್ಮ ಉತ್ತರ ಪ್ರದೇಶ ರಾಜ್ಯವೂ ಕೂಡ ಕಾಶ್ಮೀರ, ಕೇರಳ, ಪಶ್ಚಿಮ ಬಂಗಾಳದಂತೆ ಆಗುತ್ತದೆ ಎಂದು ಹೇಳಿದ್ದಾರೆ. ತಮ್ಮ ಟ್ವಿಟರ್​ ಅಕೌಂಟ್​​ನಲ್ಲಿ ಸುಮಾರು 6 ನಿಮಿಷಗಳ ವಿಡಿಯೋ ಮಾಡಿ, ಶೇರ್​ ಮಾಡಿರುವ ಯೋಗಿ, ಇಷ್ಟುದಿನ ಸುಮ್ಮನಿದ್ದ ದಂಗೆಕೋರರೆಲ್ಲ ಈಗಲೇ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ, ಭಯೋತ್ಪಾದಕರು ಪದೇಪದೇ ಬೆದರಿಕೆಯೊಡ್ಡುತ್ತಿದ್ದಾರೆ ಎಂದೂ ಆರೋಪ ಮಾಡಿದ್ದಾರೆ. 

ನಮ್ಮದು ಡಬಲ್​ ಎಂಜಿನ್​ ಸರ್ಕಾರ ಎಂದು ಹೇಳಲಾಗುತ್ತದೆ. ಹೌದು, ನಮ್ಮದು ಡಬಲ್​ ಎಂಜಿನ್ ಸರ್ಕಾರವೇ ಆಗಿದೆ. ಕೇಂದ್ರದಲ್ಲಿರುವ ಬಿಜೆಪಿ ಮತ್ತು ರಾಜ್ಯದಲ್ಲಿರು ಬಿಜೆಪಿ ಸರ್ಕಾರಗಳು ಜನರಿಗೆ ಎಲ್ಲ ಅನುಕೂಲಗಳನ್ನೂ ಮಾಡಿಕೊಡಲು ಬದ್ಧತೆಯನ್ನು ಹೊಂದಿವೆ. ಕಳೆದ ಐದು ವರ್ಷಗಳಲ್ಲಿ ಜನರಿಗಾಗಿ ತುಂಬ ನಿಷ್ಠೆಯಿಂದ ಕೆಲಸ ಮಾಡಿದ್ದೇವೆ ಎಂದು ಹೇಳಿರುವ ಯೋಗಿ ಆದಿತ್ಯನಾಥ್​,  ಉತ್ತರಪ್ರದೇಶದಲ್ಲಿ ಕಳೆದ 5 ವರ್ಷಗಳಲ್ಲಿ ಅನೇಕ ಅಭಿವೃದ್ಧಿಯಾಗಿದೆ. ಇದನ್ನು ನಾನು ನನ್ನ ಹೃದಯದಿಂದ ಹೇಳುತ್ತಿದ್ದೇನೆ. ಎಚ್ಚರವಿರಲಿ, ನೀವೇನಾದರೂ ಈಗ ಸರಿಯಾಗಿ ಮತದಾನ ಮಾಡದೆ ಇದ್ದರೆ, ಈ ಐದು ವರ್ಷಗಳಲ್ಲಿ ಯುಪಿಯಲ್ಲಿ ಕೆಲಸ ಮಾಡಿದ ಶ್ರಮಿಕರ ಶ್ರಮ ವ್ಯರ್ಥವಾಗುತ್ತದೆ. ಕಾಶ್ಮೀರ, ಕೇರಳ, ಪಶ್ಚಿಮ ಬಂಗಾಳದಂತೆ ನಮ್ಮ ರಾಜ್ಯವೂ ಆಗಲು ತುಂಬ ಸಮಯ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.  ಅಷ್ಟೇ ಅಲ್ಲ, ಈ ಐದು ವರ್ಷದಲ್ಲಿ ನಾನು ಪಟ್ಟ ಶ್ರಮಕ್ಕೆ ನಿಮ್ಮ ಒಂದು ಮತ ಆಶೀರ್ವಾದ ಆಗಲಿದೆ. ಮುಂದಿನ ದಿನಗಳಲ್ಲಿ ಕೂಡ ನೀವು ಭಯಮುಕ್ತರಾಗಿ ಜೀವನ ನಡೆಸಲು ಅದು ಭರವಸೆಯೂ ಹೌದು ಎಂದು ಹೇಳಿದ್ದಾರೆ.

ಉತ್ತರಪ್ರದೇಶಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿದ್ದು, ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮುಂಜಾನೆಯಿಂದ ಮತದಾನ ಶುರುವಾಗಿದೆ. ಇಂದು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಾಮ್ಲಿ, ಹಾಪುರ್, ಗೌತಮ್ ಬುದ್ಧ ನಗರ, ಮುಜಾಫರ್‌ನಗರ, ಮೀರತ್, ಬಾಗ್‌ಪತ್, ಗಾಜಿಯಾಬಾದ್, ಬುಲಂದ್‌ಶಹರ್, ಅಲಿಘರ್, ಮಥುರಾ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಅಂದರೆ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಇಂದು ಮತದಾನ ನಡೆಯಲಿದೆ. ಇಲ್ಲಿ ಜಾಟ್ ಸಮುದಾಯದ ಪ್ರಾಬಲ್ಯವೇ ಇದ್ದು, ಬಿಜೆಪಿ ಪಾಲಿಗೆ ಈ ಸಮುದಾಯದ ಮತಗಳಿಕೆ ಪ್ರಸಕ್ತ ಬಾರಿ ತುಸು ಕಷ್ಟವಾಗಬಹುದು. ಯಾಕೆಂದರೆ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರಬಲ ಹೋರಾಟ ನಡೆಸಿದ್ದು ಇದೇ ಜಾಟ್​ ಸಮುದಾಯದವರೇ ಆಗಿದ್ದರು.

ಇದನ್ನೂ ಓದಿ: UP Assembly Election 2022: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಪ್ರಾರಂಭ; ಮುಂಜಾನೆಯಿಂದಲೇ ಮತಗಟ್ಟೆಗೆ ಜನರ ಆಗಮನ

Published On - 8:14 am, Thu, 10 February 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ