AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಕೂಡಲೆ ಪ್ರೇಮಿಯ ಜೊತೆ ವಧು ಪರಾರಿ; ಸೋನಂ ರೀತಿ ಕೊಲ್ಲಲಿಲ್ಲವಲ್ಲ ಎಂದು ನಿಟ್ಟುಸಿರು ಬಿಟ್ಟ ಗಂಡ!

ಉತ್ತರ ಪ್ರದೇಶದ ಬದೌನ್‌ನಲ್ಲಿ ನವವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಓಡಿಹೋಗಿದ್ದಾಳೆ. ರಾಜ ರಘುವಂಶಿಯ ರೀತಿ ಹೆಂಡತಿ ನನ್ನನ್ನು ಕೊಲ್ಲಲಿಲ್ಲವಲ್ಲ ಎಂದು ಆಕೆಯ ಗಂಡ ನಿಟ್ಟುಸಿರು ಬಿಟ್ಟಿದ್ದಾರೆ. ಮದುವೆಯಾದ ಕೆಲವೇ ದಿನಗಳಲ್ಲಿ ನವವಿವಾಹಿತ ಮಹಿಳೆ ತನ್ನ ಪ್ರಿಯಕರನೊಂದಿಗೆ ಓಡಿಹೋಗಿದ್ದಾಳೆ. ಆಕೆಯ ಪತಿ ಕಾನೂನು ಕ್ರಮ ಕೈಗೊಳ್ಳುವ ಬದಲು ಸದ್ಯ ನನ್ನ ಜೀವಕ್ಕೆ ಆಪತ್ತು ತರಲಿಲ್ಲವಲ್ಲ ಎಂದು ಆಕೆಯನ್ನು ಆಕೆಯ ಇಷ್ಟದಂತೆ ಬದುಕಲು ಬಿಟ್ಟಿದ್ದಾಳೆ.

ಮದುವೆಯಾದ ಕೂಡಲೆ ಪ್ರೇಮಿಯ ಜೊತೆ ವಧು ಪರಾರಿ; ಸೋನಂ ರೀತಿ ಕೊಲ್ಲಲಿಲ್ಲವಲ್ಲ ಎಂದು ನಿಟ್ಟುಸಿರು ಬಿಟ್ಟ ಗಂಡ!
Sunil
ಸುಷ್ಮಾ ಚಕ್ರೆ
|

Updated on:Jun 17, 2025 | 8:27 PM

Share

ನವದೆಹಲಿ, ಜೂನ್ 17: ಮೊದಲೆಲ್ಲ ಮದುವೆಯಾದ ಮಹಿಳೆ ಗಂಡನನ್ನು ಬಿಟ್ಟು ಓಡಿಹೋದರೆ ಅದು ದೊಡ್ಡ ಸುದ್ದಿಯಾಗುತ್ತಿತ್ತು. ಆದರೆ, ಇತ್ತೀಚೆಗೆ ವಿವಾಹಿತ ಮಹಿಳೆಯರು ತಮ್ಮ ಗಂಡನನ್ನು ಕೊಲ್ಲುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ, ಹೆಂಡತಿ ತಮ್ಮನ್ನು ಬದುಕಲು ಬಿಟ್ಟರೆ ಸಾಕು ಎಂದುಕೊಳ್ಳುವ ಗಂಡಂದಿರು ಹೆಚ್ಚಾಗಿದ್ದಾರೆ. ಇದೀಗ ಉತ್ತರ ಪ್ರದೇಶದ ಮಹಿಳೆ ಪ್ರಿಯಕರನೊಂದಿಗೆ ಓಡಿಹೋಗಿದ್ದಾಳೆ. ಆದರೆ, ಆಕೆಯ ಗಂಡ ಪೊಲೀಸರಿಗೆ ದೂರು ಕೊಡುವ ಬದಲು ಆಕೆ ಹೋಗಿದ್ದೇ ಒಳ್ಳೆಯದಾಯಿತು ಎಂದು ಸುಮ್ಮನಾಗಿದ್ದಾನೆ. ಸದ್ಯ ರಾಜ ರಘುವಂಶಿಯನ್ನು (Raja Raghuvanshi) ಆತನ ಹೆಂಡತಿ ಕೊಲೆ ಮಾಡಿದಂತೆ ನನ್ನ ಹೆಂಡತಿ ನನ್ನನ್ನು ಕೊಲ್ಲದೆ ಬಿಟ್ಟು ಹೋಗಿದ್ದಾಳಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಮದುವೆಯಾಗಿ ಕೆಲವು ದಿನಗಳ ನಂತರ ಮಹಿಳೆ ಪ್ರಿಯಕರನೊಂದಿಗೆ ಪತ್ನಿ ಓಡಿಹೋಗಿದ್ದಾಳೆ. ಮೇಘಾಲಯದಲ್ಲಿ ತನ್ನ ಪತ್ನಿಯಿಂದ ಹನಿಮೂನ್ ಸಮಯದಲ್ಲಿ ಕೊಲೆಯಾದ ಇಂದೋರ್ ವ್ಯಕ್ತಿಯ ರಾಜ ರಘುವಂಶಿಯಂತೆ ನಾನು ಕೊನೆಯಾಗಲಿಲ್ಲವಲ್ಲ, ಆದ್ದರಿಂದ ನಾನು ಸಂತೋಷವಾಗಿದ್ದೇನೆ ಎಂದು ಆಕೆಯ ಗಂಡ ಹೇಳಿದ್ದಾರೆ.

ಇದನ್ನೂ ಓದಿ: ಮೇಘಾಲಯದ ಹನಿಮೂನ್​ನಲ್ಲಿ ಕೊಲೆ; ನಾನೇ ಗಂಡ ರಾಜ ರಘುವಂಶಿಯನ್ನು ಕೊಂದಿದ್ದೆಂದು ಒಪ್ಪಿಕೊಂಡ ಸೋನಂ

20 ವರ್ಷದ ಮಹಿಳೆ ಮೇ 17ರಂದು 23 ವರ್ಷದ ಸುನಿಲ್ ಅವರನ್ನು ವಿವಾಹವಾಗಿದ್ದಳು. 9 ದಿನಗಳ ಕಾಲ ತನ್ನ ಅತ್ತೆಯ ಮನೆಯಲ್ಲಿದ್ದ ಆಕೆ ನಂತರ ತನ್ನ ತಾಯಿಯ ಮನೆಗೆ ತೆರಳಿದಳು. ಅಲ್ಲಿಂದ ಆಕೆ ವಾಪಾಸ್ ಬರಲೇ ಇಲ್ಲ. ಅದರ ಬದಲು, ಅವಳು ಮದುವೆಯಾದ 10 ದಿನಗಳ ನಂತರ ತನ್ನ ಪ್ರಿಯಕರನೊಂದಿಗೆ ಓಡಿಹೋದಳು. ಸೋಮವಾರ, ಆ ಮಹಿಳೆ ಪೊಲೀಸ್ ಠಾಣೆಗೆ ಹೋಗಿ ತಾನು ತನ್ನ ಪ್ರಿಯಕರನೊಂದಿಗೆ ವಾಸಿಸಲು ಬಯಸುವುದಾಗಿ ಘೋಷಿಸಿದಳು. ಪೊಲೀಸರು ಮತ್ತು ಅವರ ಕುಟುಂಬದ ಸದಸ್ಯರ ಮುಂದೆ ಆಕೆ ಈ ಹೇಳಿಕೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮದುವೆಯ ಸಮಯದಲ್ಲಿ ವಿನಿಮಯ ಮಾಡಿಕೊಂಡ ಉಡುಗೊರೆಗಳನ್ನು, ಆಭರಣಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಹಿಂದಿರುಗಿಸಿದ ನಂತರ ಎರಡೂ ಕುಟುಂಬಗಳು ಬೇರೆಯಾಗಲು ಒಪ್ಪಿಕೊಂಡಿದ್ದರಿಂದ ಪೊಲೀಸರು ಈ ವಿಷಯವನ್ನು ಇತ್ಯರ್ಥಪಡಿಸಿದರು. ಎರಡೂ ಕಡೆಯವರು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ: ಮೇಘಾಲಯದಲ್ಲಿ ಕೊಲೆಗೂ ಮೊದಲಿನ ರಾಜ ರಘುವಂಶಿಯ ಕೊನೆಯ ವಿಡಿಯೋ ಬಯಲು

ಈ ಬಗ್ಗೆ ಮಾತನಾಡಿರುವ ಆಕೆಯ ಗಂಡ ಸುನಿಲ್, “ನಮ್ಮ ಹನಿಮೂನ್​ಗಾಗಿ ನಾನು ಅವಳನ್ನು ನೈನಿತಾಲ್‌ಗೆ ಕರೆದೊಯ್ಯಲು ಪ್ಲಾನ್ ಮಾಡಿದ್ದೆ. ಆದರೆ ಅವಳು ತನ್ನ ಪ್ರಿಯಕರನೊಂದಿಗೆ ಇರಲು ಬಯಸಿದರೆ ನಾನು ಕೂಡ ಸಂತೋಷವಾಗಿದ್ದೇನೆ. ನನ್ನ ಜೀವ ಕೂಡ ರಾಜಾ ರಘುವಂಶಿಯಂತೆ ಕೊನೆಗೊಂಡಿಲ್ಲವಲ್ಲ ಎಂದು ನನಗೆ ಸಂತೋಷವಾಗಿದೆ. ಈಗ ನಾವು ಮೂವರೂ ಸಂತೋಷವಾಗಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:27 pm, Tue, 17 June 25

ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು