AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನ್ಯಾಕೆ ಸಾಯ್ಬಾರ್ದು ಎಂದು ಗಂಡ ಕೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಗಂಡ ನೀನ್ಯಾಕೆ ಸಾಯ್ಬಾರ್ದು ಎಂದು ಕೇಳಿದ್ದಕ್ಕೆ ಮನನೊಂದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಲ್ಲವನ್ನೂ ಫೋನ್​ನಲ್ಲಿ ರೆಕಾರ್ಟ್​ ಮಾಡಿದ್ದಾಳೆ, ತನ್ನ ಪತಿ, ಮಾವ ಮತ್ತು ಅತ್ತಿಗೆ ವಿರುದ್ಧ ಆರೋಪಿಸಿದ್ದಾಳೆ.

ನೀನ್ಯಾಕೆ ಸಾಯ್ಬಾರ್ದು ಎಂದು ಗಂಡ ಕೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಮಹಿಳೆ ಸಾವುImage Credit source: NDTV
ನಯನಾ ರಾಜೀವ್
|

Updated on: May 25, 2025 | 12:47 PM

Share

ಮೊರಾದಾಬಾದ್, ಮೇ 25: ಗಂಡ ನೀನ್ಯಾಕೆ ಸಾಯ್ಬಾರ್ದು ಎಂದು ಕೇಳಿದ್ದಕ್ಕೆ ಮನನೊಂದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಲ್ಲವನ್ನೂ ಫೋನ್​ನಲ್ಲಿ ರೆಕಾರ್ಟ್​ ಮಾಡಿದ್ದಾಳೆ, ತನ್ನ ಪತಿ, ಮಾವ ಮತ್ತು ಅತ್ತಿಗೆ ವಿರುದ್ಧ ಆರೋಪಿಸಿದ್ದಾಳೆ.

ಅಮ್ರೀನ್ ಜಹಾನ್ ಸುಮಾರು ನಾಲ್ಕು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ಅವರ ಪತಿ ಬೆಂಗಳೂರಿನಲ್ಲಿ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಮ್ರೀನ್ ತನ್ನ ಕುಟುಂಬದೊಂದಿಗೆ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದರು. ಗರ್ಭಪಾತವಾದ ನಂತರ ತನ್ನ ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರು ಎಂದು ಆಕೆ ಆರೋಪಿಸಿದ್ದಾಳೆ.

ಮಾಡುವ ಪ್ರತಿ ಕೆಲಸದಲ್ಲೂ ತಪ್ಪು ಹುಡುಕುತ್ತಾರೆ, ನಾನು ಮಲಗುವ ಕೋಣೆಯ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸುತ್ತಾರೆ.ನನ್ನ ಅತ್ತಿಗೆ ಖತೀಜಾ, ನನ್ನ ಮಾವ ಶಾಹಿದ್ ನನ್ನ ಸಾವಿಗೆ ಕಾರಣ.ನನ್ನ ಗಂಡ ಕೂಡ ಭಾಗಶಃ ಜವಾಬ್ದಾರ. ಅವನು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಎಲ್ಲವೂ ನನ್ನ ತಪ್ಪು ಎಂದು ಅವನು ಕೂಡ ಭಾವಿಸುತ್ತಾನೆ.

ಅವನ ತಂದೆ ಮತ್ತು ಸಹೋದರಿ ಆತನಿಗೆ ಹೇಳಿದ್ದನ್ನು ಮಾತ್ರ ಆತ ಕೇಳುತ್ತಾನೆ ಇದೆಲ್ಲವನ್ನೂ ನನಗೆ ಸಹಿಸಿಕೊಂಡಿರಲಾಗದು ಎಂದು ಹೇಳಿದ್ದಾಳೆ. ಪತಿ ಮತ್ತು ಅತ್ತೆ ,ಮಾವ ನನಗೆ ಸಾಯುವಂತೆ ಒತ್ತಡ ಹೇರಿದ್ದರು. ನನ್ನ ಗಂಡ ನನ್ನ ಬಳಿ ನೀನು ಯಾಕೆ ಸಾಯಬಾರದು ಎಂದು ಕೇಳಿದ್ದ.

ಮತ್ತಷ್ಟು ಓದಿ: ಮಕ್ಕಳಾಗಲಿಲ್ಲವೆಂದು ಸೊಸೆಯನ್ನ ಕೊಂದ ಅತ್ತೆ-ಮಾವ: ಕೊಲೆಗೆ ಮಾಸ್ಟರ್​ ಪ್ಲ್ಯಾನ್​ ಮಾಡಿದ್ದ ಗಂಡ

ತಾನು ಅಸ್ವಸ್ಥಳಾಗಿದ್ದಾಗ ಚಿಕಿತ್ಸೆಗೆ ಹಣ ನೀಡುವ ಮೂಲಕ ತಪ್ಪು ಮಾಡಿದ್ದೇವೆ ಎಂದು ತನ್ನ ಅತ್ತೆ-ಮಾವ ಹೇಳಿದ್ದರು. ಅವರು ಖರ್ಚು ಮಾಡಿದ ಹಣವನ್ನು ಹಿಂದಿರುಗಿಸಲು ನನ್ನನ್ನು ಕೇಳಿದ್ದರು.ಆದರೆ ನನ್ನ ಬಳಿಯಾಗಲಿ ಗಂಡನ ಬಳಿಯಾಗಲೀ ಅಷ್ಟು ಹಣವಿಲ್ಲ, ಇದ್ದಿದ್ದರೆ ನಿಮ್ಮ ಬಳಿ ಏಕೆ ಕೇಳುತ್ತಿದ್ದೆ ಎಂದು ಮಹಿಳೆ ಉತ್ತರ ಕೊಟ್ಟಿದ್ದಾಗಿ ಬರೆದಿದ್ದಾಳೆ.

ಪೊಲೀಸರು ಅಮ್ರೀನ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆಕೆಯ ತಂದೆ ಸಲೀಂ ಪೊಲೀಸ್ ದೂರು ದಾಖಲಿಸಿದ್ದಾರೆ. ಅಮ್ರೀನ್ ನಿನ್ನೆ ತನಗೆ ಕರೆ ಮಾಡಿ ಅಳುತ್ತಿದ್ದಳು ಎಂದು ಅವರು ಹೇಳಿದ್ದಾರೆ.ತನ್ನ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂದು ಆಕೆ ಹೇಳಿಕೊಂಡಿದ್ದಾಳೆ ಮತ್ತು ತನ್ನನ್ನು ರಕ್ಷಿಸುವಂತೆ ಬೇಡಿಕೊಂಡಿದ್ದಾಳೆ ಎಂದು ಹೇಳಿದ್ದಾರೆ.ಅಮ್ರೀನ್ ತಂದೆ ಆಕೆ ಮನೆಗೆ ಬರುವಷ್ಟರಲ್ಲಿ ಆಕೆ ತಪ್ಪು ಹೆಜ್ಜೆ ಇಟ್ಟಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!