AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದಾ ಹತ್ಯೆ: ಲಿವ್-ಇನ್ ಸಂಬಂಧದಲ್ಲಿದ್ದ ಮಗಳು, ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ತಂದೆ

ಮುಜಾಫರ್​​ನಗರದಲ್ಲಿರುವ ಕಾಡೊಂದರಲ್ಲಿ ಮಹಿಳೆಯ ಅರೆಬೆಂದ ಶವ ಪತ್ತೆಯಾಗಿತ್ತು. ಇದೀಗ ಅದು ಮರ್ಯಾದಾ ಹತ್ಯೆ ಎಂಬುದು ತಿಳಿದುಬಂದಿದೆ. ಯುವತಿ ಲಿವ್ ಇನ್ ಸಂಬಂಧದಲ್ಲಿದ್ದರು, ಅದು ತಿಳಿದ ಬಳಿಕ ಕೋಪಗೊಂಡ ತಂದೆ ತನ್ನ ಮಗನ ಜತೆ ಸೇರಿ ಮಗಳ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಯುವತಿ ಗುರುಗ್ರಾಮದ ಇ-ಕಾಮರ್ಸ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ತನ್ನ ಗ್ರಾಮದ ಅಮಿತ್ ಎಂಬ ವ್ಯಕ್ತಿಯೊಂದಿಗೆ ಆಕೆ ಲಿವ್-ಇನ್ ಸಂಬಂಧದಲ್ಲಿದ್ದಳು. ಪೊಲೀಸರ ಪ್ರಕಾರ, ಮಹಿಳೆ ತನ್ನ ಕುಟುಂಬವನ್ನು ತಮ್ಮ ಸಂಬಂಧವನ್ನು ಒಪ್ಪಿಕೊಳ್ಳುವಂತೆ ಮನವೊಲಿಸಲು ಮನೆಗೆ ಮರಳಿದ್ದಳು

ಮರ್ಯಾದಾ ಹತ್ಯೆ: ಲಿವ್-ಇನ್ ಸಂಬಂಧದಲ್ಲಿದ್ದ ಮಗಳು, ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ತಂದೆ
ಸಂಬಂಧ
ನಯನಾ ರಾಜೀವ್
|

Updated on: Jun 10, 2025 | 1:15 PM

Share

ಗುರುಗ್ರಾಮ, ಜೂನ್ 10: ಮುಜಾಫರ್​​ನಗರದಲ್ಲಿರುವ ಕಾಡೊಂದರಲ್ಲಿ ಮಹಿಳೆಯ ಅರೆಬೆಂದ ಶವ ಪತ್ತೆಯಾಗಿತ್ತು. ಇದೀಗ ಅದು ಮರ್ಯಾದಾ ಹತ್ಯೆ(Murder) ಎಂಬುದು ತಿಳಿದುಬಂದಿದೆ. ಯುವತಿ ಲಿವ್ ಇನ್ ಸಂಬಂಧದಲ್ಲಿದ್ದರು, ಅದು ತಿಳಿದ ಬಳಿಕ ಕೋಪಗೊಂಡ ತಂದೆ ತನ್ನ ಮಗನ ಜತೆ ಸೇರಿ ಮಗಳ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ಯುವತಿ ಗುರುಗ್ರಾಮದ ಇ-ಕಾಮರ್ಸ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ತನ್ನ ಗ್ರಾಮದ ಅಮಿತ್ ಎಂಬ ವ್ಯಕ್ತಿಯೊಂದಿಗೆ ಆಕೆ ಲಿವ್-ಇನ್ ಸಂಬಂಧದಲ್ಲಿದ್ದರು. ಪೊಲೀಸರ ಪ್ರಕಾರ, ಮಹಿಳೆ ತನ್ನ ಕುಟುಂಬವನ್ನು ತಮ್ಮ ಸಂಬಂಧವನ್ನು ಒಪ್ಪಿಕೊಳ್ಳುವಂತೆ ಮನವೊಲಿಸಲು ಮನೆಗೆ ಮರಳಿದ್ದಳು.

ಆಕೆ 2019 ರಲ್ಲಿ ಮದುವೆಯಾಗಿದ್ದರು ಆದರೆ ಎರಡು ವರ್ಷಗಳ ನಂತರ ಪತಿಯನ್ನು ತೊರೆದಿದ್ದರು. ಆಕೆಯ ಕುಟುಂಬ 2022 ರಲ್ಲಿ ಮತ್ತೊಂದು ಮದುವೆಗೆ ಪ್ರಯತ್ನಿಸಿತು, ಆದರೆ ಅದು ಫಲ ನೀಡಲಿಲ್ಲ. ಅದೇ ವರ್ಷ ಗುರುಗ್ರಾಮದಲ್ಲಿ ಅಮಿತ್ ಜತೆ ವಾಸಿಸಲು ಶುರು ಮಾಡಿದ್ದರು. ಉದ್ವಿಗ್ನತೆಯ ಹೊರತಾಗಿಯೂ ತನ್ನ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದರು.

ಮತ್ತಷ್ಟು ಓದಿ: ಲಕ್ನೋ: ಮಕ್ಕಳ ಜಗಳ ತಪ್ಪಿಸಲು ಹೋದ ಮಹಿಳೆಯ ಬರ್ಬರ ಹತ್ಯೆ

ಮೇ 26 ರಂದು ಅಮಿತ್ ಜೊತೆ ಕೊನೆಯದಾಗಿ ಮಾತನಾಡಿದ್ದರು, ತನ್ನ ಕುಟುಂಬದವರ ಮನಸ್ಸು ಗೆಲ್ಲುವ ತನ್ನ ಕೊನೆಯ ಪ್ರಯತ್ನ ಎಂದು ಹೇಳಿದ್ದಳು. ಮೇ 29–30 ರ ರಾತ್ರಿ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆಕೆಯ ತಂದೆ ರಾಜವೀರ್ ಸಿಂಗ್ (55) ಮತ್ತು ಸಹೋದರ ಸುಮಿತ್ ಸಿಂಗ್ (24) ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಶವವನ್ನು 5 ಕಿ.ಮೀ ದೂರದ ಕಾಡಿಗೆ ತೆಗೆದುಕೊಂಡು ಹೋಗಿ, ಅದರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು.

ಎರಡು ದಿನಗಳ ನಂತರ, ತನಿಖೆಯನ್ನು ಗೊಂದಲಗೊಳಿಸಲು ಕುಟುಂಬವು ಆಕೆ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿತ್ತು. ಆದರೆ ಜೂನ್ 3 ರಂದು, ಪೊಲೀಸರು ಕಾಲುವೆಯ ಬಳಿ ಅರೆಬೆಂದ ಶವ ಪತ್ತೆಯಾಗಿತ್ತು.ಆದರೆ ಗುರುತಿಸುವುದು ಕಷ್ಟಕರವಾಗಿತ್ತು.

ಆದರೆ ಕಾನ್‌ಸ್ಟೆಬಲ್ ಮತ್ತು SHO ಆಕೆಯ ಕೈಯಲ್ಲಿದ್ದ ಬಳೆಗಳನ್ನು ಗಮನಿಸಿದರು ಮತ್ತು ಅವುಗಳನ್ನು ಆಕೆಯ ಹಿಂದಿನ ಫೋಟೋಗೆ ಹೊಂದಿಸಿದರು. ಇದು ಮಹಿಳೆಯ ಗುರುತನ್ನು ದೃಢಪಡಿಸಲು ಸಹಾಯ ಮಾಡಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!