AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಸ್‌ಪಿ ಕುರಿತು ಸ್ವಾಮಿನಾಥನ್ ಸಲಹೆಯನ್ನು ಯುಪಿಎ ತಿರಸ್ಕರಿಸಿತ್ತು: ಶಿವರಾಜ್ ಸಿಂಗ್ ಚೌಹಾಣ್

ಚೌಹಾಣ್ ಹೇಳಿಕೆಗೆ ಗುಡುಗಿದ ವಿಪಕ್ಷ, ಸಚಿವರು "ನೇರವಾದ" ಪ್ರಶ್ನೆಯನ್ನು ವಿಷಯಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಚೌಹಾಣ್, ಎಂಎಸ್‌ಪಿ ಕೃಷಿ ವೆಚ್ಚದ ಮೇಲೆ 50% ಆದಾಯವನ್ನು ನೀಡಬೇಕು ಎಂಬ ಸ್ವಾಮಿನಾಥನ್ ಆಯೋಗದ ಶಿಫಾರಸನ್ನು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ತಿರಸ್ಕರಿಸಿತ್ತು ಎಂದಿದ್ದಾರೆ.

ಎಂಎಸ್‌ಪಿ ಕುರಿತು ಸ್ವಾಮಿನಾಥನ್ ಸಲಹೆಯನ್ನು ಯುಪಿಎ ತಿರಸ್ಕರಿಸಿತ್ತು: ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
|

Updated on: Jul 26, 2024 | 8:45 PM

Share

ದೆಹಲಿ ಜುಲೈ 26: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಕುರಿತ ಸಮಿತಿಯ ವರದಿಗಾಗಿ ಸರ್ಕಾರ ಇನ್ನೂ ಕಾಯುತ್ತಿದೆ. ಅದರ ಅಭಿಪ್ರಾಯಗಳನ್ನು ಸ್ವೀಕರಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಶುಕ್ರವಾರ ರಾಜ್ಯಸಭೆಗೆ ತಿಳಿಸಿದರು. ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಎಂಎಸ್‌ಪಿಗಳಿಗೆ ಕಾನೂನು ಖಾತರಿ ನೀಡಲು ಕೇಂದ್ರವು ಕಾನೂನನ್ನು ತರುತ್ತದೆಯೇ ಎಂಬ ಸಮಾಜವಾದಿ ಪಕ್ಷದ (SP) ರಾಮ್‌ಜಿ ಲಾಲ್ ಸುಮನ್ ಅವರ ಪ್ರಶ್ನೆಗೆ ಚೌಹಾಣ್ ಈ ಉತ್ತರ ನೀಡಿದ್ದಾರೆ.

ಮೋದಿ ನೇತೃತ್ವದ ಹಿಂದಿನ ಸರ್ಕಾರವು 2020-21ರಲ್ಲಿ ಎಂಎಸ್ ಪಿಗಾಗಿ ಒತ್ತಾಯಿಸಿ ರೈತರ ಒಂದು ವರ್ಷದ ಆಂದೋಲನದ ನಂತರ ಎಂಎಸ್‌ಪಿ ಸಮಿತಿಯನ್ನು ಸ್ಥಾಪಿಸಿತ್ತು. MSP ಎನ್ನುವುದು ಫೆಡರಲ್-ನಿಗದಿತ ನೆಲದ ಬೆಲೆಯಾಗಿದ್ದು, ರೈತರಿಂದ ಸಂಕಷ್ಟದ ಮಾರಾಟವನ್ನು ತಪ್ಪಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ. “ನಿರ್ದಿಷ್ಟ ಉದ್ದೇಶಗಳೊಂದಿಗೆ ಸಮಿತಿಯನ್ನು ರಚಿಸಲಾಗಿದೆ. ಇದು ರೈತರಿಗೆ ಎಂಎಸ್‌ಪಿಯನ್ನು ಖಾತ್ರಿಪಡಿಸುವುದುಅಲ್ಲದೆ, ಕೃಷಿ ವೆಚ್ಚಗಳು ಮತ್ತು ಬೆಲೆಗಳಿಗಾಗಿ ಆಯೋಗಕ್ಕೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡಲು ಮತ್ತು ಹೆಚ್ಚಿನ ಮಾರುಕಟ್ಟೆ ಬೆಲೆ ಸಿಗುವಂತೆ ಸಹಾಯ ಮಾಡುತ್ತದೆ ಎಂದಿದ್ದಾರೆ ಚೌಹಾಣ್.

ಚೌಹಾಣ್ ಹೇಳಿಕೆಗೆ ಗುಡುಗಿದ ವಿಪಕ್ಷ, ಸಚಿವರು “ನೇರವಾದ” ಪ್ರಶ್ನೆಯನ್ನು ವಿಷಯಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಚೌಹಾಣ್, ಎಂಎಸ್‌ಪಿ ಕೃಷಿ ವೆಚ್ಚದ ಮೇಲೆ 50% ಆದಾಯವನ್ನು ನೀಡಬೇಕು ಎಂಬ ಸ್ವಾಮಿನಾಥನ್ ಆಯೋಗದ ಶಿಫಾರಸನ್ನು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ತಿರಸ್ಕರಿಸಿತ್ತು ಎಂದಿದ್ದಾರೆ.

ಜುಲೈ 28, 2007 ರಿಂದ ಕ್ಯಾಬಿನೆಟ್ ಟಿಪ್ಪಣಿಯನ್ನು ಉಲ್ಲೇಖಿಸಿದ ಚೌಹಾಣ್, ಕಾಂಗ್ರೆಸ್ ನೇತೃತ್ವದ ಸರ್ಕಾರವು ಎಂಎಸ್ ಪಿ ಸಲಹೆಯನ್ನು ಜಾರಿಗೆ ತರಲು ನಿರಾಕರಿಸಿತು.

ಸ್ವಾಮಿನಾಥನ್ ವರದಿಯ ಶಿಫಾರಸಿನ ಮೇರೆಗೆ ಎಂಎಸ್‌ಪಿ ವೆಚ್ಚದ ಮೇಲೆ 50% ಆದಾಯವನ್ನು ನೀಡಬೇಕು, ಯುಪಿಎ (ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್) ಸರ್ಕಾರವು ಸ್ಪಷ್ಟವಾಗಿ ಹೇಳಿದೆ. ಈ ಸಲಹೆಯನ್ನು ಅನುಷ್ಠಾನಗೊಳಿಸುವುದರಿಂದ ಮಾರುಕಟ್ಟೆ ಅಲ್ಲೋಲಕಲ್ಲೋಲವಾಗಬಹುದು ಎಂದು ನಾನು ಕ್ಯಾಬಿನೆಟ್ ಟಿಪ್ಪಣಿಗಳನ್ನು ಉಲ್ಲೇಖಿಸುತ್ತಿದ್ದೇನೆ ಎಂದಿದ್ದಾರೆ ಚೌಹಾಣ್.

ಸ್ವಾಮಿನಾಥನ್ ಸಮಿತಿಯ ಶಿಫಾರಸಿನ ಪ್ರಕಾರ ಕೇಂದ್ರವು ಎಂಎಸ್‌ಪಿಗಳಿಗೆ ಕಾನೂನು ಖಾತರಿ ನೀಡಲು ಹೊರಟಿದೆಯೇ ಎಂದು ಶಾಸಕ ಸುಮನ್ ಅವರ ಪ್ರಶ್ನೆಯಲ್ಲಿ ಕೇಳಿದಾಗ ಸ್ವಾಮಿನಾಥನ್ ವರದಿಯನ್ನು ಚೌಹಾಣ್ ಉಲ್ಲೇಖಿಸಿದ್ದಾರೆ.

ಆದಾಗ್ಯೂ, ಸ್ವಾಮಿನಾಥನ್ ಸಮಿತಿಯು ಎಂಎಸ್‌ಪಿಗಳನ್ನು ಬೆಂಬಲಿಸುವ ಕಾನೂನನ್ನು ಎಂದಿಗೂ ಉಲ್ಲೇಖಿಸಲಿಲ್ಲ. ಆದರೆ ಎಂಎಸ್ ಪಿ ತೂಕದ ಸರಾಸರಿ ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ 50% ಹೆಚ್ಚು ಇರಬೇಕು ಎಂದು ಶಿಫಾರಸು ಮಾಡಿದೆ. 2018-19 ರ ಬಜೆಟ್‌ನಲ್ಲಿ, ಮೋದಿ ಸರ್ಕಾರವು ಎಂಎಸ್‌ಪಿ ನಿಗದಿಪಡಿಸುವುದಾಗಿ ಘೋಷಿಸಿತು, ಅಂದರೆ ಕೃಷಿಕರು 50% ಆದಾಯವನ್ನು ಪಡೆಯುತ್ತಾರೆ.

ಇದನ್ನೂ ಓದಿ: ಯುಪಿ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ‘ದಾಳ’: ಅಖಿಲೇಶ್ ಯಾದವ್

ಸಚಿವರು ನಿರ್ದಿಷ್ಟ ಪ್ರಶ್ನೆಗೆ ಉತ್ತರಿಸುವ ಬದಲು ವಿಷಯಾಂತರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರತಿಭಟಿಸಿದ್ದಾರೆ. “ಎಂಎಸ್‌ಪಿ ಸಮಿತಿಗಾಗಿ ನೀವು ಎಷ್ಟು ದಿನ ಕಾಯುತ್ತೀರಿ? ನೀವು ಕಾನೂನು ಖಾತರಿ ನೀಡುತ್ತೀರಾ ಅಥವಾ ಇಲ್ಲವೇ? ಎಂದು ಸುಮನ್ ಕೇಳಿದಾಗ ಕೇಂದ್ರ ಸಚಿವರು, “ರೈತರು ನಮಗೆ ದೇವರಿದ್ದಂತೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ನಮ್ಮ ಸರ್ಕಾರವು ಕೃಷಿ ಆದಾಯವನ್ನು ಸುಧಾರಿಸಲು ಮತ್ತು ಅವುಗಳನ್ನು ದ್ವಿಗುಣಗೊಳಿಸಲು ಪ್ರಯತ್ನಿಸುತ್ತದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​