AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಎಫೆಕ್ಟ್! ಡಿಜಿಟಲ್ ವಹಿವಾಟು ಹೆಂಗಿದೆ ಗೊತ್ತಾ?

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿನ ಹಾವಳಿಯಿಂದ ಲಾಕ್​ಡೌನ್ ಇದ್ದಿದ್ದರ ಪರಿಣಾಮ ಡಿಜಿಟಲ್ ವಹಿವಾಟು ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ಜೂನ್ ತಿಂಗಳಲ್ಲಿ 1.34 ಬಿಲಿಯನಷ್ಟು UPI ಡಿಜಿಟಲ್ ವಹಿವಾಟು ನಡೆದಿದೆ.   ಭಾರತಕ್ಕೆ ಕೊರೊನಾ ಸೋಂಕು ಕಾಲಿಡುವ ಮುನ್ನ, ಅಂದರೆ ಫೆಬ್ರವರಿ ತಿಂಗಳಲ್ಲಿ 1.32 ಬಿಲಿಯನಷ್ಟು UPI ಡಿಜಿಟಲ್ ವಹಿವಾಟು ನಡೆದಿತ್ತು. ಆದರೆ ಲಾಕ್‌ಡೌನ್ ಕಾರಣದಿಂದಾಗಿ ಏಪ್ರಿಲ್‌ನಲ್ಲಿ ಡಿಜಿಟಲ್ ವಹಿವಾಟು ಕೊಂಚ ಇಳಿಕೆ ಕಂಡಿತ್ತು. ನಂತರ ಮೇ ತಿಂಗಳಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡಿತ್ತು. ಡಿಜಿಟಲ್ ವಹಿವಾಟು ಬಯಸದೆ […]

ಲಾಕ್​ಡೌನ್ ಎಫೆಕ್ಟ್! ಡಿಜಿಟಲ್ ವಹಿವಾಟು ಹೆಂಗಿದೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Aug 04, 2020 | 12:32 PM

Share

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿನ ಹಾವಳಿಯಿಂದ ಲಾಕ್​ಡೌನ್ ಇದ್ದಿದ್ದರ ಪರಿಣಾಮ ಡಿಜಿಟಲ್ ವಹಿವಾಟು ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ಜೂನ್ ತಿಂಗಳಲ್ಲಿ 1.34 ಬಿಲಿಯನಷ್ಟು UPI ಡಿಜಿಟಲ್ ವಹಿವಾಟು ನಡೆದಿದೆ.   ಭಾರತಕ್ಕೆ ಕೊರೊನಾ ಸೋಂಕು ಕಾಲಿಡುವ ಮುನ್ನ, ಅಂದರೆ ಫೆಬ್ರವರಿ ತಿಂಗಳಲ್ಲಿ 1.32 ಬಿಲಿಯನಷ್ಟು UPI ಡಿಜಿಟಲ್ ವಹಿವಾಟು ನಡೆದಿತ್ತು. ಆದರೆ ಲಾಕ್‌ಡೌನ್ ಕಾರಣದಿಂದಾಗಿ ಏಪ್ರಿಲ್‌ನಲ್ಲಿ ಡಿಜಿಟಲ್ ವಹಿವಾಟು ಕೊಂಚ ಇಳಿಕೆ ಕಂಡಿತ್ತು. ನಂತರ ಮೇ ತಿಂಗಳಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡಿತ್ತು.

ಡಿಜಿಟಲ್ ವಹಿವಾಟು ಬಯಸದೆ ಬಂದ ಭಾಗ್ಯ ಫೆಬ್ರವರಿಯಲ್ಲಿ 2.22 ಲಕ್ಷ ಕೋಟಿ ರೂ.ವಹಿವಾಟು ನಡೆದಿತ್ತು. ಅದಕ್ಕೆ ಹೋಲಿಸಿದರೆ ಜೂನ್ ತಿಂಗಳಲ್ಲಿ 2.61 ಲಕ್ಷ ಕೋಟಿ ವಹಿವಾಟು ನಡೆದಿದೆ ಎಂದು UPI ಅನ್ನು ನಿರ್ವಹಿಸುತ್ತಿರುವ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮಾಹಿತಿಯ ನೀಡಿದೆ. ಜೂನ್‌ನಲ್ಲಿ ಭಾರತ್ ಬಿಲ್ ಪೇ ಮೂಲಕ ಅಗತ್ಯ ವಸ್ತುಗಳು, ಔಷಧಿ ಮತ್ತು ದಿನಸಿ ಶಾಪಿಂಗ್‌ ಹೆಚ್ಚಾದ ಕಾರಣದಿಂದಾಗಿ 17 ಮಿಲಿಯನ್ ವಹಿವಾಟು ಅಂದರೆ ಸುಮಾರು 2,970 ಕೋಟಿ ರೂ. ವಹಿವಾಟು ನಡೆದಿದ್ದರಿಂದ ಚೇತರಿಕೆ ಕಂಡಿದೆ ಎನ್ನಲಾಗಿದೆ.

ನಾವು ಫೆಬ್ರವರಿ ತಿಂಗಳ ವಹಿವಾಟಿಗೆ ಹತ್ತಿರದಲ್ಲಿದ್ದೇವೆ, ಜೊತೆಗೆ ಈ ನಾಲ್ಕು ತಿಂಗಳಲ್ಲಿ ಡಿಜಿಟಲ್ ಹಣ ವಹಿವಾಟು ಕೊಂಚ ಇಳಿಮುಖ ಕಂಡಿದೆ. ಇನ್ನು ಮುಂದೆ ದೇಶದ ದೊಡ್ಡ ನಗರಗಳಲ್ಲಿನ ಆರ್ಥಿಕ ಚಟುವಟಿಕೆ ಹೀಗೆಯೇ ಮುಂದುವರೆಯುತ್ತದೆಂದು ನಾವು ಭಾವಿಸಿದ್ದೇವೆ, ಇದು ಮುಂಬರುವ ತಿಂಗಳುಗಳಲ್ಲಿ ಡಿಜಿಟಲ್ ಪಾವತಿಗಳ ಬೆಳವಣಿಗೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಯುಪಿಐ ಮತ್ತು ರುಪೇನಲ್ಲಿ ಶೂನ್ಯ ವ್ಯಾಪಾರಿ ದರ ರಿಯಾಯಿತಿ ಅಥವಾ MDR ಅನ್ನು ಪರಿಶೀಲಿಸಲು ನಾವು ಸರ್ಕಾರದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು NPCI, ಎಂಡಿ ಮತ್ತು CEO ದಿಲೀಪ್ ಅಸ್ಬೆ ಹೇಳಿದ್ದಾರೆ.

ದೇಶದ ಹೆಚ್ಚಿನ ಭಾಗಗಳಲ್ಲಿ ಆಫ್‌ಲೈನ್ ಮತ್ತು ಆನ್‌ಲೈನ್ ವ್ಯಾಪಾರಗಳು ಈಗ ತೆರೆದಿವೆ, ಹಾಗೆಯೇ ಕಳೆದ 3 ತಿಂಗಳುಗಳಲ್ಲಿ ಹೊಸ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ರೀಚಾರ್ಜ್‌ಗಳು ಮತ್ತು ಬಿಲ್ ಪಾವತಿಗಳ ಸಂಖ್ಯೆ ಹೆಚ್ಚಾಗಿದೆಯೆಂದು ಫೋನ್‌ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ ನಿಗಮ್ ಹೇಳಿದರು.

Published On - 12:29 pm, Tue, 4 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್