AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ವರ್ಷಗಳ ಅಧಿಕಾರಾವಧಿ ಬಾಕಿ ಇರುವಾಗಲೇ, ಯುಪಿಎಸ್​ಸಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

UPSC Chairperson Manoj Soni Resigns: ಪೂಜಾ ಖೇಡ್ಕರ್​ ವಿವಾದದ ನಡುವೆ ಕೇಂದ್ರ ಲೋಕಸೇವಾ ಆಯೋಗ(UPSC)ದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತು, ಐದು ವರ್ಷಗಳಿರುವಾಗಲೇ ಅವರು ರಾಜೀನಾಮೆ ನೀಡಿದ್ದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

ಐದು ವರ್ಷಗಳ ಅಧಿಕಾರಾವಧಿ ಬಾಕಿ ಇರುವಾಗಲೇ, ಯುಪಿಎಸ್​ಸಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ
ಮನೋಜ್ ಸೋನಿ
Follow us
ನಯನಾ ರಾಜೀವ್
| Updated By: ಡಾ. ಭಾಸ್ಕರ ಹೆಗಡೆ

Updated on:Jul 20, 2024 | 11:10 AM

ಪೂಜಾ ಖೇಡ್ಕರ್​ ವಿವಾದದ ನಡುವೆ ಕೇಂದ್ರ ಲೋಕಸೇವಾ ಆಯೋಗ(UPSC)ದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತು, ಐದು ವರ್ಷಗಳಿರುವಾಗಲೇ ಅವರು ರಾಜೀನಾಮೆ ನೀಡಿದ್ದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

ಮನೋಜ್ ಸೋನಿ ರಾಜೀನಾಮೆಗೂ ಪೂಜಾ ಖೇಡ್ಕರ್ ವಿವಾದಕ್ಕೂ ಸಂಬಂಧವಿಲ್ಲ ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಪೂಜಾ ಖೇಡ್ಕರ್ ಅವರ ಘಟನೆ ನಡೆದ ನಂತರ ಸಾಮಾಜಿಕ ಜಾಲತಾಣದಲ್ಲಿ ಮತ್ತು ಹೊರಗೆ ತುಂಬಾ ಜನ ಕೇಂದ್ರ ಲೋಕಸೇವಾ ಆಯೋಗದ ಯೂ ಪಿ ಎಸ್​ ಸಿ)  ಕಾರ್ಯಕ್ಷಮತೆ ಬಗ್ಗೆ ಪ್ರಶ್ನೆ ಎತ್ತಿದ್ದರು. ಹಣ ಮತ್ತು ರಾಜಕೀಯ ಪ್ರಭಾವ ಇದ್ದರೆ ಯೂ ಪಿ ಎಸ್​ ಸಿ ಯಲ್ಲಿ ಒಳ್ಳೇ  ರಾಂಕಿಂಗ್ ಸಿಗುತ್ತೆ ಎಂಬ ​ಮಾತು ದೊಡ್ಡದಾಗಿ ಕೇಳಿ ಬಂದಿರುವ ಸಮಯದಲ್ಲಿಯೇ  ಸೋನಿಯವರು ರಾಜೀನಾಮೆ ನೀಡಿರುವುದು ಕಾಕತಾಳೀಯವೇನು ಅಲ್ಲ. ಯಾಕೆಂದರೆ, ಸೋಮವಾರದಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ. ವಿರೋಧ ಪಕ್ಷಗಳು ಯೂ ಪಿ ಎಸ್​ ಸಿ ವಿಚಾರ ಎತ್ತಿಕೊಂಡು ಮತ್ತೆ ಸರಕಾರದ ಮುಜುಗರ ಉಂಟುಮಾಡುವ ಸಾಧ್ಯತೆ ಇದೆ. ಅದನ್ನು ತಪ್ಪಿಸಿಕೊಳ್ಳಲು ಈ ರೀತಿ ಕ್ರಮಕ್ಕೆ ಸರಕಾರವೇ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿ ಪ್ರಕಾರ ಮನೋಜ್ ಸೋನಿ ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸೋನಿ 2017ರಲ್ಲಿ ಆಯೋಗದ ಸದಸ್ಯರಾಗಿ ಸೇರಿದ್ದರು. ಮೇ 16, 2023ರಂದು ಅವರನ್ನು ಯುಪಿಎಸ್​ಸಿ ಅಧ್ಯಕ್ಷರನ್ನಾಗಿ ಮಾಡಲಾಯಿತು. ಅವರು ಒಂದು ತಿಂಗಳ ಹಿಂದೆ ರಾಜೀನಾಮೆ ನೀಡಿದ್ದರು ಆದರೆ, ಅವರು ರಿಲೀವ್ ಆಗುತ್ತಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ನೂತನ ಅಧ್ಯಕ್ಷರ ಹೆಸರನ್ನು ಸರ್ಕಾರ ಪ್ರಕಟಿಸಿಲ್ಲ.

ಯುಪಿಎಸ್​ಸಿ ಸೇರುವ ಮೊದಲು ಅವರು ಎರಡು ವಿಶ್ವವಿದ್ಯಾಲಯಗಳ ಕುಲಪತಿಯೂ ಆಗಿದ್ದರು.

ಯುಪಿಎಸ್​ಸಿ ಕೆಲಸವೇನು? ಕೇಂದ್ರ ಸರ್ಕಾರದ ಪರವಾಗಿ ನಾಗರಿಕ ಸೇವಾ ಪರೀಕ್ಷೆಗಳು ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸುವಲ್ಲಿ ಕೇಂದ್ರ ಲೋಕಸೇವಾ ಆಯೋಗವು ಪ್ರಮುಖ ಪಾತ್ರವಹಿಸುತ್ತದೆ. ಈ ಸಂಸ್ಥೆಯು ಸಾಮಾನ್ಯವಾಗಿ ಐಎಎಸ್​, ಐಎಫ್​ಎಸ್​, ಐಪಿಎಸ್ ಮತ್ತು ಕೇಂದ್ರ ಸೇವೆಗಳಲ್ಲಿ ಪ್ರತಿಷ್ಠಿತ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶಿಫಾರಸು ಮಾಡುತ್ತದೆ.

ಪೂಜಾ ಖೇಡ್ಕರ್ ಪ್ರಕರಣದ ನಂತರ ಯುಪಿಎಸ್​ಸಿ ಚರ್ಚೆಯಲ್ಲಿದೆ ಯುಪಿಎಸ್​ಸಿ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​ ವಿರುದ್ಧದ ಆರೋಪದ ನಂತರ ಯುಪಿಎಸ್​ಸಿ ಸುದ್ದಿಯಲ್ಲಿದೆ. ಅವರು ನಾಗರಿಕ ಸೇವೆಗಳ ಪ್ರವೇಶ ಪಡೆಯಲು ತಮ್ಮ ದಾಖಲೆಗಳನ್ನು ನಕಲು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಮನೋಜ್ ಸೋನಿ ಹಾಗೂ ಈ ಪ್ರಕರಣಕ್ಕೆ ಸಂಬಂಧವಿಲ್ಲ ಎನ್ನಲಾಗುತ್ತಿದೆ. ಸಧ್ಯಕ್ಕೆ ಪೂಜಾ ತರಬೇತಿಯನ್ನು ತಡೆಹಿಡಿಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:38 am, Sat, 20 July 24

ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ