Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC CSE Main 2020 Result: ಯುಪಿಎಸ್​ಸಿ ಸಿವಿಲ್ ಸರ್ವೀಸಸ್​ 2020ರ ಫಲಿತಾಂಶ ಪ್ರಕಟ

UPSC CSE Main 2020 Result: ಆಯೋಗದ ಅಧಿಕೃತ ಜಾಲತಾಣವಾದ upsc.gov.in ಮೂಲಕ ಫಲಿತಾಂಶವನ್ನು ಅಭ್ಯರ್ಥಿಗಳು ಪರಿಶೀಲಿಸಿಕೊಳ್ಳಬಹುದು. ಕಳೆದ ಜನವರಿ 8ರಿಂದ 17ರವರೆಗೆ ಯುಪಿಎಸ್​ಸಿ ಪರೀಕ್ಷೆಗಳು ನಡೆದಿದ್ದವು.

UPSC CSE Main 2020 Result: ಯುಪಿಎಸ್​ಸಿ ಸಿವಿಲ್ ಸರ್ವೀಸಸ್​ 2020ರ ಫಲಿತಾಂಶ ಪ್ರಕಟ
ಯುಪಿಎಸ್​ಸಿ ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 23, 2021 | 8:32 PM

ಕೇಂದ್ರ ಲೋಕಸೇವಾ ಆಯೋಗವು (Union Public Service Commission – UPSC) ನಾಗರಿಕ ಸೇವಾ ಪರೀಕ್ಷೆಗಳ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಮಂಗಳವಾರ (ಮಾರ್ಚ್ 23) ರಾತ್ರಿ ಪ್ರಕಟಿಸಿದೆ. ಆಯೋಗದ ಅಧಿಕೃತ ಜಾಲತಾಣವಾದ upsc.gov.in ಮೂಲಕ ಫಲಿತಾಂಶವನ್ನು ಅಭ್ಯರ್ಥಿಗಳು ಪರಿಶೀಲಿಸಿಕೊಳ್ಳಬಹುದು. ಕಳೆದ ಜನವರಿ 8ರಿಂದ 17ರವರೆಗೆ ಯುಪಿಎಸ್​ಸಿ ಪರೀಕ್ಷೆಗಳು ನಡೆದಿದ್ದವು.

ಲಿಖಿತ ಪರೀಕ್ಷೆ ಎದುರಿಸಿ, ತೇರ್ಗಡೆಯಾದ ಎಲ್ಲ ಅಭ್ಯರ್ಥಿಗಳೂ ವ್ಯಕ್ತಿತ್ವ ಪರೀಕ್ಷೆಗಾಗಿ ಸಂದರ್ಶನಕ್ಕೆ (ಪರ್ಸನಾಲಿಟಿ ಟೆಸ್ಟ್) ಹಾಜರಾಗಬೇಕಿದೆ. ಸಂದರ್ಶನದಲ್ಲಿ ತೇರ್ಗಡೆಯಾದವರನ್ನು ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್​ಎಸ್​), ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಮತ್ತು ಕೇಂದ್ರ ಸರ್ಕಾರದ ಇತರ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ಕೇಂದ್ರ ಸರ್ಕಾರ ಪರಿಗಣಿಸಲಿದೆ. ಫಲಿತಾಂಶ ಪರಿಶೀಲಿಸಲು ಅಭ್ಯರ್ಥಿಗಳು ಹೀಗೆ ಮಾಡಬೇಕು.

ಯುಪಿಎಸ್​ಸಿ ನಾಗರಿಕ ಸೇವೆಗಳ ಫಲಿತಾಂಶ ತಿಳಿಯೋದು ಹೇಗೆ? – ಯುಪಿಎಸ್​ಸಿಯ ಅಧಿಕೃತ ವೆಬ್​ಸೈಟ್​ upsc.gov.in ಗೆ ಭೇಟಿ ನೀಡಿ. – ಹೋಂ ಪೇಜ್​ನಲ್ಲಿರುವ UPSC Civil Services Result 2020 link ಮೇಲೆ ಕ್ಲಿಕ್ ಮಾಡಿ – ಓಪನ್ ಆಗುವ ಪಿಡಿಎಫ್​ ಫೈಲ್​ನಲ್ಲಿ ನಿಮ್ಮ ರೋಲ್​ ನಂಬರ್​ ಇದೆಯೇ ನೋಡಿಕೊಳ್ಳಿ – ಇದೇ ಪಿಡಿಎಫ್​ ಫೈಲ್ ಅನ್ನು ಡೌನ್​ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದು ಇರಿಸಿಕೊಳ್ಳಬಹುದು.

ಲಿಖಿತ ಪರೀಕ್ಷೆ ತೇರ್ಗಡೆಯಾಯಿತು ಮುಂದೇನು? ಲಿಖಿತ ಪರೀಕ್ಷೆ ತೇರ್ಗಡೆಯಾದ ಎಲ್ಲ ಅಭ್ಯರ್ಥಿಗಳೂ ಮುಂದಿನ ದಿನಗಳಲ್ಲಿ ಮತ್ತೊಂದು ವಿವರವಾದ ಅರ್ಜಿಯನ್ನು ಭರ್ತಿ ಮಾಡಬೇಕು. ಮಾರ್ಚ್ 25ರಿಂದ ಏಪ್ರಿಲ್ 5ರವರೆಗೆ ಈ ಅರ್ಜಿ ಯುಪಿಎಸ್​ಸಿ ವೆಬ್​ಸೈಟ್​ನಲ್ಲಿ ಲಭ್ಯವಿರಲಿದೆ. ತೇರ್ಗಡೆಯಾದ ಅಭ್ಯರ್ಥಿಗಳ ಪರ್ಸನಾಲಿಟಿ ಟೆಸ್ಟ್ ದೆಹಲಿಯ ಯುಪಿಎಸ್​ಸಿ ಕಚೇರಿಯಲ್ಲಿ​ ಶೀಘ್ರ ಆರಂಭವಾಗಲಿದೆ. ಪರ್ಸನಾಲಿಟಿ ಟೆಸ್ಟ್​ನಲ್ಲಿ ಪಾಲ್ಗೊಳ್ಳಬೇಕಾದ ಅಭ್ಯರ್ಥಿಗಳಿಗೆ ಇ-ಕರೆಯೋಲೆಯನ್ನು (e-Summon) ಯುಪಿಎಸ್​ಸಿ ವೆಬ್​ಸೈಟ್​ನಲ್ಲಿ ಶೀಘ್ರ ಸಿಗುವಂತೆ ಮಾಡಲಾಗುತ್ತದೆ.

ಸಂದರ್ಶನದಲ್ಲಿ ಫೇಲ್ ಆದರೂ ಹಲವು ಅನುಕೂಲ ಭಾರತೀಯ ನಾಗರಿಕ ಸೇವೆ ಪರೀಕ್ಷೆಗಳಿಗೆ (Indian Civil Service Examination) ನೋಂದಣಿ ಮಾಡಿಕೊಂಡವರು ಪ್ರಾಥಮಿಕ (ಪ್ರಿಲಿಮಿನರಿ) ಮತ್ತು ಮುಖ್ಯ ಪರೀಕ್ಷೆಗಳಲ್ಲಿ (ಮೇನ್ಸ್​) ಮುನ್ನಡೆ ಸಾಧಿಸಿ, ಸಂದರ್ಶನದ ಹಂತದಲ್ಲಿ ವಿಫಲರಾದರೂ ಕೇಂದ್ರ ಸರ್ಕಾರದ ಆಡಳಿತ ವ್ಯವಸ್ಥೆ, ಸರ್ಕಾರಿ / ಖಾಸಗಿ ಸಂಸ್ಥೆಗಳು, ಉದ್ಯಮಗಳಲ್ಲಿ ಉನ್ನತ ಹುದ್ದೆಗಳು ಸಿಗುವಂತೆ ಅವಕಾಶ ಮಾಡಿಕೊಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.

ಹಲವು ವರ್ಷಗಳಿಂದ ಚರ್ಚೆಯ ಹಂತದಲ್ಲಿಯೇ ಇದ್ದ ಕೇಂದ್ರ ಲೋಕಸೇವಾ ಆಯೋಗದ (Union Public Service Commission – UPSC) ಈ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅದರಂತೆ ಈ ವರ್ಷದಿಂದ ಕೇಂದ್ರ ಲೋಕಸೇವಾ ಆಯೋಗವು ಪ್ರಿಲಿಮಿನರಿ ಮತ್ತು ಮೇನ್ಸ್​ನಲ್ಲಿ ತೇರ್ಗಡೆಯಾಗಿ, ಸಂದರ್ಶನದಲ್ಲಿ ವಿಫಲರಾಗುವ ಅಭ್ಯರ್ಥಿಗಳ ಅಂಕಗಳಿಕೆ ಮತ್ತು ಇತರ ವಿವರಗಳನ್ನು ಆಯೋಗವು ಸಾರ್ವಜನಿಕವಾಗಿ ಪ್ರಕಟಿಸುತ್ತದೆ. ಈ ಮಾಹಿತಿಯನ್ನು ಬಳಸಿಕೊಳ್ಳುವ ಇತರ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳು ಇಂಥ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವಾಗ ಆದ್ಯತೆ ನೀಡುವುದು ನಿರೀಕ್ಷಿತ.

2021ರ ಸಾಲಿನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ ಕಳೆದ ವರ್ಷ ಕೊರೊನಾ ಸೋಂಕು ಹರಡುವುದಕ್ಕೆ ತಡೆಯೊಡ್ಡಲೆಂದು ಜಾರಿ ಮಾಡಿದ ಲಾಕ್​ಡೌನ್ ಕಾರಣದಿಂದಾಗಿ ಐಎಎಸ್​ ಕನಸು ಹೊತ್ತಿದ್ದ ಆಕಾಂಕ್ಷಿಗಳು ತುಸು ಹಿನ್ನಡೆ ಅನುಭವಿಸುವಂತಾಯಿತು. ಈ ವರ್ಷ ಮತ್ತೆ ಐಎಎಸ್​ ಪರ್ವ ಆರಂಭವಾಗಿದೆ. ಭಾರತೀಯ ಆಡಳಿತ ಸೇವೆ (Indian Administration Service – IAS) ಮತ್ತು ಭಾರತೀಯ ಅರಣ್ಯ ಸೇವೆ (Indian Forest Service – IFS) ಪರೀಕ್ಷೆಗಳಿಗೆ ಯುಪಿಎಸ್​ಸಿ ಮಾರ್ಚ್​​ 4ರಂದೇ ಅಧಿಸೂಚನೆ ಹೊರಡಿಸಿದೆ. ಎರಡೂ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್​ 24 ಕೊನೆಯ ದಿನ. ಈ ವರ್ಷದ ಐಎಎಸ್​ / ಐಎಫ್​ಎಸ್ ಪರೀಕ್ಷೆಗಳ ಬಗ್ಗೆ ನೀವು ತಿಳಿದಿರಬೇಕಾದ ಮಾಹಿತಿ ಇಲ್ಲಿದೆ..

ಇದನ್ನೂ ಓದಿ: UPSC Exam 2021: ಐಎಎಸ್ ಪರೀಕ್ಷೆ ಕಟ್ಟಿದವರು ಸಂದರ್ಶನದಲ್ಲಿ ಫೇಲ್ ಆದರೂ ಹಲವು ಅನುಕೂಲ

ಇದನ್ನೂ ಓದಿ: UPSC Calendar: ಐಎಎಸ್​, ಐಎಫ್​ಎಸ್​ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನ

Published On - 8:27 pm, Tue, 23 March 21

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ