AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flight Hijack: ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿದ ಪ್ರಯಾಣಿಕನ ಬಂಧನ, ಹೀಗೆ ಮಾಡಲು ಕಾರಣವೇನು?

ದುಬೈನಿಂದ ಜೈಪುರಕ್ಕೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನ ಅಪಹರಣವಾಗಿರುವ ಬಗ್ಗೆ ಸುಳ್ಳು ಟ್ವೀಟ್ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

Flight Hijack: ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿದ ಪ್ರಯಾಣಿಕನ ಬಂಧನ, ಹೀಗೆ ಮಾಡಲು ಕಾರಣವೇನು?
ವಿಮಾನ
ನಯನಾ ರಾಜೀವ್
|

Updated on: Jan 27, 2023 | 7:44 AM

Share

ದುಬೈನಿಂದ ಜೈಪುರಕ್ಕೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನ ಅಪಹರಣವಾಗಿರುವ ಬಗ್ಗೆ ಸುಳ್ಳು ಟ್ವೀಟ್ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಈ ಸುದ್ದಿ ತಿಳಿದ ತಕ್ಷಣ ಅಧಿಕಾರಿಗಳು ಮತ್ತು ಪೊಲೀಸರು ಕಾರ್ಯಾಚರಣೆಗೆ ಇಳಿದರು. ಆದರೆ ಅಪಹರಣದ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ.

ಇದಾದ ಬಳಿಕ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ಪ್ರಯಾಣಿಕನನ್ನು ಬಂಧಿಸಿದ್ದಾರೆ. ಪೊಲೀಸ್ ಉಪ ಕಮಿಷನರ್ (ವಿಮಾನ ನಿಲ್ದಾಣ) ರವಿಕುಮಾರ್ ಸಿಂಗ್ ಮಾಹಿತಿ ನೀಡಿದ್ದು, ರಾಜಸ್ಥಾನದ ನಾಗೌರ್ ನಿವಾಸಿ ಮೋತಿ ಸಿಂಗ್ ರಾಥೋಡ್ ಅವರು ದುಬೈ-ಜೈಪುರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ವಿಮಾನವು ಇಂದಿರಾಗಾಂಧಿ ಏರ್​ಪೋರ್ಟ್​ಗೆ ತಲುಪಿತ್ತು.

ಮತ್ತಷ್ಟು ಓದಿ: ವಿಮಾನ ಅಪಹರಣ: ವಾಲ್‌ಮಾರ್ಟ್‌ ಕಟ್ಟಡಕ್ಕೆ ಡಿಕ್ಕಿ ಹೊಡೆಸುವ ಬೆದರಿಕೆ ಹಾಕಿದ್ದ ಯುವ ಪೈಲಟ್​ ಅಂತೂ ವಿಮಾನವನ್ನು ಕೆಳಗಿಳಿಸಿದ!

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು 9:45 ಕ್ಕೆ ಇಳಿಯಿತು ಮತ್ತು ಮಧ್ಯಾಹ್ನ 1:40 ಕ್ಕೆ ಟೇಕ್ ಆಫ್ ಮಾಡಲು ಅನುಮತಿ ನೀಡಲಾಯಿತು. ಪೊಲೀಸರ ಪ್ರಕಾರ, ರಾಥೋಡ್ ಏತನ್ಮಧ್ಯೆ, ವಿಮಾನ ಹೈಜಾಕ್ ಎಂದು ಟ್ವೀಟ್ ಮಾಡಿದ್ದಾರೆ. ರಾಥೋಡ್ ಅವರ ಲಗೇಜ್‌ಗಳೊಂದಿಗೆ ವಿಮಾನದಿಂದ ಆಫ್‌ಲೋಡ್ ಆಗಿದ್ದಾರೆ ಮತ್ತು ಅಗತ್ಯ ತಪಾಸಣೆಯ ನಂತರ ವಿಮಾನವು ಹಾರಾಟ ನಡೆಸಿತು, ನಂತರ ಮುಂದಿನ ಕ್ರಮಕ್ಕಾಗಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಪೊಲೀಸರ ಪ್ರಕಾರ, ವಿಮಾನ ವಿಳಂಬದಿಂದ ಬೇಸರಗೊಂಡು ಟ್ವೀಟ್ ಮಾಡಿದ್ದೇನೆ ಎಂದು ಆರೋಪಿ ಹೇಳಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ