Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ನಾಗ್ಪುರ್: ಹಣಕಾಸು ಬಿಕ್ಕಟ್ಟಿನಿಂದ ಬೇಸತ್ತು ಪತ್ನಿ, ಮಗನೊಂದಿಗೆ ಕಾರಲ್ಲಿ ಕುಳಿತು ಬೆಂಕಿ ಹಚ್ಚಿದ ವ್ಯಕ್ತಿ

ಭಟ್ ಮನೆಯಿಂದ ಆತ್ಮಹತ್ಯಾ ಟಿಪ್ಪಣಿ ಪತ್ತೆಯಾಗಿದ್ದು ಆರ್ಥಿಕ ಸಮಸ್ಯೆಯಿಂದಾಗಿ ನಾನು ಬದುಕು ಕೊನೆಗೊಳಿಸುತ್ತಿದ್ದೇನೆ ಎಂದು ಅದರಲ್ಲಿ ಬರೆದಿದೆ

Watch ನಾಗ್ಪುರ್: ಹಣಕಾಸು ಬಿಕ್ಕಟ್ಟಿನಿಂದ ಬೇಸತ್ತು ಪತ್ನಿ, ಮಗನೊಂದಿಗೆ ಕಾರಲ್ಲಿ ಕುಳಿತು ಬೆಂಕಿ ಹಚ್ಚಿದ ವ್ಯಕ್ತಿ
ಹೊತ್ತಿ ಉರಿದ ಕಾರು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 20, 2022 | 12:35 PM

ನಾಗ್ಪುರ್(ಮಹಾರಾಷ್ಟ್ರ): ಹಣಕಾಸು ಬಿಕ್ಕಟ್ಟಿನಿಂದ (financial crisis) ನೊಂದ ಮಹಾರಾಷ್ಟ್ರ(Maharashtra) ನಾಗ್ಪುರ್​​ನ (Nagpur)  ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಗನನ್ನು ಕಾರಲ್ಲಿ ಕೂರಿಸಿಕೊಂಡು ಕಾರಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ ಬೆಲ್ಟಾರೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಖಾಪ್ರಿ ಪುನರ್​​ವಾಸನ್ ಪ್ರದೇಶದಲ್ಲಿ ರಾಮರಾಜ್ ಗೋಪಾಲಕೃಷ್ಣ ಭಟ್(58) ಎಂಬವರು ಪತ್ನಿ ಸಂಗೀತಾ ಭಟ್ (55) ಮತ್ತು ಮಗ ನಂದನ್​​ನ್ನು(30) ಕಾರಲ್ಲಿ ಕೂರಿಸಿ ಬೆಂಕಿ ಹಚ್ಚಿದ್ದರು. ಈ ಘಟನೆಯಲ್ಲಿ ಪತ್ನಿ ಮತ್ತು ಪುತ್ರನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏತನ್ಮಧ್ಯೆ ಗೋಪಾಲಕೃಷ್ಣ ಭಟ್ ಸಾವಿಗೀಡಾಗಿದ್ದಾರೆ. ಭಟ್ ಮನೆಯಿಂದ ಆತ್ಮಹತ್ಯಾ ಟಿಪ್ಪಣಿ ಪತ್ತೆಯಾಗಿದ್ದು ಆರ್ಥಿಕ ಸಮಸ್ಯೆಯಿಂದಾಗಿ ನಾನು ಬದುಕು ಕೊನೆಗೊಳಿಸುತ್ತಿದ್ದೇನೆ ಎಂದು ಅದರಲ್ಲಿ ಬರೆದಿದೆ.

ರಾಮರಾಜ್ ಭಟ್ ಅವರು ಊಟಕ್ಕಾಗಿ ಹೋಟೆಲ್​​ಗೆ ಹೋಗೋಣ ಎಂದು ತನ್ನ ಕುಟುಂಬವನ್ನು ಕಾರಲ್ಲಿ ಕರೆತಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಕಾರಿಗೆ ಬೆಂಕಿ ಹತ್ತಿಕೊಂಡ ಕೂಡಲೇ ಪತ್ನಿ ಮತ್ತು ಮಗ ಕಾರಿನ ಬಾಗಿಲು ತೆರೆದು ಹೊರ ಬಂದಿದ್ದಾರೆ. ಆದರೆ ಭಟ್ ಕಾರಲ್ಲೇ ಸುಟ್ಟು ಸಾವಿಗೀಡಾಗಿದ್ದಾರೆ. ಭಟ್ ವಿರುದ್ಧ ಬೆಲ್ಟಾರೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ